AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬಿನಿ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಿಗೆ ಜುಲೈ 15 ರಿಂದ ನೀರು ಬಿಡುಗಡೆ: ಸಚಿವ ಎಸ್.ಟಿ.ಸೋಮಶೇಖರ್

ಕಬಿನಿ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಿಗೆ ಜುಲೈ 15 ರಿಂದ ಹತ್ತು ದಿನಗಳ ಕಾಲ ನಿತ್ಯ 1 ಸಾವಿರ ಕ್ಯೂಸೆಕ್ಸ್ ನೀರು ಹರಿಸಲಾಗುವುದು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಕಬಿನಿ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಿಗೆ ಜುಲೈ 15 ರಿಂದ ನೀರು ಬಿಡುಗಡೆ: ಸಚಿವ ಎಸ್.ಟಿ.ಸೋಮಶೇಖರ್
ಕಬಿನಿ ಜಲಾಶಯ (ಸಂಗ್ರಹ ಚಿತ್ರ)
TV9 Web
| Updated By: ವಿವೇಕ ಬಿರಾದಾರ|

Updated on:Jul 12, 2022 | 8:17 PM

Share

ಮೈಸೂರು: ಕಬಿನಿ ಜಲಾಶಯದ (Kabini Dam) ಅಚ್ಚುಕಟ್ಟು ಪ್ರದೇಶಗಳಿಗೆ ಜುಲೈ 15 ರಿಂದ ಹತ್ತು ದಿನಗಳ ಕಾಲ ನಿತ್ಯ 1 ಸಾವಿರ ಕ್ಯೂಸೆಕ್ಸ್ ನೀರು ಹರಿಸಲಾಗುವುದು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ (ST Somashekar) ಹೇಳಿದ್ದಾರೆ. 2022ರ ಮುಂಗಾರು (Monsoon) ಹಂಗಾಮಿಗೆ ನೀರು ಒದಗಿಸುವ ಕುರಿತು ಜಿಪಂ ಕಚೇರಿಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿ ಮೊದಲಿಗೆ ಕೆರೆ ಕಟ್ಟೆಗಳು ಭರ್ತಿಯಾಗಲು ನೀರು ಹರಿಸಲಾಗುವುದು. ಈಗಾಗಲೇ ಕೆರೆಗಳಲ್ಲಿ 30% ನೀರು ತುಂಬಿದೆ. ಹತ್ತು ದಿನ ಕೆರೆಗಳಿಗೆ ನೀರು ಹರಿಸಿ ನಂತರ ನಾಲೆಗಳಿಗೆ ನೀರು ಹರಿಸುವಂತೆ ಸಚಿವರು ಸೂಚಿಸಿದರು.

ಕಬಿನಿ ಜಲಾಶಯದಲ್ಲಿ 1,08,060, ಹುಲ್ಲಹಳ್ಳಿ ಅಣೆಕಟ್ಟು ನಾಲೆ ಭಾಗದಲ್ಲಿ 14,309 ಎಕರೆ ಪ್ರದೇಶ ಸೇರಿದಂತೆ 1,22,369 ಎಕರೆ ಪ್ರದೇಶವಿದೆ. ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ 120ಕ್ಕೂ ಹೆಚ್ಚು ಕೆರೆಗಳಿವೆ. ಕೊನೆಭಾಗದ ಕೆರೆಗಳು ಭರ್ತಿಯಾಗುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಜುಲೈ 12ರ ಅಂಕಿಅಂಶದಂತೆ ಜಲಾಶಯದ ನೀರಿನ ಮಟ್ಟ 2282.51 ಅಡಿಗಳಷ್ಟಿದ್ದು 8.74 ಟಿಎಂಸಿ ನೀರಿನ ಸಂಗ್ರಹಣೆ ಇದೆ. 34 ಸಾವಿರ ಕ್ಯೂಸೆಕ್ಸ್ ಒಳ ಹರಿವು, 35,333 ಕ್ಯೂಸೆಕ್ಸ್ ಹೊರ ಹರಿವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಜುಲೈ 15 ರಿಂದ 24ರವರೆಗೆ ಕೆರೆಗಳಿಗೆ, ಜುಲೈ 25 ರಿಂದ ಆಗಸ್ಟ್ 14ರವರೆಗೆ ನಾಲೆಗಳಿಗೆ ನೀರು ಹರಿಸಲಾಗುವುದು. ಆಗಸ್ಟ್ 15ರಿಂದ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲಾಗುವುದು ಎಂದು ಅಧಿಕಾರಿಗಳು ಸಚಿವರಿಗೆ ತಿಳಿಸಿದ್ದಾರೆ.

ಸಭೆಯಲ್ಲಿ ಶಾಸಕರುಗಳಾದ ಅಶ್ವಿನ್ ಕುಮಾರ್, ಹರ್ಷವರ್ಧನ್, ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ, ಚಾಮರಾಜನಗರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಪಂ ಸಿಇಒ ಗಾಯತ್ರಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Published On - 8:17 pm, Tue, 12 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ