AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ 2024: ಇಂದು ವಿಶ್ವವಿಖ್ಯಾತ ಜಂಬೂಸವಾರಿ, ಸಿಎಂ ಸಿದ್ದರಾಮಯ್ಯ ಚಾಲನೆ

ನವರಾತ್ರಿ ಬಳಿಕ ಬರುವುದು ವಿಜಯದಶಮಿ. ಈ ದಿನ ಮೈಸೂರಿನಲ್ಲಿ ಜಂಬೂಸವಾರಿ ನಡೆಯಲಿದೆ. 750ಕೆಜಿಯ ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ರಾಜಬೀದಿಗಳಲ್ಲಿ ರಾಜಗಾಂಭಿರ್ಯದಿಂದ ಸಾಗುತ್ತಾನೆ. ಜಂಬೂಸವಾರಿ ನಡೆಯುವ ಸಮಯ, ಇಂದು ಏನೆಲ್ಲ ಕಾರ್ಯಕ್ರಮಗಳು ನಡೆಯುತ್ತವೆ ಎಂಬ ಮಾಹಿತಿ ಇಲ್ಲಿದೆ.

ಮೈಸೂರು ದಸರಾ 2024: ಇಂದು ವಿಶ್ವವಿಖ್ಯಾತ ಜಂಬೂಸವಾರಿ, ಸಿಎಂ ಸಿದ್ದರಾಮಯ್ಯ ಚಾಲನೆ
ಜಂಬೂಸವಾರಿ
ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on:Oct 12, 2024 | 7:43 AM

Share

ಮೈಸೂರು, ಅಕ್ಟೋಬರ್​ 12: ಇಂದು (ಅ.12) ವಿಜಯದಶಮಿ (ದಸರಾ) (Dasara) ನಿಮಿತ್ತ ಅರಮನೆ ನಗರಿ ಮೈಸೂರಿನಲ್ಲಿ ಜಂಬೂಸವಾರಿ ನಡೆಯಲಿದೆ. 750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಅಭಿಮನ್ಯು (Abhimanyu) ಆನೆ ರಾಜ ಗಾಂಭಿರ್ಯದಿಂದ ರಾಜಬೀದಿಗಳಲ್ಲಿ ಸಾಗುತ್ತಾನೆ (Jambu Savari).

ಬೆಳಗ್ಗೆ 8ಕ್ಕೆ ಚಾಮುಂಡಿ ಬೆಟ್ಟದಿಂದ ಉತ್ಸವ ಮೂರ್ತಿ ಮೆರವಣಿಗೆ ಮೂಲಕ ಅರಮನೆಗೆ ಆಗಮಿಸುತ್ತದೆ. ನಂತರ 10.15ಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಉತ್ತರ ಪೂಜೆ ಮಾಡಲಿದ್ದಾರೆ. ಈ ವೇಳೆ ಅರಮನೆಗೆ ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಕುದುರೆ ಸವಾರಿ ತೊಟ್ಟಿಗೆ ಆಗಮಿಸಲಿವೆ. ಬಳಿಕ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ 10.45ರಿಂದ ಬೆಳಗ್ಗೆ 11ರೊಳಗೆ ಜಟ್ಟಿ ಕಾಳಗ ನಡೆಯುತ್ತದೆ.

ನಂತರ 11.20 ರಿಂದ 11.45ರವರೆಗೆ ಅರಮನೆ ಅಂಗಳದ ಭುವನೇಶ್ವರಿ ದೇಗುಲಕ್ಕೆ ವಿಜಯಯಾತ್ರೆ ಸಾಗುತ್ತದೆ. ಇಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬನ್ನಿಪೂಜೆ ನೆರವೇರಿಸುತ್ತಾರೆ. ನಂತರ ಅರಮನೆಗೆ ಆಗಮಿಸಿ ಕಂಕಣ ವಿಸರ್ಜನೆ ಮಾಡುತ್ತಾರೆ.

ಮಧ್ಯಾಹ್ನ ಶುಭ ಮಕರ‌ ಲಗ್ನದಲ್ಲಿ 1.41ರಿಂದ 2.10ರ ನಡುವೆ ನಂದಿ ಧ್ವಜಕ್ಕೆ ಪೂಜೆ ನೆರವೇರಿಸಲಾಗುತ್ತದೆ. ಬಳಿಕ ಸಂಜೆ ಕುಂಭ ಲಗ್ನ 4 ರಿಂದ 4.30ರ ನಡುವೆ ಜಂಬೂಸವಾರಿಗೆ ಚಾಲನೆ ದೊರೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ದೇವಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ. ಜಂಬೂಸವಾರಿ ವೀಕ್ಷಿಸಲು ಅರಮನೆ ಅಂಗಳದಲ್ಲಿ 40 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಜಗಮಗಿಸೋ ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು

ಹೇಗಿರಲಿದೆ ನಂದಿ ಧ್ವಜ ಸ್ತಂಭ

ಮೈಸೂರಿನ ಮಹದೇವಪ್ಪ ಕುಟುಂಬದ ಐದು ತಲೆ ಮಾರುಗಳು ನಂದಿಧ್ವಜ ಸ್ತಂಭ ನಿರ್ವಹಣೆ ಮಾಡುತ್ತಿವೆ. 130 ಕೆಜಿ ತೂಕದ ನಂದಿಧ್ವಜ ಸ್ಥಂಭ ಒಟ್ಟು 33 ಅಡಿ ಇದೆ. ನಂದಿ ಧ್ವಜ ಸ್ತಂಭ ನಂದಿ ವಿಗ್ರಹ, ತಟ್ಟೆ, ಬಿರಡೆ, ಪಂಚ ಕಳಸ ಮತ್ತು ನಂದಿ ಧ್ವಜವನ್ನು ಒಳಗೊಂಡಿದೆ. ನಂದಿ ಧ್ವಜ ಸ್ತಂಭ ದಕ್ಷ ಬ್ರಹ್ಮನ ಕಥೆಯನ್ನು ಒಳಗೊಂಡಿದೆ. ಶಿವನ ಲಾಂಛನ ನಂದಿಗೆ ಪೂಜೆ ಮಾಡಲಾಗುತ್ತದೆ.

ಹೇಗಿದೆ ಅಂಬಾರಿ

ಸುಮಾರು 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಅತ್ಯಂತ ಆಕರ್ಷಕವಾಗಿ ಕೆತ್ತಲಾಗಿದೆ. ಹಿಂದೆ ಅಂಬಾರಿಯಲ್ಲಿ ಮಹಾರಾಜರು ಕುಳಿತು ಸಾಗುತ್ತಿದ್ದರು. ಅಂಬಾರಿಯ ಒಳಗೆ ಇಬ್ಬರು ಕುಳಿತುಕೊಳ್ಳಲು ಅವಕಾಶವಿದೆ. ಅಂಬಾರಿಯಲ್ಲಿ ಕುಳಿತುಕೊಳ್ಳಲು ರತ್ನಗಂಬಳಿಯ ಮೆತ್ತನೆಯ ಹಾಸಿಗೆ ಇರುತ್ತದೆ. ಅಂಬಾರಿ ಮೇಲ್ಭಾಗದಲ್ಲಿ ಎರಡು ಪಂಚ‌ಕಳಸ, ಆಕರ್ಷಕ ಹೂವಿನ ಚಿತ್ತಾರವಿದೆ. ಅಂಬಾರಿ ಮೇಲೆ ಕೆಂಪು ಹಾಗೂ ಹಸಿರು ದೀಪ ಅಳವಡಿಸಲಾಗಿದೆ. ಅಂಬಾರಿಯಲ್ಲಿ ದರ್ಬಾರ್ ಹಾಲ್ ಮಾದರಿಯ 16 ಸ್ಥಂಭಗಳುಗಳಿವೆ.

ಕೆಳ ಭಾಗದಲ್ಲಿ ಸಿಂಹದ ಕಾಲು ಮತ್ತು ಮುಖ ಇದೆ. ರಾಜ ಆಳ್ವಿಕೆಯ ನಂತರ ಮೊದಲು ಅಂಬಾರಿಯಲ್ಲಿ ಕನ್ನಡಾಂಬೆ ಭುವನೇಶ್ವರಿ ಮೂರ್ತಿ ಮೆರವಣಿಗೆ ಮಾಡಲಾಯಿತು. ನಂತರ ನಾಡದೇವತೆ ತಾಯಿ ಚಾಮುಂಡೇಶ್ವರಿ ಮೂರ್ತಿ ಮೆರವಣಿಗೆ ಮಾಡಲಾಗುತ್ತಿದೆ.

ಪೊಲೀಸ್ ಬಿಗಿ ಬಂದೋಬಸ್ತ್

ಇಂದು ವಿಶ್ವವಿಖ್ಯತ ಜಂಬೂಸವಾರಿ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಈ ಬಾರಿಯ ದಸರಾ ಮಹೋತ್ಸವಕ್ಕೆ ಎರಡು ಹಂತದ ಭದ್ರತೆ ಮಾಡಲಾಗಿದೆ. ಜಂಬೂಸವಾರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ದಸರಾ ಮಹೋತ್ಸವಕ್ಕೆ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿರುವ ನಾಲ್ಕ ಸಾವಿರಕ್ಕೂ ಹೆಚ್ಚು ಪೊಲೀಸರು ಕಾವಲು ಇದ್ದಾರೆ. ಜಂಬೂಸವಾರಿ ಮೆರವಣಿಗೆ ಸಾಗುವ ಮಾರ್ಗ ಸೇರಿದಂತೆ ಆಯಕಟ್ಟಿನ ಜನನಿಬಿಡ ಸ್ಥಳದಲ್ಲಿ ಸಿಸಿ ಕ್ಯಾಮರಾಗಳ ಅಳವಡಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:41 am, Sat, 12 October 24

Follow Us
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್