AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vegetable Price: ನಿರಂತರ ಮಳೆ: ತರಕಾರಿ ಲಭ್ಯತೆ ಕಡಿಮೆ, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

ಬೀನ್ಸ್, ಕ್ಯಾರೆಟ್, ಟೊಮೆಟೊ ದರ ದಿನೇದಿನೆ ಹೆಚ್ಚಾಗುತ್ತಿದೆ.

Vegetable Price: ನಿರಂತರ ಮಳೆ: ತರಕಾರಿ ಲಭ್ಯತೆ ಕಡಿಮೆ, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:May 17, 2022 | 7:40 AM

Share

ಮೈಸೂರು: ಕಳೆದ ಐದಾರು ದಿನಗಳಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಳೆ ಹಿನ್ನೆಲೆಯಲ್ಲಿ ವಿವಿಧ ತರಕಾರಿಗಳ ಲಭ್ಯತೆ ಕಡಿಮೆಯಾಗಿದ್ದು, ಬೆಲೆ ನಿರಂತರವಾಗಿ ಏರಿಕೆ ಕಾಣುತ್ತಿದೆ. ಬೀನ್ಸ್, ಕ್ಯಾರೆಟ್, ಟೊಮೆಟೊ ದರ ದಿನೇದಿನೆ ಹೆಚ್ಚಾಗುತ್ತಿದೆ. ಒಂದು ಕೆಜಿ ತರಕಾರಿ ಬೆಲೆಯು ₹ 40ರಷ್ಟು ಹೆಚ್ಚಾಗಿದೆ. ಮದುವೆ, ಶುಭ ಸಮಾರಂಭ ನಡೆಸುವವರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಮಳೆ ಆರ್ಭಟ ಮುಂದುವರಿದರೆ ಬೆಲೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿಯೂ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. 15 ರೂಪಾಯಿಗೆ ಸಿಗುತ್ತಿದ್ದ ಟೊಮೆಟೊ ಒಂದೇ ವಾರದಲ್ಲಿ 80 ರೂಪಾಯಿ ದಾಟಿದೆ. ಬೀನ್ಸ್, ಸೋಪ್ಪು ಸೇರಿದಂತೆ ಇತರ ತರಕಾರಿಗಳ ಬೆಲೆಯೂ ಹೆಚ್ಚಾಗಿದೆ. ಮಳೆ ಹಿನ್ನೆಲೆ ತರಕಾರಿ ಬೆಳೆ ಬೆಳೆಯಲು ಸಮಸ್ಯೆಯಾಗುತ್ತಿದೆ. ಇನ್ನು ಕೆಲವೆಡೆ ಬೆಳೆ ಮಳೆ ನೀರಿನಲ್ಲಿ ಕೊಚ್ಚಿ ಹೋಗಿವೆ. ಹೊಲ, ಗದ್ದೆಗಳು ಕೆರೆಯಂತಾಗುತ್ತಿರುವ ಕಾರಣ ಕೊಯ್ಲು ಮಾಡಲು ಸಾಧ್ಯವಾಗುತ್ತಿಲ್ಲ. ಹೊಲದಲ್ಲಿ ಬೆಳೆದಿರುವ ತರಕಾರಿ, ಹಣ್ಣುಗಳನ್ನು ಮಾರುಕಟ್ಟೆಗೆ ತರಲು ಕಷ್ಟವಾಗುತ್ತಿದೆ. ತರಕಾರಿ‌ ಬೆಲೆ ಕೇಳಿ ಗ್ರಾಹಕರು ಬಾಯಿ ಮೇಲೆ ಬೆರಳು ಇಟ್ಟುಕೊಳ್ಳುವಂತಾಗಿದೆ.

ಕರ್ನಾಟಕದ ಬಹುತೇಕ ನಗರ, ಪಟ್ಟಣಗಳಲ್ಲಿ ತರಕಾರಿಗಳ ಬೆಲೆ ಹೀಗಿದೆ; ಬೀನ್ಸ್ -80 ರೂ ಕ್ಯಾರೆಟ್ -80 ರೂ ಬಿಟ್ ರೋಟ್ -30ರೂ ಕ್ಯಾಪ್ಸಿಕಮ್ -60 ರೂ ನವಿಲುಕೋಸು -40 ರೂ ಬೆಂಡೆಕಾಯಿ -30 ರೂ ಶುಂಟಿ -80 ರೂ ಮೆಣಸಿನಕಾಯಿ -80ರೂ ಟೋಮಾಟೋ -80ರೂ ಮೂಲಂಗಿ -30ರೂ ಈರುಳ್ಳಿ -20ರೂ ಬದನೆಕಾಯಿ -40 ರೂ ಕೊತ್ತಂಬರಿ ಸೊಪ್ಪು -40ರೂ

ಹಣ್ಣುಗಳ‌ ಬೆಲೆ ಹೀಗಿದೆ; ಸೇಬು ಕೆಜಿಗೆ -160 ರೂ ದಾಳಿಂಬೆ ಕೆಜಿಗೆ -300 ರೂ ದಾಕ್ಷಿ ಕೆಜಿಗೆ -100 ರೂ ಮಾವಿನ ಹಣ್ಣು -120 ರೂ ಕಿತ್ತಲೆ -120 ರೂ ಅಪೋಟ -70 ರೂ ಬಾಳೆಹಣ್ಣು -70 ರೂ ಸೀಬೆಹಣ್ಣು -60 ರೂ ಮೊಸಂಬಿ -100 ರೂ ಪೈನಪಲ್ -40 ರೂ ಮುಂದಿನ ಒಂದು ತಿಂಗಳಲ್ಲಿ ತರಕಾರಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

ತಾಜಾ ಸುದ್ದಿಗೆ ಲಿಂಕ್ ಕ್ಲಿಕ್ ಮಾಡಿ

Published On - 7:40 am, Tue, 17 May 22

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ