AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಸುಟ್ಟ ಸ್ಥಿತಿಯಲ್ಲಿ ವೃದ್ಧೆ ಶವ ಪತ್ತೆ, ಮೊಮ್ಮಗನೇ ಅಜ್ಜಿಯನ್ನು ಕೊಂದಿರುವ ಸಂಗತಿ ಬೆಳಕಿಗೆ

ಮೈಸೂರಿನ ಕೆಆರ್​ಎಸ್ ಹಿನ್ನೀರಿನ ಪ್ರದೇಶದಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮೊಮ್ಮಗನೇ ಅಜ್ಜಿಯನ್ನು ಕೊಂದಿರುವ ಸಂಗತಿ ಬೆಳಕಿಗೆ ಬಂದಿದೆ.

ಮೈಸೂರು:  ಸುಟ್ಟ ಸ್ಥಿತಿಯಲ್ಲಿ ವೃದ್ಧೆ ಶವ ಪತ್ತೆ, ಮೊಮ್ಮಗನೇ ಅಜ್ಜಿಯನ್ನು ಕೊಂದಿರುವ ಸಂಗತಿ ಬೆಳಕಿಗೆ
ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: Jun 08, 2023 | 11:41 AM

Share

ಮೈಸೂರು: ಅಜ್ಜಿಯ ಬೈಗುಳ ಸಹಿಸಿಕೊಳ್ಳಲಾಗದೆ ಮೊಮ್ಮಗನೇ ಅಜ್ಜಿಯನ್ನು ಕೊಲೆಗೈದು ಶವಕ್ಕೆ ಬೆಂಕಿ ಹಚ್ಚಿದ್ದ ಮೊಮ್ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಗಾಯತ್ರಿಪುರಂ ನಿವಾಸಿ ಸುಪ್ರೀತ್‌ (23) ಕೊಲೆ ಮಾಡಿದ ಯುವಕ. ಈತ ತನ್ನ ಅಜ್ಜಿ ಸುಲೋಚನಾ (75) ಎಂಬವರನ್ನು ಕೊಲೆಗೈದು, ಶವವನ್ನು ಪ್ಲಾಸ್ಟಿಕ್‌ ಚೀಲದಲ್ಲಿ ಸುತ್ತಿ ರಟ್ಟಿನ ಡಬ್ಬಕ್ಕೆ ಹಾಕಿ ಕಾರಿನಲ್ಲಿ ಮೈಸೂರು ತಾಲೂಕು ಸಾಗರಕಟ್ಟೆ ಗ್ರಾಮದ ಬಳಿಯ ಕೆಆರ್‌ಎಸ್‌ ಹಿನ್ನೀರಿನ ಪ್ರದೇಶಕ್ಕೆ ತಂದು ಸುಟ್ಟಿದ್ದ. ಇತ್ತೀಚೆಗೆ ಅರೆಬೆಂದ ಸ್ಥಿತಿಯಲ್ಲಿ ವೃದ್ಧೆಯೊಬ್ಬರು ಶವ ಪತ್ತೆಯಾದ ಬಗ್ಗೆ ಇಲವಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣದ ಬೆನ್ನತ್ತಿದ ಇಲವಾಲ ಪೊಲೀಸ್‌ ಠಾಣೆ ಇನ್ಸ್​ಪೆಕ್ಟರ್ ಜಿ.ಎಸ್‌. ಸ್ವರ್ಣ ಅವರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆಗಾಗ ಬೈಯುತ್ತಿದ್ದ ಅಜ್ಜಿಯನ್ನು ಆರೋಪಿ ಸುಪ್ರೀತ್‌ ತಳ್ಳಿದ್ದ. ತಳ್ಳಿದ ರಭಸಕ್ಕೆ ಅಜ್ಜಿ ಬಿದ್ದು ಗಾಯಗೊಂಡಿದ್ದಳು. ಆ ವೇಳೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ, ಮೃತಹೇದವನ್ನು ಕೆಆರ್‌ಎಸ್‌ ಹಿನ್ನೀರಿನಲ್ಲಿ ತಂದು ಸುಟ್ಟುಹಾಕಿದ್ದ ಎಂದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ತನಿಖಾ ತಂಡದಲ್ಲಿ ಇನ್‌ಸ್ಪೆಕ್ಟರ್‌ ಜಿ.ಎಸ್‌. ಸ್ವರ್ಣ, ಎಸ್‌ಐ ಸುರೇಶ್‌ ಬೋಪಣ್ಣ, ಸಿಬ್ಬಂದಿ ರವಿಕುಮಾರ್‌, ಧರ್ಮ, ಸಿದ್ದವೀರಪ್ಪ, ಪ್ರಕಾಶ್‌, ಜಗದೀಶ್‌ ಶೆಟ್ಟಿ, ಆನಂದ್‌, ಮನೋಹರ್‌, ಅರುಣೇಶ್‌, ಮಂಜುನಾಥ್‌ ಹಾಗೂ ನಿಂಗರಾಜಗೌಡ ಇದ್ದರು. ಪೊಲೀಸರ ಈ ಕಾರ್ಯವನ್ನು ಎಸ್ಪಿ ಸೀಮಾ ಲಾಟ್ಕರ್‌ ಅಭಿನಂದಿಸಿದ್ದಾರೆ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್