AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಲ್ಲಿ ಹುಲಿ ದಾಳಿ: ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ತಿಂದು ತೇಗಿದ ವ್ಯಾಘ್ರ

ಕಾಡು ಬಿಟ್ಟು ನಾಡಿಗೆ ಬರುತ್ತಿರುವ ಕಾಡು ಪ್ರಾಣಿಗಳು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿವೆ. ಸದ್ಯ ಮೈಸೂರಿನಲ್ಲಿ ಮೇಕೆ ಮೇಯಿಸುತ್ತಿದ್ದ ಮಹಿಳೆ ಮೇಲೆ ಹುಲಿಯೊಂದು ದಾಳಿ ಮಾಡಿ, ಆಕೆಯನ್ನು ಹೊತ್ತೊಯ್ದು ತಿಂದು ತೇಗಿ ಹೋಗಿದೆ.

ಮೈಸೂರಲ್ಲಿ ಹುಲಿ ದಾಳಿ: ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ತಿಂದು ತೇಗಿದ ವ್ಯಾಘ್ರ
ರಾಮ್​, ಮೈಸೂರು
| Edited By: |

Updated on:May 26, 2024 | 12:56 PM

Share

ಮೈಸೂರು, (ಮೇ 26): ರೈತ ಮಹಿಳೆ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಅಲ್ಲಿನ ಮೂರ್ಬಾಂದ್ ಬೆಟ್ಟದ ಸಮೀಪದಲ್ಲಿ ನಡೆದಿದೆ. ಹುಲಿ ದಾಳಿಯಿಂದ ಮಹಿಳೆ ಸಾವನ್ನಪ್ಪಿದ್ದಾಳೆ. ಚಿಕ್ಕಿ (48) ಹುಲಿ ದಾಳಿಗೆ ಬಲಿಯಾದ ಮಹಿಳೆ. ಎಚ್.ಡಿ.ಕೋಟೆ ತಾಲ್ಲೂಕು ಎನ್.ಬೇಗೂರು ಸಮೀಪದ ಮಾಳದ ಹಾಡಿ ನಿವಾಸಿ. ಮೇಕೆ ಮೇಯಿಸುತ್ತಿದ್ದಾಗ ಹಠಾತ್ ಮಹಿಳೆ ಮೇಲೆ ಹುಲಿ ದಾಳಿ ಮಾಡಿದೆ. ಘಟನಾ ಸ್ಥಳಕ್ಕೆ ಎನ್.ಬೇಗೂರು ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನು ಘಟನಾ ಸ್ಥಳದಲ್ಲಿ ಮಹಿಳೆಯ ಕಾಲು ಮಾತ್ರ ಸಿಕ್ಕಿದೆ. ಆದ್ರೆ, ಮಹಿಳೆಯ ಮೃತದೇಹಕ್ಕಾಗಿ ಸಿಬ್ಬಂದಿ ಹುಡುಕಾಟ ನಡೆಸಿದ್ದು, ಅರಣ್ಯ‌ಇಲಾಖೆ ನಿರ್ಮಿಸಿದ್ದ ಅರಣ್ಯ ವೀಕ್ಷಣೆಯ ಟವರ್ ಮೇಲೆ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಹುಲಿ ದಾಳಿಗೆ ವಿದೇಶಿ ತಳಿಯ 2 ನಾಯಿಗಳು ಬಲಿ

ಕೊಡಗಿನಲ್ಲಿ ಹುಲಿ ದಾಳಿ ಮುಂದುವರಿದಿದೆ. ಹುಲಿ ದಾಳಿಗೆ ವಿದೇಶಿ ತಳಿಯ 2 ನಾಯಿಗಳು ಬಲಿಯಾಗಿದೆ. ಕೊಡಗಿನ ವಿರಾಜಪೇಟೆ ಹೊರವಲಯದ ಕುಟ್ಟಂದಿ ಬಳಿ ಘಟನೆ ನಡೆದಿದೆ. ಕುಟ್ಟಂದಿಯ ಕೆ.ಕೆ. ಗ್ರೂಪ್ ಎಸ್ಟೇಟ್‌ನಲ್ಲಿದ್ದ ಹಸ್ಕಿ ಮತ್ತು ಫಿಟ್ ಬುಲ್ ತಳಿಯ 2 ನಾಯಿಗಳು ಮೃತಪಟ್ಟಿವೆ.

ತೋಟದ ಮಾಲೀಕರು ಹುಲಿ ಹೆಜ್ಜೆಯನ್ನು ಪತ್ತೆ ಹಚ್ಚಿದ್ದಾರೆ. ಇಷ್ಟು ದಿನ ದನ ಕರುಗಳ ಮೇಲೆ ಅಟ್ಯಾಕ್ ಮಾಡುತ್ತಿದ್ದ ಹುಲಿ ಇದೀಗ ನಾಯಿ ಮೇಲೆ ದಾಳಿ ಮಾಡುತ್ತಿದೆ. ಹುಲಿ ಸುದ್ದಿ ಕೇಳಿ ಗ್ರಾಮದ ಸುತ್ತ ಮುತ್ತ ಆತಂಕದ ವಾತವರಣ ನಿರ್ಮಾಣವಾಗಿದೆ. ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ತೋಟದ ಮಾಲೀಕರು ಒತ್ತಾಯಿಸಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:44 pm, Sun, 26 May 24

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ