AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯೋತ್ಸವವನ್ನು ನಾವು ಗೌರವದಿಂದ ಆಚರಿಸುತ್ತೇವೆ, ಬಿಜೆಪಿಯವರಂತೆ ಹರ್​ ಘರ್ ಎಂದು ನಾಟಕವಾಡಲ್ಲ; ಸಿದ್ಧರಾಮಯ್ಯ

ಸಿದ್ದರಾಮಯ್ಯ ಹುಟ್ಟುಹಬ್ಬಕ್ಕೆ ಬಿಜೆಪಿ ಟೀಕೆ ಮುಂದುವರೆದ ವಿಚಾರವಾಗಿ ಮಾತನಾಡಿದ್ದು, ಬಿಜೆಪಿ ಅವರಿಗೆ ಕಾರ್ಯಕ್ರಮದಿಂದ ಭಯ ಬಂದಿದೆ. ಈ ಭಯದಲ್ಲಿಯೇ ಅವರು ಇನ್ನೂ ವ್ಯರ್ಥ ಟೀಕೆಗಳನ್ನು ‌ಮಾಡುತ್ತಿದ್ದಾರೆ.

ಸ್ವಾತಂತ್ರ್ಯೋತ್ಸವವನ್ನು ನಾವು ಗೌರವದಿಂದ ಆಚರಿಸುತ್ತೇವೆ, ಬಿಜೆಪಿಯವರಂತೆ ಹರ್​ ಘರ್ ಎಂದು ನಾಟಕವಾಡಲ್ಲ; ಸಿದ್ಧರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on:Aug 08, 2022 | 2:00 PM

Share

ಮೈಸೂರು: ನಾವು ಗೌರವದಿಂದ ಸ್ವಾತಂತ್ರ್ಯೋತ್ಸವ ಆಚರಿಸುತ್ತಿದ್ದೇವೆ. ಬಿಜೆಪಿಯವರಂತೆ ಹರ್​ ಘರ್ ತಿರಂಗಾ​ ಎಂದು ನಾಟಕ ಮಾಡಲ್ಲ ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿಕೆ ನೀಡಿದರು. ಹರಘರ್ ತಿರಂಗ ಇದು ಬಿಜೆಪಿ ಅವರ ನಾಟಕ. ಬಿಜೆಪಿ ಎಂದೂ ರಾಷ್ಟ್ರದ ಬಾವುಟಕ್ಕೆ ಗೌರವ ಕೊಟ್ಟವರಲ್ಲ. ಅವರು ರಾಷ್ಟ್ರಗೀತೆ, ಬಾವುಟವನ್ನು ವಿರೋಧಿಸುತ್ತಿದ್ದವರು. ಸಾವರ್ಕರ್, ಗೋಳ್ವಾಲ್‌ಕರ್ ಇವರು ಯಾರಿಗೂ ಬಾವುಟದ ಮೇಲೆ ನಂಬಿಕೆ ಇಲ್ಲ. ಬಿಜೆಪಿ ಸ್ವಾತಂತ್ರ್ಯ ರಾಷ್ಟ್ರ ಮಹೋತ್ಸವನ್ನು ರಾಜಕೀಯಕರಣ ಮಾಡಲು ಮುಂದಾಗುತ್ತಿದೆ. ರಾಷ್ಟ್ರಧ್ವಜವನ್ನು ಖಾದಿ ಅಥವಾ ಸಿಲ್ಕ್‌ನಲ್ಲಿ ಮಾತ್ರ ಮಾಡಬೇಕು. ಪಾಲಿಸ್ಟರ್‌ನಲ್ಲಿ ಮಾಡಿ ಚೀನಾಗೆ ಅನುಕೂಲ ಮಾಡುತ್ತಿದ್ದಾರೆ. ಚೀನಾದ ಅಮದು ಹೆಚ್ಚಾಗಿದೆ ಇದರಿಂದ ಮೇಕ್ ಇನ್ ಇಂಡಿಯಾ ಎಲ್ಲಿದೆ ಎಂದು ಪ್ರಶ್ನಿಸಿದರು. ಆತ್ಮ ನಿರ್ಭರ ಭಾರತ ಎಂದರೇನು ಎಂದು ಸಿದ್ದರಾಮಯ್ಯ ಪ್ರಶ್ನಿದರು.

ಇದನ್ನೂ ಓದಿ: ಸಿದ್ದರಾಮೋತ್ಸವದಿಂದ ಮರಳುವಾಗ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ನೀಡಿದ ಸಿದ್ದರಾಮಯ್ಯ

ಸಿದ್ದರಾಮೋತ್ಸವ ಕಾರ್ಯಕ್ರಮದಿಂದ ಬಿಜೆಪಿಗೆ ಭಯ ಶುರುವಾಗಿದೆ

ಸಿದ್ದರಾಮಯ್ಯ ಹುಟ್ಟುಹಬ್ಬಕ್ಕೆ ಬಿಜೆಪಿ ಟೀಕೆ ಮುಂದುವರೆದ ವಿಚಾರವಾಗಿ ಮಾತನಾಡಿದ್ದು, ಬಿಜೆಪಿ ಅವರಿಗೆ ಕಾರ್ಯಕ್ರಮದಿಂದ ಭಯ ಬಂದಿದೆ. ಈ ಭಯದಲ್ಲಿಯೇ ಅವರು ಇನ್ನೂ ವ್ಯರ್ಥ ಟೀಕೆಗಳನ್ನು ‌ಮಾಡುತ್ತಿದ್ದಾರೆ. ಅಹಿಂದ ಮತಗಳನ್ನು ಮತ ಪಟ್ಟಿಯಿಂದ ತೆಗೆಸಿರುವ ಬಗ್ಗೆ ಡಿ.ಕೆ ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ನಮ್ಮ ಅಧ್ಯಕ್ಷರು ಹೇಳಿದ ಮೇಲೆ ಆ ಮಾತಿನಲ್ಲಿ ಸತ್ಯವಿರುತ್ತದೆ. ಅಲ್ಪ ಸಂಖ್ಯಾತರು, ಹಿಂದುಳಿದ, ದಲಿತರ ಮತಗಳು ಕಾಂಗ್ರೆಸ್ ಪರವಾಗಿ ಇರುತ್ತದೆ. ಈ ಕಾರಣ ಆ ಮತಗಳನ್ನ ಪಟ್ಟಿಯಿಂದ ಡೀಲಿಟ್ ಮಾಡುವ ಕೆಲಸ ನಡೆದಿರಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದರು. ರಾಜ್ಯದಲ್ಲಿ ಮಳೆ ಹಾನಿ ಬಗ್ಗೆ ನಾವು ಸರ್ವೆ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಮಳೆಯಿಂದಾಗಿ ಅಪಾರ ಹಾನಿಯಾಗಿದೆ ಎಂದು ದೇಶದ ಆರ್ಥಿಕ ಸ್ಥಿತಿ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಭಾರತದಲ್ಲೂ ಶ್ರೀಲಂಕಾ ಪರಿಸ್ಥಿತಿ ಎದುರಾದ್ರೂ ಆಶ್ಚರ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಮೊಳೆ ಹೊಡೆದಿರಿ: ಸಿದ್ದರಾಮಯ್ಯ ವಿರುದ್ಧ ಮತ್ತೆ ಹರಿಹಾಯ್ದ ಎಚ್​ಡಿ ಕುಮಾರಸ್ವಾಮಿ

ಮುಂದಿನ ಚುನಾವಣೆಗೆ ಸಿದ್ದರಾಮಯ್ಯ ಕ್ಷೇತ್ರ ವಿಚಾರವಾಗಿ ಮಾತನಾಡಿದ ಅವರು ಚುನಾವಣೆ ಹತ್ತಿರ ಬಂದಾಗ ನಿಮಗೆ ನನ್ನ ಸ್ಪರ್ಧೆಯ ಕ್ಷೇತ್ರ ಹೇಳುತ್ತೇನೆ. ಈಗ ಯಾವುದೇ ನಿರ್ಧಾರ ಇಲ್ಲ. ವರುಣದಲ್ಲಿ ಕಾರ್ಯಕ್ರಮ ಮಾಡಿದ ಕೂಡಲೇ ವರುಣಾದಲ್ಲಿ ಸ್ಪರ್ಧಿಸುತ್ತೇನೆ ಅಂತಾ ಯಾಕೆ ಅಂದು ಕೊಳ್ತಿರಾ? ನಾನು ಕಾಂಗ್ರೆಸ್ ನಾಯಕನಾಗಿ ಎಲ್ಲಾ ಕ್ಷೇತ್ರಕ್ಕೂ ಹೋಗಿ ಕಾರ್ಯಕ್ರಮ ಮಾಡ್ತಿದ್ದೇನೆ ಅಷ್ಟೇ ಎಂದು ಹೇಳಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 1:59 pm, Mon, 8 August 22

Follow Us
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್