Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru News: ಪಿರಿಯಾಪಟ್ಟಣದಲ್ಲಿ ಅಕ್ರಮ ಸಂಪರ್ಕದ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು

ಪಿರಿಯಾಪಟ್ಟಣ ತಾಲೂಕಿನ ಕುಗ್ರಾಮದ ಬುಡಕಟ್ಟು ನಿವಾಸಿ ಮಣಿ ಎಂಬುವವರ ಒಡೆತನದ ಸರ್ವೆ ನಂಬರ್ 2ರ ಜಮೀನಿನಲ್ಲಿ ಆನೆ ವಿದ್ಯುತ್ ಸ್ಪರ್ಶಿಸಿದೆ. ನಿನ್ನೆ ಗುರುವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಜಂಬೂ ಶವವಾಗಿ ಪತ್ತೆಯಾಗಿದೆ.

Mysuru News: ಪಿರಿಯಾಪಟ್ಟಣದಲ್ಲಿ ಅಕ್ರಮ ಸಂಪರ್ಕದ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು
ಅಕ್ರಮ ಸಂಪರ್ಕದ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು
Follow us
ಸಾಧು ಶ್ರೀನಾಥ್​
|

Updated on:Dec 15, 2023 | 10:40 AM

ಮೈಸೂರು ಜಿಲ್ಲೆ ಪಿರಿಯಾಪಟ್ಟಣ (Periyapatna) ತಾಲೂಕಿನ ಮರಳುಕಟ್ಟೆಯಲ್ಲಿ ಅಕ್ರಮವಾಗಿ ಸರಬರಾಜು ಮಾಡುತ್ತಿದ್ದ ತಂತಿ ಬೇಲಿ ಸಂಪರ್ಕಕ್ಕೆ ಬಂದ 30 ವರ್ಷದ ಕಾಡಾನೆಯೊಂದು (Wild Elephant) ವಿದ್ಯುತ್ ಸ್ಪರ್ಶದಿಂದ (Electrocution) ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ಕುಗ್ರಾಮದ ಬುಡಕಟ್ಟು ನಿವಾಸಿ ಮಣಿ ಎಂಬುವವರ ಒಡೆತನದ ಸರ್ವೆ ನಂಬರ್ 2ರ ಜಮೀನಿನಲ್ಲಿ ಆನೆ ವಿದ್ಯುತ್ ಸ್ಪರ್ಶಿಸಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಆನೆ ಶವವಾಗಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದ್ದರು ಎಂದು deccanherald.com ವರದಿ ಮಾಡಿದೆ.

Also Read:  ಧಾರವಾಡ – ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಮರಣೋತ್ತರ ಪರೀಕ್ಷೆ ನಡೆಸಿದ ಪಶುವೈದ್ಯ ಚಿಟ್ಟಿಯಪ್ಪ, ವಿದ್ಯುತ್ ಸ್ಪರ್ಶದಿಂದ ಸಾವು ಸಂಭವಿಸಿದೆ ಎಂದು ಖಚಿತಪಡಿಸಿದ್ದಾರೆ. ಮಣಿ ವಿರುದ್ಧ ಅರಣ್ಯ ಇಲಾಖೆ ಪೊಲೀಸರಿಗೆ ದೂರು ನೀಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:36 am, Fri, 15 December 23