Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಪೊಲೀಸ್ ಕಾನ್ಸ್​ಟೇಬಲ್​ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಭಾಗಿ

ಪೊಲೀಸ್ ಕಾನ್ಸಟೇಬಲ್ ನಿರ್ಗಮನ ಪಥಸಂಚಲನ ಆರಂಭವಾಗಿದ್ದು, 242 ಅಭ್ಯರ್ಥಿಗಳಲ್ಲಿ 21 ಅಭ್ಯರ್ಥಿಗಳು ಪಿಯುಸಿ ಮತ್ತು ಉಳಿದ ಎಲ್ಲರೂ ಪದವಿ ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಪೂರೈಸಿದವರಾಗಿದ್ದಾರೆ.

ಮಹಿಳಾ ಪೊಲೀಸ್ ಕಾನ್ಸ್​ಟೇಬಲ್​ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಭಾಗಿ
ಗೃಹ ಸಚಿವ ಆರಗ ಜ್ಞಾನೇಂದ್ರ
Follow us
TV9 Web
| Updated By: preethi shettigar

Updated on:Sep 28, 2021 | 12:20 PM

ಮೈಸೂರು: ಮಹಿಳಾ ಪೊಲೀಸ್ ಕಾನ್ಸ್​ಟೇಬಲ್​ ಪ್ರಶಿಕ್ಷಣರ್ಥಿಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಭಾಗಿಯಾಗಿದ್ದಾರೆ. ಮೈಸೂರು ಜಿಲ್ಲೆಯ ಜ್ಯೋತಿನಗರದ ಡಿಎ‌ಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಸದ್ಯ ಮಹಿಳಾ ಪೊಲೀಸ್ ಕಾನ್ಸ್​ಟೇಬಲ್ ನಿರ್ಗಮನ ಪಥಸಂಚಲನ  ಆರಂಭವಾಗಿದ್ದು, 242 ಅಭ್ಯರ್ಥಿಗಳಲ್ಲಿ 21 ಅಭ್ಯರ್ಥಿಗಳು ಪಿಯುಸಿ ಮತ್ತು ಉಳಿದ ಎಲ್ಲರೂ ಪದವಿ ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಪೂರೈಸಿದವರಾಗಿದ್ದಾರೆ.

ಮೈಸೂರಿನಲ್ಲಿ ಮಹಿಳಾ ಪೊಲೀಸ್ ಕಾನ್ಸ್​ಟೇಬಲ್​ ನಿರ್ಗಮನ ಪಥಸಂಚಲನ ಭಾಗಿಯಾದ ಅಭ್ಯರ್ಥಿಗಳು : ಎಂ‌ಎ 13 ಎಂಎಸ್​ಸಿ 11 ಎಂಕಾಂ 11 ಎಂಎ ಬಿಎಎಡ್ 02 ಎಂಎಸ್‌ಸಿ ಬಿಎಡ್ 01 ಬಿಇ 14 ಬಿಎಸ್​ಸಿ 23

police

ಪೊಲೀಸ್ ಕಾನ್ಸಟೇಬಲ್ ಪ್ರಶಿಕ್ಷಣರ್ಥಿಗಳ ನಿರ್ಗಮನ ಪಥಸಂಚಲನ

ಪೊಲೀಸರ ಮೇಲೂ ದೂರು ನೀಡಲು ವ್ಯವಸ್ಥೆ ಮಾಡಲಾಗಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸರ ಕಡೆಯಿಂದಲೂ ಇತ್ತೀಚೆಗೆ ಅಪರಾಧ ಹೆಚ್ಚುತ್ತಿವೆ. ಹೀಗಾಗಿ ಪೊಲೀಸರ ವಿರುದ್ಧವೂ ಎಸ್‌ಪಿ, ಡಿಜಿ ಕಚೇರಿಗಳಲ್ಲಿ ದೂರು ನೀಡಲು ವ್ಯವಸ್ಥೆ ಮಾಡಲಾಗಿದೆ. ಪೊಲೀಸರಿಂದ ಅಪರಾಧಕ್ಕೊಳಗಾದವರು ದೂರು ನೀಡಬೇಕು. ಅದಕ್ಕಾಗಿ ಅಗತ್ಯ ವಾತಾವರಣ ನಿರ್ಮಾಣ ಮಾಡಲು ವ್ಯವಸ್ಥೆ ಮಾಡಿದ್ದೇವೆ ಎಂದು ಮೈಸೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಬಳಿಕ ಮಹಿಳಾ ಪೊಲೀಸ್ ವ್ಯವಸ್ಥೆ ಕುರಿತು ಮಾತನಾಡಿದ ಅವರು, ಮಹಿಳೆ ಅಬಲೆ ಅಂತಾ ಏಕೆ ಹೇಳಿದರು ಗೊತ್ತಿಲ್ಲ. ನಾನು ಅಬಲೆ ಅಲ್ಲ ಸಬಲೆ. ನನ್ನನ್ನು ಮಾತ್ರವಲ್ಲ ಸಮಾಜವನ್ನು ರಕ್ಷಣೆ ಮಾಡುತ್ತೇನೆ ಎನ್ನುವುದನ್ನು ಮಹಿಳೆಯರು ತೋರಿಸಿದ್ದಾರೆ ಎಂದು ಹೇಳಿದರು.

ವಿದೇಶದಿಂದ ಬರುವ ಶತೃಗಳನ್ನು ಎದುರಿಸಲು ಸೈನಿಕರಿದ್ದಾರೆ. ನಮಗೆ ಸವಾಲಾಗಿರುವುದು 125 ಕೋಟಿಯ ಈ ದೇಶದ ಆತಂರಿಕ ರಕ್ಷಣೆ. ಇದನ್ನು ಸೈನಿಕರು ಮಾಡಲು ಸಾಧ್ಯವಿಲ್ಲ. ಇದನ್ನು ಮಾಡುತ್ತಿರುವುದು ಪೊಲೀಸರು. ಶಾಂತಿ ಸುವ್ಯವಸ್ಥೆ ಕಾಪಾಡುವ ಹೊಣೆಗಾರಿಕೆ ಉತ್ತಮವಾಗಿ ನಿರ್ವಹಿಸುತ್ತಿದೆ. ಪೊಲೀಸರು ಅಂದರೆ ಗಂಡಸರು ಎನ್ನುವ ಪರಿಕಲ್ಪನೆ ಇತ್ತು. ನೂರಕ್ಕೆ 25 ಭಾಗ ಮಹಿಳೆಯರು ಇರಬೇಕು. ಈಗ ಅದು ಬದಲಾಗಿದೆ ರಾಜ್ಯದಲ್ಲಿ ಶೇ. 10 ರಷ್ಟು ಇದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಪೊಲೀಸ್ ಕಾನ್ಸ್​ಟೇಬಲ್ ವಿದ್ಯಾರ್ಹತೆ ಪಿಯುಸಿ. ಆದರೆ ನಿಮ್ಮ ವಿದ್ಯಾರ್ಹತೆ ಪದವಿ ಸ್ನಾತಕೋತ್ತರ ಪದವಿ ಇದೆ. 242 ಜನರಲ್ಲಿ ಹೆಚ್ಚು ಅಭ್ಯರ್ಥಿಗಳು ಪದವಿ ಪಡೆದಿದ್ದೀರಿ. ಇದರಿಂದ ಪೊಲೀಸ್ ಇಲಾಖೆಯ ಶಿಸ್ತು ಸಂಯಮ ಇರಬೇಕು. ಪೊಲೀಸರ ಬಗ್ಗೆ ಜನರಿಗೆ ಭಯ ಇರಬಾರದು. ಅಪರಾಧಿಗಳಿಗೆ ದರೋಡೆಕೋರರ ಕ್ರಿಮಿನಲ್‌ಗಳಿಗೆ ಟೆರರ್ ಆಗಿರಬೇಕು. ಪೊಲೀಸ್ ಠಾಣೆಗೆ ಬರುವವರನ್ನು ಗೌರವಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಜಿಲ್ಲೆಗೊಂದು ಮಹಿಳಾ ಪೊಲೀಸ್ ಠಾಣೆಯ ಗುರಿ ಇತ್ತೀಚಿಗಿನ ಪ್ರಕರಣದ ಶೇ. 35 ರಷ್ಟು ಮಹಿಳೆಯರು ಮಕ್ಕಳ ಮೇಲಿನ ದೌರ್ಜನ್ಯ. ಮಹಿಳೆ ಎಲ್ಲವನ್ನು ಪುರುಷ ಅಧಿಕಾರಿ ಬಳಿ ಹೇಳಲು ಸಾಧ್ಯವಿಲ್ಲ. ಎಲ್ಲಾ ಪೊಲೀಸ್ ಠಾಣೆಯಲ್ಲಿ ಕನಿಷ್ಠ ಮೂವರು ಮಹಿಳಾ ಪೇದೆಯರು ಬೇಕು. ಜಿಲ್ಲೆಗೊಂದು ಮಹಿಳಾ ಪೊಲೀಸ್ ಠಾಣೆಯ ಗುರಿ ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ. ಇದನ್ನು ಪತ್ತೆ ಹಚ್ಚಲು ಅತ್ಯಾಧುನಿಕ ತರಬೇತಿ ಪೊಲೀಸ್ ಇಲಾಖೆ ಬಲಪಡಿಸಲು ಎಲ್ಲಾ ರೀತಿ ಕ್ರಮ ತೆಗೆದುಕೊಳ್ಳಲಾಗುತ್ತದೆ. ಎಫ್‌ಎಸ್‌ಎಲ್ ಲ್ಯಾಬ್ ಅವಶ್ಯಕತೆ ಇದೆ. ಎಫ್‌ಎಸ್‌ಎಲ್ ಲ್ಯಾಬ್‌ಗಳನ್ನು ಹೆಚ್ಚು ಬಲ ಪಡಿಸುತ್ತಿದ್ದೇವೆ ಎಂದು ಮೈಸೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮೈಸೂರು: ಹೆಣ್ಣು ಮಕ್ಕಳಿಗೆ ಸ್ವಯಂ ರಕ್ಷಣಾ ತರಬೇತಿ ಮೈಸೂರು ನಗರದ ಶಾಲಾ -ಕಾಲೇಜು‌ ಹೆಣ್ಣು ಮಕ್ಕಳಿಗೆ ಆಯೋಜಿಸಿರುವ ಸ್ವಯಂ ರಕ್ಷಣಾ ತರಬೇತಿ ತರಬೇತಿ ಕಾರ್ಯಕ್ರಮವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಉದ್ಘಾಟಿಸಿದ್ದಾರೆ. ನಗರದ ಕೆಎಸ್​ಆರ್​ಪಿ ಮೈದಾನದಲ್ಲಿ ನಡೆಯುತ್ತಿದೆ. ಪೋಲಿಸ್ ಇಲಾಖೆಯ ಕೆಎಸ್​ಆರ್​ಪಿ ಐದನೇ ತಂಡದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಎಡಿಜಿಪಿ ಅಲೋಕ್ ಕುಮಾರ್, ಸ್ವಯಂ ರಕ್ಷಣಾ ಕುರಿತು ಗೃಹ ಸಚಿವರಿಗೆ ಪ್ರದರ್ಶನ ಮಾಡಿದ ಹೆಣ್ಣು ಮಕ್ಕಳು, ನಗರ ಪೋಲಿಸ್ ಆಯುಕ್ತ ಡಾ. ಚಂದ್ರಗುಪ್ತ, ಎಸ್​ಪಿ ಚೇತನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ:

ಈ ಮೊದಲು ಜೈಲಿನಲ್ಲಿದ್ದವರು ಯಾರೂ ಗೃಹ ಸಚಿವರಾಗಿಲ್ಲ; ಬಂಧಿಖಾನೆ ಮಂಡಳಿ ವಿಧೇಯಕ ಚರ್ಚೆ ವೇಳೆ ಆರಗ ಜ್ಞಾನೇಂದ್ರ

ಈ ಮೊದಲು ಜೈಲಿನಲ್ಲಿದ್ದವರು ಯಾರೂ ಗೃಹ ಸಚಿವರಾಗಿಲ್ಲ; ಬಂಧಿಖಾನೆ ಮಂಡಳಿ ವಿಧೇಯಕ ಚರ್ಚೆ ವೇಳೆ ಆರಗ ಜ್ಞಾನೇಂದ್ರ

Published On - 10:25 am, Tue, 28 September 21

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ