AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಪ್ಪು ಸುಲ್ತಾನ್​​ ಬಂದಾಗಲೇ ಕೊಡವರು ಹೆದರಲಿಲ್ಲ: ಸಿದ್ದು ಸುಲ್ತಾನ್ ಬಂದರೆ ಹೆದರ್​ತೀವಾ: ಪ್ರತಾಪ್ ಸಿಂಹ

ಸಿದ್ದರಾಮಯ್ಯ ವಿರುದ್ದ ಕೊಡಗಿನ ಜನರಿಗೆ ಆಕ್ರೋಶವಿದೆ. ಸಿದ್ದರಾಮಯ್ಯ ಪದೇ ಪದೇ ಕೊಡಗಿನ ಜನರಿಗೆ ನೋವು ನೀಡಿದ್ದಾರೆ.ಕೊಡಗಿನಲ್ಲಿ ಶಾಂತಿ ಕದಡಿದರೆ ಅದಕ್ಕೆ ಸಿದ್ದರಾಮಯ್ಯ ನೇರ ಹೊಣೆ ಎಂದು ಸಂಸದ ಪ್ರತಾಪಸಿಂಹ ಹೇಳಿದರು.

ಟಿಪ್ಪು ಸುಲ್ತಾನ್​​ ಬಂದಾಗಲೇ ಕೊಡವರು ಹೆದರಲಿಲ್ಲ: ಸಿದ್ದು ಸುಲ್ತಾನ್ ಬಂದರೆ ಹೆದರ್​ತೀವಾ: ಪ್ರತಾಪ್ ಸಿಂಹ
ಸಂಸದ ಪ್ರತಾಪ್ ಸಿಂಹ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Aug 22, 2022 | 10:41 AM

ಮೈಸೂರು: ಕೊಡಗಿಗೆ ಟಿಪ್ಪು ಸುಲ್ತಾನ್ (Tipu Sultan) ​​ಬಂದಾಗಲೇ ಕೊಡವರು ಹೆದರಲಿಲ್ಲ. ಇನ್ನು ಸಿದ್ದು ಸುಲ್ತಾನ್ ಬಂದರೆ ಹೆದರುತ್ತೀವಾ? ಎಂದು ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ ಪ್ರಶ್ನೆ ಮಾಡಿದರು. ಸಿದ್ದರಾಮಯ್ಯ ಮೈಸೂರು, ಮಂಡ್ಯ, ಹಾಸನ‌ ಮಾತ್ರವಲ್ಲ ಪಕ್ಕದ ಕೇರಳದ ನಿಮ್ಮ ಸಾಕು ಮಕ್ಕಳನ್ನು ಕರೆದುಕೊಂಡು ಬನ್ನಿ. ಮಾಂಸ ತಿಂದು ದೇವಸ್ಥಾನಕ್ಕೆ ಬರಬೇಡಿ ಅಂತಾ ದೇವರು ಹೇಳಿದ್ದಾರಾ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ಸಂಸದ ಪ್ರತಾಪಸಿಂಹ ತಿರುಗೇಟು ನೀಡಿದ್ದು, ನಿಮ್ಮ ಶ್ರೀಮತಿ ಚಾಮುಂಡೇಶ್ವರಿ ಭಕ್ತೆ ಅವರು ಸಹಾ ಮಾಂಸ ತಿಂದು ದೇವಸ್ಥಾನಕ್ಕೆ ಬರುತ್ತಾರಾ ಕೇಳಿ. ಅವರು ಆ ರೀತಿ ಹೇಳಿದರೆ ಬಂದು ಸಾರ್ವಜನಿಕವಾಗಿ ಹೇಳಿ. ಆಗ ನಾವು ಒಪ್ಪಿಕೊಳ್ಳುತ್ತೇವೆ. ಹಂದಿ ಮಾಂಸ ಕೂಡ ಒಂದು ಆಹಾರ ಪದ್ಧತಿ. ಹಂದಿ ಮಾಂಸ ತಿನ್ನಬೇಡಿ ಎಂದು ಯಾವ ದೇವರು ಹೇಳಿಲ್ಲ. ಹಂದಿ ಮಾಂಸ ತಿನ್ನಲು ನಿಮ್ಮ ಜಮೀರ್​, ಬೆಂಬಲಿಗರಿಗೆ ಹೇಳಿ. ಅದನ್ನ ಹೇಳುವುದಕ್ಕೆ ನಿಮಗೆ ಧೈರ್ಯ ಇಲ್ಲ ಎಂದು ಪ್ರತಾಪ್ ಸಿಂಹ ಹೇಳಿದರು.

ಇದನ್ನೂ ಓದಿ: ಉದ್ಯಮಿ ಕಮ್ ಬಿಜೆಪಿ ಮುಖಂಡನ ಹನಿ ಟ್ರ್ಯಾಪ್ ಪ್ರಕರಣ: ಚುರುಕುಗೊಂಡ ವಿಚಾರಣೆ

ಮೊನ್ನೆ ಸಿದ್ದರಾಮೇಶ್ವರ ಜಾತ್ರೆಗೆ ಏಕೆ ಸಿಹಿ ಊಟ ಹಾಕಿಸಿದಿರಿ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಪದೇ ಪದೇ ಈ ರೀತಿ ಮಾಡುತ್ತಾರೆ. 2017ರಲ್ಲಿ ನಾಟಿಕೋಳಿ ತಿಂದು ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿ ದಸರಾ ಉದ್ಘಾಟಿಸಿದ್ದರು. ಇದಕ್ಕೆ ನಾನೇ ಸಾಕ್ಷಿಯಾಗಿದ್ದೇನೆ. ಅದೇ ಕಾರಣಕ್ಕೆ ಮುಂದೆ ತಾಯಿ ಚಾಮುಂಡೇಶ್ವರಿ ಅವರಿಗೆ ಆ ಅವಕಾಶ ಕೊಡಲಿಲ್ಲ. ಈಗ ಬಸವೇಶ್ವರ ದೇವಸ್ಥಾನಕ್ಕೆ ಹೋಗಿ ಬಸವ ತತ್ವ ಅನುಯಾಯಿಗಳ ನಂಬಿಕೆ ಒಡೆದಿದ್ದಾರೆ.

ನೂಲಿನಂತೆ ಸೀರೆ ಅಪ್ಪನಂತೆ ಮಗ

ಸಂಪತ್ ಬಿಜೆಪಿ ಕಾರ್ಯಕರ್ತ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ಪೋಟೋ ಇದ್ದ ಮಾತ್ರಕ್ಕೆ ಆತ ಬಿಜೆಪಿ ಕಾರ್ಯಕರ್ತ ಆಗಲ್ಲ. ಆತ ನನ್ನ ಚುನಾವಣೆಯಲ್ಲೂ ಕಾಂಗ್ರೆಸ್ ಪರ ಕೆಲಸ ಮಾಡಿದ್ದಾನೆ. ಸಿದ್ದರಾಮಯ್ಯ, ಯತೀಂದ್ರ ಸಿದ್ದರಾಮಯ್ಯರಿಂದ ಸಾವರ್ಕರ್ ಟೀಕೆ ವಿಚಾರವಾಗಿ ಮಾತನಾಡಿದ್ದು, ನೂಲಿನಂತೆ ಸೀರೆ ಅಪ್ಪನಂತೆ ಮಗ. ಇವರಿಂದ ಸಾವರ್ಕರ್‌ಗೆ ಸರ್ಟಿಫಿಕೇಟ್ ಬೇಡ ಎಂದು ಹೇಳಿದರು.

ಕೊಡಗಿನಲ್ಲಿ ಶಾಂತಿ ಕದಡಿದರೆ ಅದಕ್ಕೆ ಸಿದ್ದರಾಮಯ್ಯ ನೇರ ಹೊಣೆ

ಸಿದ್ದರಾಮಯ್ಯ ವಿರುದ್ದ ಕೊಡಗಿನ ಜನರಿಗೆ ಆಕ್ರೋಶವಿದೆ. ಸಿದ್ದರಾಮಯ್ಯ ಪದೇ ಪದೇ ಕೊಡಗಿನ ಜನರಿಗೆ ನೋವು ನೀಡಿದ್ದಾರೆ. ಕೊಡವರನ್ನು ಕೊಂದ ಟಿಪ್ಪು ಜಯಂತಿ ಮಾಡಿದ್ದಾರೆ. ಕೊಡಗಿನಲ್ಲಿ ಶಾಂತಿ ಕದಡಿದ್ದು ಸಿದ್ದರಾಮಯ್ಯ. ಈಗ ಮತ್ತೆ ಕೊಡಗಿಗೆ ದಂಡೆತ್ತಿ ಬರುತ್ತಿದ್ದಾರೆ. ಈ ಮೂಲಕ ಕೊಡಗಿನಲ್ಲಿ ಶಾಂತಿ ಕದಡಿದರೆ ಅದಕ್ಕೆ ಸಿದ್ದರಾಮಯ್ಯ ನೇರ ಹೊಣೆ ಎಂದು ಟಿವಿ9ಗೆ ಸಂಸದ ಪ್ರತಾಪಸಿಂಹ ಹೇಳಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:38 am, Mon, 22 August 22

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ