ಒಕ್ಕಲಿಗರ ಎಚ್ಚರಿಕೆಗೆ ಮಣಿದ ದಸರಾ ಸಮಿತಿ: ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಪ್ರೊ ಭಗವಾನ್‌ಗೆ ಕೊಕ್

| Updated By: ರಮೇಶ್ ಬಿ. ಜವಳಗೇರಾ

Updated on: Oct 15, 2023 | 5:46 PM

ರಾಜ್ಯ ಒಕ್ಕಲಿಗರ ಪಡೆಯ ಪ್ರತಿಭಟನೆ ಎಚ್ಚರಿಕೆಗೆ ಮೈಸೂರು ದಸರಾ ಸಮಿತಿ ಮಣಿದಿದ್ದು, ದಸರಾ ಯುವಕವಿಗೋಷ್ಠಿ ಉದ್ಘಾಟನೆಯಿಂದ ಪ್ರೊ ಭಗವಾನ್‌ಗೆ ಕೊಕ್ ನೀಡಲಾಗಿದೆ. ಹಾಗಾದ್ರೆ, , ದಸರಾ ಯುವಕವಿಗೋಷ್ಠಿಯನ್ನು ಯಾರಿಂದ ಉದ್ಘಾಟನೆ ಮಾಡಿಸಲಾಗುತ್ತೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ಒಕ್ಕಲಿಗರ ಎಚ್ಚರಿಕೆಗೆ ಮಣಿದ ದಸರಾ ಸಮಿತಿ: ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಪ್ರೊ ಭಗವಾನ್‌ಗೆ ಕೊಕ್
ಕೆ.ಎಸ್.ಭಗವಾನ್
Follow us on

ಮೈಸೂರು, (ಅಕ್ಟೋಬರ್ 15): ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು. ಪ್ರೊಫೆಸರ್ ಕೆ.ಎಸ್.ಭಗವಾನ್ (prof KS bhagawan) ನೀಡಿದ ಈ ಹೇಳಿಕೆ ಇದೀಗ ರಾಜ್ಯದಲ್ಲಿ ಕಿಡಿ ಹೊತ್ತಿಸಿದೆ. ಈ ಹೇಳಿಕೆ ನೀಡಿ ಮಾತು ಮುಂದುವರಿಸಿದ ಭಗವಾನ್, ನಂದಲ್ಲಪ್ಪ ಕುವೆಂಪು ಅವರು ಹೇಳಿದ್ದು ಅಂತಾನೂ ಹೇಳಿದ್ದಾರೆ. ಆದ್ರೆ, ಭಗವಾನ್ ಆಡಿದ ಈ ಮಾತಿಗೆ ಒಕ್ಕಲಿಗ ಸಮುದಾಯ ರೊಚ್ಚಿಗೆದ್ದಿದೆ. ಅಲ್ಲದೇ ರಾಜ್ಯ ಒಕ್ಕಲಿಗರ ಪಡೆಯ ಪ್ರತಿಭಟನೆ ಎಚ್ಚರಿಕೆಗೆ ದಸರಾ ಸಮಿತಿ ಮಣಿದಿದ್ದು, ದಸರಾ ಯುವಕವಿಗೋಷ್ಠಿ ಉದ್ಘಾಟನೆಯಿಂದ ಪ್ರೊ ಭಗವಾನ್‌ಗೆ ಕೊಕ್ ನೀಡಲಾಗಿದೆ.

ದಸರಾ ಯುವ ಕವಿಗೋಷ್ಠಿ ಪಟ್ಟಿಯಿಂದ ಪ್ರೊ ಭಗವಾನ್ ಹೆಸರು ಕೈ ಬಿಡಬೇಕು. ಹಾಗೂ ಪ್ರೊ ಭಗವಾನ್ ಮೂಲಕ ಉದ್ಘಾಟನೆ ಮಾಡಿಸದಂತೆ ಒಕ್ಕಲಿಗ ಸಮುದಾಯ ಒತ್ತಾಯಿಸಿತ್ತು. ಒಂದು ವೇಳೆ ಅವರಿಂದ ಉದ್ಘಾಟನೆ ಮಾಡಿಸಿದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿತ್ತು. ಇದಕ್ಕೆ ಮಣಿದು ಮೈಸೂರು ದಸರಾ ಆಚರಣೆ ಸಮಿತಿ, ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಿ ಯುವಕವಿಗೋಷ್ಠಿಯನ್ನು ಪ್ರೊ ಭಗವಾನ್ ಬದಲು ಸಾಹಿತಿ ಡಾ. ಡಿಕೆ ರಾಜೇಂದ್ರ ಅವರಿಂದ ಉದ್ಘಾಟನೆ ಮಾಡಿಸಲು ತೀರ್ಮಾನಿಸಿದೆ.

ಇದನ್ನೂ ಓದಿ: ದಸರಾ ಯುವ ಕವಿಗೋಷ್ಠಿ ಪಟ್ಟಿಯಿಂದ ಪ್ರೊ.ಭಗವಾನ್ ಹೆಸರು ಕೈ ಬಿಡುವಂತೆ ಒತ್ತಾಯಿಸಿ ನಾಳೆ ಒಕ್ಕಲಿಗರಿಂದ ಪ್ರತಿಭಟನೆ

ಮೈಸೂರಿನಲ್ಲಿ ಮೊನ್ನೆ ಮಹಿಷ ಉತ್ಸವದಲ್ಲಿ ಮಾತನಾಡಿದ್ದ ಭಗವಾನ್, ಒಕ್ಕಲಿಗರು ಸಂಸ್ಕೃತಿಹೀನ ಪಶುಗಳು. ಇದನ್ನ ಕುವೆಂಪು ಹೇಳಿದ್ದಾರೆ ಎನ್ನುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇದೀಗ ಭಗವಾನ್ ಅವರ ಈ ಹೇಳಿಕೆ ಒಕ್ಕಲಿಗ ಸಮುದಾಯವನ್ನು ಕೆರಳಿಸಿದ್ದು, ರಸ್ತೆಗಳಿದು ಪ್ರತಿಭಟನೆ ಮಾಡುತ್ತಿದ್ದಾರೆ.

ಭಗವಾನ್ ಹೇಳಿದ್ದೇನು?

ಬುದ್ಧ ಗುರುಗಳು ಜ್ಞಾನವನ್ನು ಕೊಟ್ಟಿದ್ದಾರೆ. ವೈದಿಕರು ಅಜ್ಞಾನವನ್ನು ಸಮಾಜಕ್ಕೆ ಕೊಡುತ್ತಿದ್ದಾರೆ. ಜನಿವಾರದಿಂದ ಜಾತಿ ಗುರುತಿಸುತ್ತಾರೆ. ಹಾಕದವನು ಒಂದು, ಹಾಕಿರುವವರು ಒಂದು. ಕೈಗೆ, ಕಾಲಿಗೆ ಜಾತಿ ಇಟ್ಟಿರುವುದು ಹಿಂದೂ ಧರ್ಮ. ಹಿಂದೂ ಧರ್ಮ ನಮ್ಮ ಧರ್ಮ ಅಲ್ಲ. ನಮ್ಮ ಧರ್ಮ ಬೌದ್ಧ ಧರ್ಮ. ಬ್ರಾಹ್ಮಣರು ವೈದಿಕರು ಬೇರೆ ದೇಶದಿಂದ ಬಂದಿರುವವರು. 2 ಸಾವಿರ ವರ್ಷದಿಂದ ಇವರು ಬೇರೆ ಅವರಿಗೆ ಸಂಸ್ಕೃತ ಕಲಿಸಲಿಲ್ಲ. ಎಲ್ಲಾ ಶೂದ್ರರು ಬ್ರಾಹ್ಮಣರ ಗುಲಾಮರು. ಶೂದ್ರನನ್ನು ದೇವರು ಸೃಷ್ಠಿ ಮಾಡಿರುವುದೆ ಬ್ರಾಹ್ಮಣರ ಸೇವೆ ಮಾಡಲು ಎಂದು‌ ತಿಳಿಸಿದಿದ್ದಾರೆ. ಇಂತಹ ಧರ್ಮ ನಮಗೇಕೆ ಬೇಕಿಲ್ಲ. ಇಂತಹ ಧರ್ಮ ನಮಗೆ ಬೇಡ. ಒಕ್ಕಲಿಗರು ಸಂಸ್ಕೃತಿ ಹೀನರು‌. ಈ ಮಾತು ನನ್ನದು ಅಲ್ಲ‌ ಕುವೆಂಪು ಅವರದ್ದು. ನಾನು ಹೇಳಿದ್ರೆ ನನ್ನ ಹೊಡೆಯುವುದಕ್ಕೆ ಬರುತ್ತಾರೆ. ನಿಜ ಹೇಳಿದವರನ್ನು ಯಾರು ಬಿಡಲ್ಲ. ಆದರೇ ನಿಜ ಹೇಳಿಯೇ ಸಾಯಬೇಕು ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:39 pm, Sun, 15 October 23