AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡಿ ಬೆಟ್ಟ ಉಳಿಸಿ ಅಭಿಯಾನಕ್ಕೆ ಕೈಜೋಡಿಸಲು ಸಾಮಾಜಿಕ ಜಾಲತಾಣದಲ್ಲಿ ಯದುವೀರ್ ಒಡೆಯರ್ ಕರೆ

ಮಿತಿ ಮೀರಿರುವ ಅಭಿವೃದ್ಧಿ ವೇಗಕ್ಕೆ ಕಡಿವಾಣ ಹಾಕಿ ಪರಿಸರ ಸಮತೋಲನವನ್ನು ಬೆಟ್ಟದಲ್ಲಿ ಕಾಪಾಡಿಕೊಳ್ಳಬೇಕು ಎನ್ನುವುದು ಕಳಕಳಿ. ಈ ನಿಟ್ಟಿನಲ್ಲಿ ಮೈಸೂರಿನ ಹಲವು ಸಂಘಟನೆಗಳು ಮೈಸೂರು ಗ್ರಾಹಕರ ಪರಿಷತ್ ಸೇರಿದಂತೆ ಹಲವರು ಇದಕ್ಕೆ ಬಲ ನೀಡಿದ್ದಾರೆ.

ಚಾಮುಂಡಿ ಬೆಟ್ಟ ಉಳಿಸಿ ಅಭಿಯಾನಕ್ಕೆ ಕೈಜೋಡಿಸಲು ಸಾಮಾಜಿಕ ಜಾಲತಾಣದಲ್ಲಿ ಯದುವೀರ್ ಒಡೆಯರ್ ಕರೆ
ಯದುವೀರ್ ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಚಾಮುಂಡಿ ಬೆಟ್ಟ ಉಳಿಸಿ ಅಭಿಯಾನಕ್ಕೆ ಕೈಜೋಡಿಸಲು ಕರೆ ನೀಡಿದ್ದಾರೆ
TV9 Web
| Edited By: |

Updated on: Nov 14, 2021 | 11:00 AM

Share

ಮೈಸೂರು: ಚಾಮುಂಡಿ ಬೆಟ್ಟ (Chamundi Hills) ಉಳಿಸಿ ಅಭಿಯಾನಕ್ಕೆ ಕೈಜೋಡಿಸಲು ಯದುವೀರ್ ಒಡೆಯರ್ (Yaduveer Wadiyar) ಕರೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಯದುವೀರ್ ಒಡೆಯರ್ ಕರೆ ನೀಡಿದ್ದು, ನಿಮ್ಮ ಒಂದು ಸಹಿ ಚಾಮುಂಡಿ ಬೆಟ್ಟವನ್ನು ಉಳಿಸಬಹುದು. ಮೈಸೂರಿನ ಮುಕುಟಪ್ರಾಯದಂತಿರುವ ಚಾಮುಂಡಿ ಬೆಟ್ಟವನ್ನು ಭವಿಷ್ಯದ ಮೈಸೂರಿನ ಸುರಕ್ಷತೆಗಾಗಿಯಾದ್ರೂ ಉಳಿಸಬೇಕು. ಮಿತಿ ಮೀರಿರುವ ಅಭಿವೃದ್ಧಿ ವೇಗಕ್ಕೆ ಕಡಿವಾಣ ಹಾಕಿ, ಬೆಟ್ಟದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳಬೇಕು. ಈ ಸಹಿ ಆಂದೋಲನಕ್ಕೆ ನಾನು ಕೈಜೋಡಿಸಿದ್ದೇನೆ. ನೀವೂ ಕೈಜೋಡಿಸಿ ಅಂತ ಯದುವೀರ್ ಒಡೆಯರ್ ಕರೆ ನೀಡಿದ್ದಾರೆ.

ಮಿತಿ ಮೀರಿರುವ ಅಭಿವೃದ್ಧಿ ವೇಗಕ್ಕೆ ಕಡಿವಾಣ ಹಾಕಿ ಪರಿಸರ ಸಮತೋಲನವನ್ನು ಬೆಟ್ಟದಲ್ಲಿ ಕಾಪಾಡಿಕೊಳ್ಳಬೇಕು ಎನ್ನುವುದು ಕಳಕಳಿ. ಈ ನಿಟ್ಟಿನಲ್ಲಿ ಮೈಸೂರಿನ ಹಲವು ಸಂಘಟನೆಗಳು ಮೈಸೂರು ಗ್ರಾಹಕರ ಪರಿಷತ್ ಸೇರಿದಂತೆ ಹಲವರು ಇದಕ್ಕೆ ಬಲ ನೀಡಿದ್ದಾರೆ. ಈ ಸಹಿ ಆಂದೋಲನಕ್ಕೆ ನಾನು ಕೈಜೋಡಿಸಿದ್ದೇನೆ. ನೀವೂ ಕೈ ಜೋಡಿಸಿ ಬೆಟ್ಟ ಉಳಿಸಿ ಅಂತ ಸಾಮಾಜಿಕ ಜಾಲತಾಣದಲ್ಲಿ ಯದುವೀರ್ ಒಡೆಯರ್ ತಿಳಿಸಿದ್ದಾರೆ.

ನಿರಂತರ ಮಳೆಯಿಂದಾಗಿ ಚಾಮುಂಡಿ ಬೆಟ್ಟ ಕುಸಿಯುತ್ತಿದೆ. ಈ ನಡುವೆ ಸರ್ಕಾರ ಕಾಮಗಾರಿ ಮಾಡಲು ಹೊರಟಿದೆ. ಸರ್ಕಾರದ ನಡೆಗೆ ಇತಿಹಾಸ ತಜ್ಞರು ಮತ್ತು ಸಾರ್ವಜನಿಕರು ಅಸಮಧಾನ ಹೊರಹಾಕಿದ್ದಾರೆ. ಮಾತ್ರವಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಸೇವ್ ಚಾಮುಂಡಿ ಮೂಮೆಂಟ್ ಎಂಬ ಹೆಸರಿನಲ್ಲಿ ಚಾಮುಂಡಿ ಬೆಟ್ಟ ಉಳಿಸಿ ಅಭಿಯಾನ ಶುರುವಾಗಿದೆ. ಈ ಅಭಿಯಾನಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕೈ ಜೋಡಿಸಿದ್ದಾರೆ.

ಇದನ್ನೂ ಓದಿ

ಕರ್ನಾಟಕ ಸರ್ಕಾರದ ಶುಲ್ಕ ಆದೇಶಕ್ಕೆ ಖಾಸಗಿ ಶಾಲೆಗಳು ಗರಂ; ಕೋರ್ಟ್ ಮೆಟ್ಟಿಲೇರಲು ನಿರ್ಧಾರ

ದೀರ್ಘಾವಧಿ ಹೂಡಿಕೆ ಕುರಿತ ನಮ್ಮ ತಿಳುವಳಿಕೆ ಹೆಚ್ಚಿಸಿಕೊಳ್ಳಬೇಕು ಮತ್ತು ಭಯಮುಕ್ತರಾಗಿ ಹಣ ಹೂಡಬೇಕು: ಡಾ ಬಾಲಾಜಿ ರಾವ್

Follow Us
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!