AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು, ತಿಂಡಿಯ ಜೊತೆ ಆಲ್ಕೋ ಹಾಲ್ ಮಾರಾಟ; ಮದ್ಯ ಮಾರಾಟ ಮಾಡುತ್ತಿದ್ದವನಿಗೆ ತರಾಟೆಗೆ ತೆಗೆದುಕೊಂಡ ಮಹಿಳೆಯರು

ಹಾಡಿಗೆ ಟಿವಿಎಸ್ ಮೊಫೆಡ್ನಲ್ಲಿ ಮಾರಾಟ ಮಾಡಲು ಬಂದಿದ್ದ ವ್ಯಕ್ತಿ ಹಾಲಿನ ಪ್ಯಾಕೇಟ್, ಮಕ್ಕಳು ತಿನ್ನುವ ತಿಂಡಿಯ ಜೊತೆ ಮದ್ಯ ಮಾರಾಟ ಕೂಡ ಮಾಡುತ್ತಿದ್ದ. ಇದನ್ನು ಗಮನಿಸಿದ ಮಹಿಳೆಯರು ಮದ್ಯ ಮಾರಾಟ ಮಾಡುತ್ತಿದ್ದವನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಹಾಲು, ತಿಂಡಿಯ ಜೊತೆ ಆಲ್ಕೋ ಹಾಲ್ ಮಾರಾಟ; ಮದ್ಯ ಮಾರಾಟ ಮಾಡುತ್ತಿದ್ದವನಿಗೆ ತರಾಟೆಗೆ ತೆಗೆದುಕೊಂಡ ಮಹಿಳೆಯರು
ಹಾಲು, ತಿಂಡಿಯ ಜೊತೆ ಆಲ್ಕೋ ಹಾಲ್ ಮಾರಾಟ; ಮದ್ಯ ಮಾರಾಟ ಮಾಡುತ್ತಿದ್ದವನಿಗೆ ತರಾಟೆಗೆ ತೆಗೆದುಕೊಂಡ ಮಹಿಳೆಯರು
TV9 Web
| Edited By: ಆಯೇಷಾ ಬಾನು|

Updated on: Sep 23, 2021 | 8:44 AM

Share

ಮೈಸೂರು: ಹಾಲು, ತಿಂಡಿಯ ಜೊತೆ ಮದ್ಯ ಮಾರಾಟ ಹಿನ್ನೆಲೆ ಮದ್ಯ ಮಾರಾಟ ಮಾಡುತ್ತಿದ್ದವನಿಗೆ ಮಹಿಳೆಯರು ತರಾಟೆಗೆ ತೆಗೆದುಕೊಂಡ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬಸವನಗಿರಿ ಹಾಡಿಯಲ್ಲಿ ನಡೆದಿದೆ.

ಹಾಡಿಗೆ ಟಿವಿಎಸ್ ಮೊಫೆಡ್ನಲ್ಲಿ ಮಾರಾಟ ಮಾಡಲು ಬಂದಿದ್ದ ವ್ಯಕ್ತಿ ಹಾಲಿನ ಪ್ಯಾಕೇಟ್, ಮಕ್ಕಳು ತಿನ್ನುವ ತಿಂಡಿಯ ಜೊತೆ ಮದ್ಯ ಮಾರಾಟ ಕೂಡ ಮಾಡುತ್ತಿದ್ದ. ಇದನ್ನು ಗಮನಿಸಿದ ಮಹಿಳೆಯರು ಮದ್ಯ ಮಾರಾಟ ಮಾಡುತ್ತಿದ್ದವನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಮತ್ತೆ ಹಾಡಿಯತ್ತ ಬರದಂತೆ ವಾರ್ನಿಂಗ್ ಕೊಟ್ಟಿದ್ದಾರೆ. ಬಸವನಗಿರಿ ಹಾಡಿಯಲ್ಲಿ ಎಗ್ಗಿಲ್ಲದೆ ಅಕ್ರಮ ಮದ್ಯ ಮಾರಾಟ ದಂಧೆ ನಡೆಯುತ್ತಿದೆ. ಅಕ್ರಮ ಮದ್ಯ ಮಾರಾಟದ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೂ ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಹೀಗಾಗಿ ಗ್ರಾಮದ ಮಹಿಳೆಯರೇ ಮದ್ಯ ಮಾರುತ್ತಿದ್ದವನಿಗೆ ಬೈದು ಕಳಿಸಿದ್ದಾರೆ.

ಇಡೀ ದಿನ ಕೂಲಿ ಮಾಡಿ ಗಳಿಸಿದ ಹಣ ಮದ್ಯಕ್ಕೆ ಹಾಕುತ್ತಾರೆ. ಮನೆಯಲ್ಲಿ ಹೆಂಡತಿ ಮಕ್ಕಳು ಉಪವಾಸವಿದ್ದರೂ ಮದ್ಯಕ್ಕೆ ಹಣ ಬೇಕೇ ಬೇಕು. ಅಬಕಾರಿ ಇಲಾಖೆ ದೂರು ನೀಡಿದರೂ ಉಪಯೋಗ ಇಲ್ಲ ಎಂದು ಹಾಡಿ ಮಹಿಳೆಯರು ಆರೋಪಿಸಿದ್ದಾರೆ.

ಇದನ್ನೂ ಓದಿ: Batter: ಇನ್ಮುಂದೆ ಕ್ರಿಕೆಟ್​ನಲ್ಲಿ ‘ಬ್ಯಾಟ್ಸ್​ಮನ್’​ ಎನ್ನುವಂತಿಲ್ಲ: ಲಿಂಗ ಸಮಾನತೆಗಾಗಿ ‘ಬ್ಯಾಟರ್’ ಪದ ಬಳಕೆಗೆ ಆದೇಶ

ರಾಜ್ಯದಲ್ಲಿ ಇನ್ಮುಂದೆ ಭಾನುವಾರ ಕೊರೊನಾ ಲಸಿಕೆ ಸಿಗಲ್ಲ, ಆರೋಗ್ಯ ಇಲಾಖೆ ಸಿಬ್ಬಂದಿಗೆ ಭಾನುವಾರ ರಜೆ ದಿನ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ