ಅಶ್ವಿನಿ ವೈಷ್ಣವ್ರನ್ನ ಭೇಟಿ ಮಾಡಿದ ಯದುವೀರ್: ಮೈಸೂರು ರೈಲ್ವೆ ಯೋಜನೆಗಳನ್ನ ತ್ವರಿತವಾಗಿ ಪೂರ್ಣಗೊಳಿಸಲು ಮನವಿ
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದೆಹಲಿಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ರನ್ನು ಭೇಟಿ ಮಾಡಿ ಮೈಸೂರಿನ ರೈಲ್ವೆ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಮನವಿ ಮಾಡಿದ್ದಾರೆ. ಐತಿಹಾಸಿಕ ಮೈಸೂರು ರೈಲ್ವೆ ನಿಲ್ದಾಣದ ಆಧುನೀಕರಣ ಮತ್ತು ವಿಮಾನ ನಿಲ್ದಾಣ ವಿಸ್ತರಣೆಗೆ ರೈಲ್ವೆ ಹಳಿ ಸ್ಥಳಾಂತರ ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ.

ಮೈಸೂರು, ಏಪ್ರಿಲ್ 05: ದೆಹಲಿಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ರನ್ನು (Ashwini Vaishnaw) ಭೇಟಿ ಮಾಡಿರುವ ಸಂಸದ ಯದುವೀರ್ ಒಡೆಯರ್ (Yaduveer Krishnadatta Chamaraja Wadiyar) ಮೈಸೂರಿನ ರೈಲ್ವೆ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಮನವಿ ಮಾಡಿದ್ದಾರೆ. ಐತಿಹಾಸಿಕ ಮೈಸೂರು ರೈಲ್ವೆ ನಿಲ್ದಾಣದ ಆಧುನೀಕರಣಗೊಳಿಸುವುದು ಮತ್ತು ಏರ್ಪೋರ್ಟ್ ವಿಸ್ತರಣೆಗೆ ಅನುಕೂಲವಾಗುವಂತೆ ರೈಲ್ವೆ ಹಳಿ ಸ್ಥಳಾಂತರ ಬಗ್ಗೆ ಚರ್ಚೆ ಮಾಡಲಾಗಿದ್ದು, ನಮ್ಮ ಮನವಿಗೆ ಸಚಿವ ವೈಷ್ಣವ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ಯದುವೀರ್ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ಯದುವೀರ್, ನಿನ್ನೆ ದೇಹಲಿಯಲ್ಲಿ ಕೇಂದ್ರ ಸರ್ಕಾರದ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದೆ. ಮೈಸೂರಿನಲ್ಲಿರುವ ರೈಲ್ವೆ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಹಾಗೂ ಐತಿಹಾಸಿಕ ಮೈಸೂರು ರೈಲ್ವೆ ನಿಲ್ದಾಣದ ಆಧುನೀಕರಣಗೊಳಿಸುವ ಕುರಿತು ಮತ್ತು ಮೈಸೂರಿನಲ್ಲಿ ವಿಮಾನ ನಿಲ್ದಾಣದ ವಿಸ್ತರಣೆಗೆ ಅನುಕೂಲವಾಗುವಂತೆ ರೈಲ್ವೆ ಹಳಿಗಳ ಸ್ಥಳಾಂತರ ವಿಷಯದ ಕುರಿತು ಸಚಿವರಿಗೆ ಸಲ್ಲಿಸಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಅವರು ಸದರಿ ಯೋಜನೆಗಳ ತ್ವರಿತ ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆಂದು ತಿಳಿಸಿದ್ದಾರೆ.
ಯದುವೀರ್ ಟ್ವೀಟ್
ಇಂದು ದೇಹಲಿಯಲ್ಲಿ ಕೇಂದ್ರ ಸರ್ಕಾರದ ರೈಲ್ವೆ ಸಚಿವರಾದ ಸನ್ಮಾನ್ಯ ಶ್ರೀ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿˌ ಮೈಸೂರಿನಲ್ಲಿರುವ ರೈಲ್ವೆ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಹಾಗೂ ಐತಿಹಾಸಿಕ ಮೈಸೂರು ರೈಲ್ವೆ ನಿಲ್ದಾಣದ ಆಧುನೀಕರಣಗೊಳಿಸುವ ಕುರಿತು ಮತ್ತು ಮೈಸೂರಿನಲ್ಲಿ ವಿಮಾನ ನಿಲ್ದಾಣದ ವಿಸ್ತರಣೆಗೆ ಅನುಕೂಲವಾಗುವಂತೆ… pic.twitter.com/ZABpSG6Tlf
— Yaduveer Wadiyar (@yaduveerwadiyar) April 4, 2025
ನಮ್ಮ ಎಲ್ಲಾ ಬೇಡಿಕೆಗಳಿಗೆ, ಮೈಸೂರಿನ ಅಭಿವೃದ್ದಿ ಯೋಜನೆಗಳಿಗೆ ಸಹಕರಿಸಿ, ಬೆಂಬಲಿಸಿ ಅವುಗಳನ್ನು ಶೀಘ್ರ ಅನುಷ್ಠಾನಕ್ಕೆ ತರಲು ನೆರವಾಗುತ್ತಿರುವ ಸಚಿವರಿಗೆ ಈ ಮೂಲಕ ಮೈಸೂರು-ಕೊಡಗು ಜನತೆಯ ಪರವಾಗಿ ಸಂಸದ ಯದುವೀರ್ ಒಡೆಯರ್ ತುಂಬು ಹೃದಯದ ಧನ್ಯವಾದ ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತ ವಿನಯ್ ಸಾವಿಗೆ ಸಂಸದ ಯದುವೀರ್ ಸಂತಾಪ
ಕೊಡಗು ಬಿಜೆಪಿ ಸೆಲ್ನ ಸಾಮಾಜಿಕ ಮಾಧ್ಯಮ ವ್ಯವಸ್ಥಾಪಕ ವಿನಯ್ ಅವರ ದುರಂತ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಅವರ ಡೇತ್ ನೋಟ್ ಪ್ರಕಾರ, ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದ ಕೆಲವು ವ್ಯಕ್ತಿಗಳಿಂದ ನಿರಂತರ ಕಿರುಕುಳ ಮತ್ತು ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದ್ದರಿಂದ ಅವರು ಅಪಾರ ಮಾನಸಿಕ ಒತ್ತಡದಲ್ಲಿದ್ದರು ಎಂಬುದು ಸ್ಪಷ್ಟವಾಗಿದೆ ಎಂದಿದ್ದಾರೆ.
ಇದನ್ನೂ ಓದಿ: ಮೈಸೂರು ಕುಶಾಲನಗರ ಹೆದ್ದಾರಿ ನಿರ್ಮಾಣ: ಕೇಂದ್ರದಿಂದ ಕರ್ನಾಟಕಕ್ಕೆ ಗುಡ್ ನ್ಯೂಸ್
ಸಣ್ಣಪುಟ್ಟ ವಿಷಯಗಳಿಗೆ ಪದೇ ಪದೇ ಎಫ್ಐಐ ದಾಖಲಾಗುವುದರಿಂದ ಕೊಡಗಿನ ಅಭಿವೃದ್ಧಿಗಾಗಿ ಸಮರ್ಪಿತವಾಗಿರುವ ಯುವ ಕಾರ್ಯಕರ್ತನ ಮೇಲೆ ಅಸಹನೀಯ ಒತ್ತಡ ಉಂಟಾಗಿದೆ. ರಾಜಕೀಯ ಸೇಡಿನ ಈ ಕೃತ್ಯವು ಅತ್ಯಂತ ಖಂಡನೀಯ ಎಂದರು.
ಯದುವೀರ್ ಟ್ವೀಟ್
ಕೊಡಗು ಬಿಜೆಪಿ ಸೆಲ್ನ ಸಾಮಾಜಿಕ ಮಾಧ್ಯಮ ವ್ಯವಸ್ಥಾಪಕ ವಿನಯ್ ಅವರ ದುರಂತ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆವ.ಅವರ ಡೇತ್ ನೋಟ್ ಪ್ರಕಾರ, ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದ ಕೆಲವು ವ್ಯಕ್ತಿಗಳಿಂದ ನಿರಂತರ ಕಿರುಕುಳ ಮತ್ತು ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದ್ದರಿಂದ ಅವರು ಅಪಾರ ಮಾನಸಿಕ ಒತ್ತಡದಲ್ಲಿದ್ದರು ಎಂಬುದು… pic.twitter.com/ils9ijlWKl
— Yaduveer Wadiyar (@yaduveerwadiyar) April 4, 2025
ವಿನಯ್ಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಲು ನಾವು ಎಲ್ಲಾ ಕಾನೂನು ಮಾರ್ಗಗಳನ್ನು ಅನುಸರಿಸುತ್ತೇವೆ ಮತ್ತು ಈ ದುಃಖ ದ ಸಂಧರ್ಭದಲ್ಲಿ ನನ್ನ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಕೊಡಗಿನ ಜನರ ಸೇವೆಯಲ್ಲಿ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಂತ ವಿನಯ್ ಅವರ ಕುಟುಂಬ, ಸ್ನೇಹಿತರು ಮತ್ತು ಎಲ್ಲಾ ಸಹ ಕಾರ್ಯಕರ್ತರ ಜೋತೆ ಸದಾ ನಿಲ್ಲುತೇನೆ ಎಂದು ಹೇಳಿದ್ದಾರೆ.
ಕರ್ನಾಟದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:12 am, Sat, 5 April 25