ಸುಖಿ ಸಂಸಾರದಲ್ಲಿ ಮೂರನೇ ವ್ಯಕ್ತಿ ಎಂಟ್ರಿ: ಬಲರಾಮನಿಗಾಗಿ ಕಟ್ಟಿಕೊಂಡ ಗಂಡನನ್ನೇ ಕೊಂದ ಹೆಂಡ್ತಿ
ಆತ ಊರಿಗೆ ನ್ಯಾಯ ಹೇಳುವ ಚಿಕ್ಕ ಯಜಮಾನ. ಆದರೆ ತನ್ನ ಪತ್ನಿಯನ್ನೇ ಕಂಟ್ರೋಲ್ನಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗದೇ ಹೆಣವಾಗಿದ್ದಾನೆ. ಕೂಲಿ ಮಾಡಿಬಂದು ರಾತ್ರಿ ಊಟ ಮಾಡಿದವನು ಹೆಂಡತಿಯ ತಂತ್ರಕ್ಕೆ ಬಲಿಯಾಗಿದ್ದಾನೆ. ಗಂಡನನ್ನು ಕೊಂದವಳು ಆತ್ಮಹತ್ಯೆ ಅಂತ ಕಥೆ ಕಟ್ಟಿ ಹೈಡ್ರಾಮಾ ಮಾಡದ್ದ ಪತ್ನಿಯ ಅಸಲಿ ಬಂಡವಾಳ ಬಟಾಬಯಲಾಗಿದೆ.

ಮೈಸೂರು, ನವೆಂಬರ್ 11): ಪತ್ನಿಯ ಅಕ್ರಮ ಸಂಬಂಧಕ್ಕೆ (Illegal Relationship) ಗಂಡ ಅಡ್ಡಿಯಾಗಿದ್ದಾನೆಂದು ತಾಳಿಕಟ್ಟಿದ್ದ ಗಂಡನನ್ನೇ ಪತ್ನಿ ಕೊಲೆ ಮಾಡಿರುವ ಘಟನೆ ಮೈಸೂರು (Mysuru) ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪತಿ ವೀರಣ್ಣನನ್ನು ಕೊಲೆ ಮಾಡಿ ಬಳಿಕ ಆತ್ಮಹತ್ಯೆ ಎಂದು ಕಥೆ ಕಟ್ಟಿದ್ದ ಪತ್ನಿ ಶಿವಮ್ಮಳ ಅಸಲಿ ಮುಖ ಬಯಲಾಗಿದ್ದು, ಇದೀಗ ಜೈಲು ಸೇರಿದ್ದಾಳೆ. ಗಂಡ ನಿದ್ದೆಗೆ ಜಾರುತ್ತಿದ್ದಂತೆಯೇ ಹೊಡೆಯ ಬಾರದ ಜಾಗಕ್ಕೆ ಹೊಡೆದು ಕೊಂದು ಹಾಕಿದ್ದಾಳೆ. ಬಳಿಕ ಸೀರೆಯಿಂದ ನೇಣಿಗೆ ಹಾಕಿ ಆತ್ಮಹತ್ಯೆ ಎಂದು ಹೈಡ್ರಾಮಾ ಮಾಡಿದ್ದಳು. ಆದ್ರೆ, ಪೊಲೀಸರ ತನಿಖೆಯಲ್ಲಿ ಪತ್ನಿಯ ನವರಂಗಿ ಆಟ ಬಯಲಿಗೆ ಬಿದ್ದಿದೆ.
13 ವರ್ಷಗಳ ಹಿಂದೆ ಶಿವಮ್ಮ ವೀರಣ್ಣ ವಿವಾಹ ನೆರವೇರಿತ್ತು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದರು. ಈಕೆಗೆ ಕಳೆದ ನಾಲ್ಕು ವರ್ಷದಿಂದ ಹೆಚ್.ಡಿ.ಕೋಟೆಯ ಬಲರಾಮ ಎಂಬಾತನ ಪರಿಚಯವಾಗಿತ್ತು. ಆದ್ರೆ, ಪರಿಚಯ ಅಕ್ರಮ ಸಂಬಂಧಕ್ಕೆ ತಿರುಗಿತ್ತು. ಈ ವಿಚಾರ ಪತಿ ವೀರಣ್ಣಗೆ ತಿಳಿದು ತೀವ್ರ ವಿರೋಧ ವ್ಯಕ್ತಪಡಿಸಿದ್ದ. ಅಲ್ಲದೆ ಈ ವಿಚಾರದಲ್ಲಿ ನ್ಯಾಯ ಪಂಚಾಯತಿ ಸಹ ನಡೆದಿತ್ತು. ಹಲವು ಬಾರಿ ಆತನ ಸಂಪರ್ಕ ಬಿಡುವಂತೆ ಬುದ್ದಿ ಹೇಳಲಾಗಿತ್ತು. ಹೀಗಿದ್ದೂ ಶಿವಮ್ಮ ಹಾಗೂ ಬಲರಾಮ್ ನಡುವೆ ಸಂಬಂಧ ಮುಂದುವರೆದಿತ್ತು.
ಇದನ್ನೂ ಓದಿ: ಹಳೆಯ ದ್ವೇಷಕ್ಕೆ ಹರಿದ ನೆತ್ತರು: ಮಗನ ಜೀವ ಉಳಿಸಲು ಹೋಗಿ ಬಲಿಯಾದ ತಾಯಿ
ಹೀಗೆ ಮೊನ್ನೆ(ನವೆಂಬರ್ 09) ರಾತ್ರಿ ಬಲರಾಮ ಫೋನ್ ಮಾಡಿದ್ದ. ಈ ವಿಚಾರದಲ್ಲಿ ದಂಪತಿ ನಡುವೆ ಗಲಾಟೆ ಆಗಿದೆ. ರಾತ್ರಿ ಊಟ ಮಾಡಿ ಪತಿ ಮಲಗಿದ್ದಾರೆ. ಆ ವೇಳೆ ಬಡಿಗೆಯಿಂದ ಮರ್ಮಾಂಗಕ್ಕೆ ಹೊಡೆದು ಕೊಂದಿದ್ದಾಳೆ. ಬಳಿಕ ಶಿವಮ್ಮ ಬಾಯಿ ಬಡಿದುಕೊಂಡು ಮನೆಯಿಂದ ಹೊರಗೆ ಓಡೋಡಿ ಬಂದು ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಕಥೆ ಕಟ್ಟಿದ್ದಾಳೆ.
ಆಗ ಸ್ಥಳಕ್ಕೆ ಹುಲ್ಲಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ನೋಡಿದಾಗ ಕುತ್ತಿಗೆಯಲ್ಲಿ ಸೀರೆ ಕಂಡು ಬಂದಿತ್ತು. ಆದರೂ ಪೊಲೀಸರಿಗೆ ಅನುಮಾನವೂ ಇತ್ತು. ಅದರಂತೆ ಪತ್ನಿ ಶಿವಮ್ಮಳನ್ನ ವಿವಾರಣೆಗೊಳಪಡಿಸಿದಾಗ ಬಲರಾಮ ಜೊತೆಗಿನ ಸಂಬಂಧಕ್ಕಾಗಿ ಗಂಡನನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ.
ಸದ್ಯ ಹುಲ್ಲಹಳ್ಳಿ ಪೊಲೀಸರು ಶಿವಮ್ಮನನ್ಜು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಶಿವಮ್ಮ ಒಬ್ಬಳೇ ಈ ಕೊಲೆ ಮಾಡಿದ್ದಾಳಾ ಅಥವಾ ಆಕೆಗೆ ಯಾರಾದರೂ ಸಹಾಯ ಮಾಡಿದ್ದರಾ ಎನ್ನುವ ಬಗ್ಗೆ ಪೊಲೀಸರು ತನಿಖೆ ಮುಂದಿವರಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ



