AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಪ್ರವಾಸೋದ್ಯಮ ಖಾತೆ ಬೇಡ, ನಮಗೆ ನೀವೇ ಬೇಡ; ಸಾಮಾಜಿಕ ಜಾಲತಾಣಗಳಲ್ಲಿ ಆನಂದ್ ಸಿಂಗ್ ವಿರುದ್ಧ ಅಭಿಯಾನ

We Don’t Want Anand Singh: ನಂದ್ ಸಿಂಗ್ ಪ್ರವಾಸೋದ್ಯಮ ಸಚಿವರಾಗಿ ನಮಗೆ ಬೇಡ ಎಂದು ರಾಜ್ಯ ಪ್ರವಾಸೋದ್ಯಮ ಒಕ್ಕೂಟದಿಂದ ಅಭಿಯಾನ ಶುರುವಾಗಿದೆ. ‘ವೀ ಡೋಂಟ್ ವಾಂಟ್ ಆನಂದ್ ಸಿಂಗ್’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಾಕಿ ಅಭಿಯಾನ ನಡೆಸಲಾಗುತ್ತಿದೆ.

ನಿಮಗೆ ಪ್ರವಾಸೋದ್ಯಮ ಖಾತೆ ಬೇಡ, ನಮಗೆ ನೀವೇ ಬೇಡ; ಸಾಮಾಜಿಕ ಜಾಲತಾಣಗಳಲ್ಲಿ ಆನಂದ್ ಸಿಂಗ್ ವಿರುದ್ಧ ಅಭಿಯಾನ
ಸಾಮಾಜಿಕ ಜಾಲತಾಣಗಳಲ್ಲಿ ಆನಂದ್ ಸಿಂಗ್ ವಿರುದ್ಧ ಅಭಿಯಾನ
TV9 Web
| Edited By: ಆಯೇಷಾ ಬಾನು|

Updated on: Aug 12, 2021 | 11:12 AM

Share

ಮೈಸೂರು: ಪ್ರವಾಸೋದ್ಯಮ ಖಾತೆ ಬಗ್ಗೆ ಆನಂದ್ ಸಿಂಗ್ ಕ್ಯಾತೆ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ಪ್ರವಾಸೋದ್ಯಮ ಸಚಿವರಾಗಿ ನಮಗೆ ಬೇಡ ಎಂದು ರಾಜ್ಯ ಪ್ರವಾಸೋದ್ಯಮ ಒಕ್ಕೂಟದಿಂದ ಅಭಿಯಾನ ಶುರುವಾಗಿದೆ. ‘ವೀ ಡೋಂಟ್ ವಾಂಟ್ ಆನಂದ್ ಸಿಂಗ್’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಾಕಿ ಅಭಿಯಾನ ನಡೆಸಲಾಗುತ್ತಿದೆ.

ಕೇಳಿದ ಖಾತೆ ಸಿಗದ ಸಿಟ್ಟು.. ರಾಜೀನಾಮೆಗೆ ಸಜ್ಜಾದ್ರಾ ಆನಂದ್ ಸಿಂಗ್? ಒಂದು ಕಾಲದಲ್ಲಿ ಕೈ ಪಾಳೆಯದ ಕಟ್ಟಾಳಾಗಿದ್ದ ಆನಂದ್ ಸಿಂಗ್.. ಕಳೆದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ, ಹೊರ ನಡೆದ ಮೊದಲಿಗರು. ಹೀಗಾಗೇ, ಬಿಜೆಪಿ ಬಾವುಟ ಹಿಡಿದ ಆನಂದ್ಗೆ ಬಿಎಸ್ ಯಡಿಯೂರಪ್ಪ ಸರ್ಕಾರದಲ್ಲಿ ಅರಣ್ಯ ಸಚಿವ ಸ್ಥಾನ ಸಿಕ್ಕಿತ್ತು. ಒಲ್ಲದ ಮನಸ್ಸಲ್ಲೇ ಮಂತ್ರಿಗಿರಿ ನಿಭಾಯಿಸಿದ್ರು. ಆದ್ರೀಗ, ಬೊಮ್ಮಾಯಿ ಸರ್ಕಾರದಲ್ಲಿ ಪ್ರವಾಸೋದ್ಯಮ, ಪರಿಸರ ಇಲಾಖೆ ಹೊಣೆ ಸಿಕ್ಕಿದ್ದು ಅಸಮಾಧಾನ ಸ್ಫೋಟವಾಗಿದೆ. ಪ್ರಭಾವಿ ಖಾತೆಗಾಗಿ ಆನಂದ್ ಪಟ್ಟು ಹಿಡಿದಿದ್ದು, ಬಹಿರಂಗವಾಗೇ ಬೇಸರ ಹೊರಹಾಕಿದ್ದಾರೆ. ಆದರೆ ಇದರ ನಡುವೆ ಈಗ ನಿಮಗೆ ಪ್ರವಾಸೋದ್ಯಮ ಖಾತೆ ಬೇಡ, ನಮಗೆ ನೀವೇ ಬೇಡ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ನಡೆಸಲಾಗುತ್ತಿದೆ.

ಇನ್ನು ಮತ್ತೊಂದು ಕಡೆ ಹೊಸಪೇಟೆಯ ರಾಣಿಪೇಟೆಯಲ್ಲಿದ್ದ ಶಾಸಕರ ಕಚೇರಿಯನ್ನ ಆನಂದ್ ಸಿಂಗ್ ತೆರವುಗೊಳಿಸಿದ್ದಾರೆ. ಹೀಗಾಗಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡ್ತಾರೆ ಅನ್ನೋ ಚರ್ಚೆ ಹುಟ್ಟುಹಾಕಿದೆ. ಹಾಗೂ ಕುಟುಂಬದ ಆರಾಧ್ಯ ದೈವ ವೇಣುಗೋಪಾಲ ದೇಗುಲದ ಜೀರ್ಣೋದ್ಧಾರ ಕಾರ್ಯದಲ್ಲಿ ಪಾಲ್ಗೊಂಡಿದ್ದ ಆನಂದ್ ಸಿಂಗ್.. ಹೋಮ-ಹವನದ ವೇಳೆ ಹರಕೆ ಚೀಟಿಯನ್ನು ಸಲ್ಲಿಸಿದ್ರು. ರಾಜೀನಾಮೆ ವಿಷ್ಯದ ಬಗ್ಗೆ ಮಾತನಾಡಿದ ಅವರು, ನನ್ನ ರಾಜಕೀಯ ಜೀವನ ಆರಂಭವಾಗಿದ್ದು ಇಲ್ಲೇ, ಅಂತ್ಯವೂ ಇಲ್ಲೇ ಆಗಬಹುದು ಅಂತ ಬಾಂಬ್ ಸಿಡಿಸಿದ್ರು. ಹಾಗೆ, ನನಗೆ ರಕ್ಷಣೆ ಸಿಗುತ್ತೆ ಅನ್ನೋ ಆಸೆ ಕಳ್ಕೊಂಡಿದ್ದೇನೆ.. ಬ್ಲ್ಯಾಕ್ಮೆಲ್ ತಂತ್ರ ಮಾಡಲ್ಲ ಅಂತಂದ್ರು.

ಇದನ್ನೂ ಓದಿ: ಸಂಧಾನ ಸಭೆ ಸಕ್ಸಸ್; ಸಚಿವ ಆನಂದ್ ಸಿಂಗ್​ ಆನಂದದಲ್ಲಿ ಇನ್ನು ವ್ಯತ್ಯಯವಿಲ್ಲ: ಸಿಎಂ ಬೊಮ್ಮಾಯಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು