AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಲ್ಲಿ ಹುಲಿ ದಾಳಿ: ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ತಿಂದು ತೇಗಿದ ವ್ಯಾಘ್ರ

ಕಾಡು ಬಿಟ್ಟು ನಾಡಿಗೆ ಬರುತ್ತಿರುವ ಕಾಡು ಪ್ರಾಣಿಗಳು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿವೆ. ಸದ್ಯ ಮೈಸೂರಿನಲ್ಲಿ ಮೇಕೆ ಮೇಯಿಸುತ್ತಿದ್ದ ಮಹಿಳೆ ಮೇಲೆ ಹುಲಿಯೊಂದು ದಾಳಿ ಮಾಡಿ, ಆಕೆಯನ್ನು ಹೊತ್ತೊಯ್ದು ತಿಂದು ತೇಗಿ ಹೋಗಿದೆ.

ಮೈಸೂರಲ್ಲಿ ಹುಲಿ ದಾಳಿ: ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ತಿಂದು ತೇಗಿದ ವ್ಯಾಘ್ರ
ರಾಮ್​, ಮೈಸೂರು
| Edited By: |

Updated on:May 26, 2024 | 12:56 PM

Share

ಮೈಸೂರು, (ಮೇ 26): ರೈತ ಮಹಿಳೆ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಅಲ್ಲಿನ ಮೂರ್ಬಾಂದ್ ಬೆಟ್ಟದ ಸಮೀಪದಲ್ಲಿ ನಡೆದಿದೆ. ಹುಲಿ ದಾಳಿಯಿಂದ ಮಹಿಳೆ ಸಾವನ್ನಪ್ಪಿದ್ದಾಳೆ. ಚಿಕ್ಕಿ (48) ಹುಲಿ ದಾಳಿಗೆ ಬಲಿಯಾದ ಮಹಿಳೆ. ಎಚ್.ಡಿ.ಕೋಟೆ ತಾಲ್ಲೂಕು ಎನ್.ಬೇಗೂರು ಸಮೀಪದ ಮಾಳದ ಹಾಡಿ ನಿವಾಸಿ. ಮೇಕೆ ಮೇಯಿಸುತ್ತಿದ್ದಾಗ ಹಠಾತ್ ಮಹಿಳೆ ಮೇಲೆ ಹುಲಿ ದಾಳಿ ಮಾಡಿದೆ. ಘಟನಾ ಸ್ಥಳಕ್ಕೆ ಎನ್.ಬೇಗೂರು ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನು ಘಟನಾ ಸ್ಥಳದಲ್ಲಿ ಮಹಿಳೆಯ ಕಾಲು ಮಾತ್ರ ಸಿಕ್ಕಿದೆ. ಆದ್ರೆ, ಮಹಿಳೆಯ ಮೃತದೇಹಕ್ಕಾಗಿ ಸಿಬ್ಬಂದಿ ಹುಡುಕಾಟ ನಡೆಸಿದ್ದು, ಅರಣ್ಯ‌ಇಲಾಖೆ ನಿರ್ಮಿಸಿದ್ದ ಅರಣ್ಯ ವೀಕ್ಷಣೆಯ ಟವರ್ ಮೇಲೆ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಹುಲಿ ದಾಳಿಗೆ ವಿದೇಶಿ ತಳಿಯ 2 ನಾಯಿಗಳು ಬಲಿ

ಕೊಡಗಿನಲ್ಲಿ ಹುಲಿ ದಾಳಿ ಮುಂದುವರಿದಿದೆ. ಹುಲಿ ದಾಳಿಗೆ ವಿದೇಶಿ ತಳಿಯ 2 ನಾಯಿಗಳು ಬಲಿಯಾಗಿದೆ. ಕೊಡಗಿನ ವಿರಾಜಪೇಟೆ ಹೊರವಲಯದ ಕುಟ್ಟಂದಿ ಬಳಿ ಘಟನೆ ನಡೆದಿದೆ. ಕುಟ್ಟಂದಿಯ ಕೆ.ಕೆ. ಗ್ರೂಪ್ ಎಸ್ಟೇಟ್‌ನಲ್ಲಿದ್ದ ಹಸ್ಕಿ ಮತ್ತು ಫಿಟ್ ಬುಲ್ ತಳಿಯ 2 ನಾಯಿಗಳು ಮೃತಪಟ್ಟಿವೆ.

ತೋಟದ ಮಾಲೀಕರು ಹುಲಿ ಹೆಜ್ಜೆಯನ್ನು ಪತ್ತೆ ಹಚ್ಚಿದ್ದಾರೆ. ಇಷ್ಟು ದಿನ ದನ ಕರುಗಳ ಮೇಲೆ ಅಟ್ಯಾಕ್ ಮಾಡುತ್ತಿದ್ದ ಹುಲಿ ಇದೀಗ ನಾಯಿ ಮೇಲೆ ದಾಳಿ ಮಾಡುತ್ತಿದೆ. ಹುಲಿ ಸುದ್ದಿ ಕೇಳಿ ಗ್ರಾಮದ ಸುತ್ತ ಮುತ್ತ ಆತಂಕದ ವಾತವರಣ ನಿರ್ಮಾಣವಾಗಿದೆ. ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ತೋಟದ ಮಾಲೀಕರು ಒತ್ತಾಯಿಸಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:44 pm, Sun, 26 May 24

Follow Us
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ