Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru-Mysore Expressway: ರಾಂಗ್​ ಸೈಡ್​​ನಲ್ಲಿ ಬರುವ ಕೆಎಸ್​ಆರ್​ಟಿಸಿ ಬಸ್​ಗಳಿಂದ ಪ್ರಾಯಾಣಿಕರ ಜೀವಕ್ಕೆ ಕುತ್ತು, ಸುತ್ತೋಲೆ ಹೊರಡಿಸಿದ ನಿಗಮ

ಕೆಎಸ್​ಆರ್​​ಟಿಸಿ ಚಾಲಕರು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಚಾಲಕರು ನಿಯಮ ಉಲ್ಲಂಘಿಸಿದರೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಿಗಮವು ಎಚ್ಚರಿಕೆ ನೀಡಿದೆ.

Bengaluru-Mysore Expressway: ರಾಂಗ್​ ಸೈಡ್​​ನಲ್ಲಿ ಬರುವ ಕೆಎಸ್​ಆರ್​ಟಿಸಿ ಬಸ್​ಗಳಿಂದ ಪ್ರಾಯಾಣಿಕರ ಜೀವಕ್ಕೆ ಕುತ್ತು, ಸುತ್ತೋಲೆ ಹೊರಡಿಸಿದ ನಿಗಮ
ಕೆಎಸ್​ಆರ್​ಟಿಸಿ ಬಸ್​
Follow us
ವಿವೇಕ ಬಿರಾದಾರ
|

Updated on:Apr 23, 2023 | 12:27 PM

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ದೇಶದಲ್ಲೇ ಅತ್ಯುತ್ತಮ ಸಂಪರ್ಕ ಸಾರಿಗೆಯಾಗಿದೆ. ಹೊಸ ತಂತ್ರಜ್ಞಾನಗಳನ್ನು ಮತ್ತು ಬಸ್​ಗಳು ಅಳವಡಿಸಿಕೊಳ್ಳುವ ಮುಖಾಂತರ ಸಾಕಷ್ಟು ಹೆಸರು ಮಾಡಿದೆ. ಜೊತೆಗೆ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸುತ್ತಿರುತ್ತದೆ. ಈ ಹಿನ್ನೆಲೆ ನಿಗಮ ಸುತ್ತೋಲೆ ಹೊರಡಿಸಿದ್ದು, ಚಾಲಕರು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಒಂದ ವೇಳೆ ಚಾಲಕರು ನಿಯಮ ಉಲ್ಲಂಘಿಸಿದರೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಹೌದು ಕೆಎಸ್​​ಆರ್​ಟಿಸಿ ಬಸ್​ಗಳು ಇತ್ತೀಚಿಗೆ ಉದ್ಘಾಟನೆಗೊಂಡ ಬೆಂಗಳೂರು-ಮೈಸೂರು ಚತುಷ್ಪತ ಹೆದ್ದಾರಿಯಲ್ಲಿ ತಪ್ಪಾದ ಲೈನ್​ನಲ್ಲಿ ಸಂಚರಿಸುತ್ತಿವೆ. ಅಲ್ಲದೇ ಚಾಲಕರು ಪ್ರಯಾಣಿಕರನ್ನು ತಪ್ಪಾದ ಲೈನ್​ನಲ್ಲಿ ಇಳಿಸುತ್ತಿದ್ದಾರೆ ಎಂದು ಸಾರ್ವಜನಿಕರು ಕೆಎಸ್​​ಆರ್​​ಟಿಸಿಗೆ ದೂರು ನೀಡಿದ ಹಿನ್ನೆಲೆ ನಿಗಮ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿನ ಟೋಲ್ ಶುಲ್ಕವನ್ನು ತಪ್ಪಿಸಲು ಕೆಎಸ್‌ಆರ್‌ಟಿಸಿ ಬಸ್‌ಗಳು ಯು-ಟರ್ನ್ ತೆಗೆದುಕೊಂಡು ತಪ್ಪು ದಿಕ್ಕಿನಲ್ಲಿ ಬರುತ್ತಿವೆ ಎಂದು ಖಾಸಗಿ ವಾಹನ ಸವಾರರು ನಿಗಮಕ್ಕೆ ದೂರು ನೀಡಿದ್ದಾರೆ.

ಇದನ್ನೂ ಓದಿ: Toll charge takes toll on motorists: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ಹಾಗೆ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲೂ ಟೋಲ್ ದರ ಹೆಚ್ಚಳ

ಎಕ್ಸ್‌ಪ್ರೆಸ್‌ವೇನಲ್ಲಿರುವ ಕಣಿಮಿಣಿಕೆ ಟೋಲ್ ಪ್ಲಾಜಾ ಬಳಿ ಕೆಎಸ್​ಆರ್​ಟಿಸಿ ಬಸ್​ಗಳು ವಿರುದ್ಧ ದಿಕ್ಕಿನಲ್ಲಿ ಬರುವುದನ್ನು ನಾವು ನೋಡಿದ್ದೇವೆ. ಎದರಿಗೆ ಖಾಸಗಿ ವಾಹನಗಳು ಬರುವುದನ್ನು ಕಂಡರೂ ಕೂಡ ಬಸ್​​ ಚಾಲಕರು ತಲೆಕೆಡಿಸಿಕೊಳ್ಳದೆ, ವಿರುದ್ಧ ದಿಕ್ಕಿನಿಂದ ಬರುತ್ತಾರೆ. ಇದರಿಂದ ಭೀಕರ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುತ್ತದೆ ಎಂದು ಓರ್ವ ಪ್ರಯಾಣಿಕರು ಹೇಳಿದ್ದಾರೆ.

ನಮ್ಮ ಚಾಲಕರು ನಿಯಮಿತವಾಗಿ ಸಂವೇದನಾಶೀಲರಾಗಿರುತ್ತಾರೆ ಮತ್ತು ಸಂಚಾರಿ ನಿಯಮಗಳ ಉಲ್ಲಂಘನೆ ಪ್ರಕರಣಗಳ ಸಂಖ್ಯೆಯು ಕಡಿಮೆಯಾಗಿದೆ, ಇದಕ್ಕಾಗಿ ನಿಗಮವು ಸಂಚಾರಿ ಪೊಲೀಸರಿಗೆ ಅಭಿನಂದಿಸುತ್ತೇವೆ. ತಪ್ಪು ದಾರಿಯಲ್ಲಿ ಬರುವ ಚಾಲಕರಿಗೆ ಸಂಚಾರ ನಿಯಮ ಪಾಲಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ ಅನ್ಬುಕುಮಾರ್ ತಿಳಿಸಿದ್ದಾರೆ.

ಕಳೆದ ತಿಂಗಳೂರು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ರಾಂಗ್​ ಸೈಡ್​​ನಿಂದ ಬಸ್​ನಿಂದ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದರು. ಈ ತಿಂಗಳ ಆರಂಭದಲ್ಲಿ ದೇವನಹಳ್ಳಿ ಹೆದ್ದಾರಿಯಲ್ಲಿ ಮತ್ತೊಂದು ಸಾವು ಸಂಭವಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:27 pm, Sun, 23 April 23

ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ