AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vegetable Price: ನಿರಂತರ ಮಳೆ: ತರಕಾರಿ ಲಭ್ಯತೆ ಕಡಿಮೆ, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

ಬೀನ್ಸ್, ಕ್ಯಾರೆಟ್, ಟೊಮೆಟೊ ದರ ದಿನೇದಿನೆ ಹೆಚ್ಚಾಗುತ್ತಿದೆ.

Vegetable Price: ನಿರಂತರ ಮಳೆ: ತರಕಾರಿ ಲಭ್ಯತೆ ಕಡಿಮೆ, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:May 17, 2022 | 7:40 AM

Share

ಮೈಸೂರು: ಕಳೆದ ಐದಾರು ದಿನಗಳಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಳೆ ಹಿನ್ನೆಲೆಯಲ್ಲಿ ವಿವಿಧ ತರಕಾರಿಗಳ ಲಭ್ಯತೆ ಕಡಿಮೆಯಾಗಿದ್ದು, ಬೆಲೆ ನಿರಂತರವಾಗಿ ಏರಿಕೆ ಕಾಣುತ್ತಿದೆ. ಬೀನ್ಸ್, ಕ್ಯಾರೆಟ್, ಟೊಮೆಟೊ ದರ ದಿನೇದಿನೆ ಹೆಚ್ಚಾಗುತ್ತಿದೆ. ಒಂದು ಕೆಜಿ ತರಕಾರಿ ಬೆಲೆಯು ₹ 40ರಷ್ಟು ಹೆಚ್ಚಾಗಿದೆ. ಮದುವೆ, ಶುಭ ಸಮಾರಂಭ ನಡೆಸುವವರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಮಳೆ ಆರ್ಭಟ ಮುಂದುವರಿದರೆ ಬೆಲೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿಯೂ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. 15 ರೂಪಾಯಿಗೆ ಸಿಗುತ್ತಿದ್ದ ಟೊಮೆಟೊ ಒಂದೇ ವಾರದಲ್ಲಿ 80 ರೂಪಾಯಿ ದಾಟಿದೆ. ಬೀನ್ಸ್, ಸೋಪ್ಪು ಸೇರಿದಂತೆ ಇತರ ತರಕಾರಿಗಳ ಬೆಲೆಯೂ ಹೆಚ್ಚಾಗಿದೆ. ಮಳೆ ಹಿನ್ನೆಲೆ ತರಕಾರಿ ಬೆಳೆ ಬೆಳೆಯಲು ಸಮಸ್ಯೆಯಾಗುತ್ತಿದೆ. ಇನ್ನು ಕೆಲವೆಡೆ ಬೆಳೆ ಮಳೆ ನೀರಿನಲ್ಲಿ ಕೊಚ್ಚಿ ಹೋಗಿವೆ. ಹೊಲ, ಗದ್ದೆಗಳು ಕೆರೆಯಂತಾಗುತ್ತಿರುವ ಕಾರಣ ಕೊಯ್ಲು ಮಾಡಲು ಸಾಧ್ಯವಾಗುತ್ತಿಲ್ಲ. ಹೊಲದಲ್ಲಿ ಬೆಳೆದಿರುವ ತರಕಾರಿ, ಹಣ್ಣುಗಳನ್ನು ಮಾರುಕಟ್ಟೆಗೆ ತರಲು ಕಷ್ಟವಾಗುತ್ತಿದೆ. ತರಕಾರಿ‌ ಬೆಲೆ ಕೇಳಿ ಗ್ರಾಹಕರು ಬಾಯಿ ಮೇಲೆ ಬೆರಳು ಇಟ್ಟುಕೊಳ್ಳುವಂತಾಗಿದೆ.

ಕರ್ನಾಟಕದ ಬಹುತೇಕ ನಗರ, ಪಟ್ಟಣಗಳಲ್ಲಿ ತರಕಾರಿಗಳ ಬೆಲೆ ಹೀಗಿದೆ; ಬೀನ್ಸ್ -80 ರೂ ಕ್ಯಾರೆಟ್ -80 ರೂ ಬಿಟ್ ರೋಟ್ -30ರೂ ಕ್ಯಾಪ್ಸಿಕಮ್ -60 ರೂ ನವಿಲುಕೋಸು -40 ರೂ ಬೆಂಡೆಕಾಯಿ -30 ರೂ ಶುಂಟಿ -80 ರೂ ಮೆಣಸಿನಕಾಯಿ -80ರೂ ಟೋಮಾಟೋ -80ರೂ ಮೂಲಂಗಿ -30ರೂ ಈರುಳ್ಳಿ -20ರೂ ಬದನೆಕಾಯಿ -40 ರೂ ಕೊತ್ತಂಬರಿ ಸೊಪ್ಪು -40ರೂ

ಹಣ್ಣುಗಳ‌ ಬೆಲೆ ಹೀಗಿದೆ; ಸೇಬು ಕೆಜಿಗೆ -160 ರೂ ದಾಳಿಂಬೆ ಕೆಜಿಗೆ -300 ರೂ ದಾಕ್ಷಿ ಕೆಜಿಗೆ -100 ರೂ ಮಾವಿನ ಹಣ್ಣು -120 ರೂ ಕಿತ್ತಲೆ -120 ರೂ ಅಪೋಟ -70 ರೂ ಬಾಳೆಹಣ್ಣು -70 ರೂ ಸೀಬೆಹಣ್ಣು -60 ರೂ ಮೊಸಂಬಿ -100 ರೂ ಪೈನಪಲ್ -40 ರೂ ಮುಂದಿನ ಒಂದು ತಿಂಗಳಲ್ಲಿ ತರಕಾರಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

ತಾಜಾ ಸುದ್ದಿಗೆ ಲಿಂಕ್ ಕ್ಲಿಕ್ ಮಾಡಿ

Published On - 7:40 am, Tue, 17 May 22

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ