AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಸುಟ್ಟ ಸ್ಥಿತಿಯಲ್ಲಿ ವೃದ್ಧೆ ಶವ ಪತ್ತೆ, ಮೊಮ್ಮಗನೇ ಅಜ್ಜಿಯನ್ನು ಕೊಂದಿರುವ ಸಂಗತಿ ಬೆಳಕಿಗೆ

ಮೈಸೂರಿನ ಕೆಆರ್​ಎಸ್ ಹಿನ್ನೀರಿನ ಪ್ರದೇಶದಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮೊಮ್ಮಗನೇ ಅಜ್ಜಿಯನ್ನು ಕೊಂದಿರುವ ಸಂಗತಿ ಬೆಳಕಿಗೆ ಬಂದಿದೆ.

ಮೈಸೂರು:  ಸುಟ್ಟ ಸ್ಥಿತಿಯಲ್ಲಿ ವೃದ್ಧೆ ಶವ ಪತ್ತೆ, ಮೊಮ್ಮಗನೇ ಅಜ್ಜಿಯನ್ನು ಕೊಂದಿರುವ ಸಂಗತಿ ಬೆಳಕಿಗೆ
ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: Jun 08, 2023 | 11:41 AM

Share

ಮೈಸೂರು: ಅಜ್ಜಿಯ ಬೈಗುಳ ಸಹಿಸಿಕೊಳ್ಳಲಾಗದೆ ಮೊಮ್ಮಗನೇ ಅಜ್ಜಿಯನ್ನು ಕೊಲೆಗೈದು ಶವಕ್ಕೆ ಬೆಂಕಿ ಹಚ್ಚಿದ್ದ ಮೊಮ್ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಗಾಯತ್ರಿಪುರಂ ನಿವಾಸಿ ಸುಪ್ರೀತ್‌ (23) ಕೊಲೆ ಮಾಡಿದ ಯುವಕ. ಈತ ತನ್ನ ಅಜ್ಜಿ ಸುಲೋಚನಾ (75) ಎಂಬವರನ್ನು ಕೊಲೆಗೈದು, ಶವವನ್ನು ಪ್ಲಾಸ್ಟಿಕ್‌ ಚೀಲದಲ್ಲಿ ಸುತ್ತಿ ರಟ್ಟಿನ ಡಬ್ಬಕ್ಕೆ ಹಾಕಿ ಕಾರಿನಲ್ಲಿ ಮೈಸೂರು ತಾಲೂಕು ಸಾಗರಕಟ್ಟೆ ಗ್ರಾಮದ ಬಳಿಯ ಕೆಆರ್‌ಎಸ್‌ ಹಿನ್ನೀರಿನ ಪ್ರದೇಶಕ್ಕೆ ತಂದು ಸುಟ್ಟಿದ್ದ. ಇತ್ತೀಚೆಗೆ ಅರೆಬೆಂದ ಸ್ಥಿತಿಯಲ್ಲಿ ವೃದ್ಧೆಯೊಬ್ಬರು ಶವ ಪತ್ತೆಯಾದ ಬಗ್ಗೆ ಇಲವಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣದ ಬೆನ್ನತ್ತಿದ ಇಲವಾಲ ಪೊಲೀಸ್‌ ಠಾಣೆ ಇನ್ಸ್​ಪೆಕ್ಟರ್ ಜಿ.ಎಸ್‌. ಸ್ವರ್ಣ ಅವರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆಗಾಗ ಬೈಯುತ್ತಿದ್ದ ಅಜ್ಜಿಯನ್ನು ಆರೋಪಿ ಸುಪ್ರೀತ್‌ ತಳ್ಳಿದ್ದ. ತಳ್ಳಿದ ರಭಸಕ್ಕೆ ಅಜ್ಜಿ ಬಿದ್ದು ಗಾಯಗೊಂಡಿದ್ದಳು. ಆ ವೇಳೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ, ಮೃತಹೇದವನ್ನು ಕೆಆರ್‌ಎಸ್‌ ಹಿನ್ನೀರಿನಲ್ಲಿ ತಂದು ಸುಟ್ಟುಹಾಕಿದ್ದ ಎಂದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ತನಿಖಾ ತಂಡದಲ್ಲಿ ಇನ್‌ಸ್ಪೆಕ್ಟರ್‌ ಜಿ.ಎಸ್‌. ಸ್ವರ್ಣ, ಎಸ್‌ಐ ಸುರೇಶ್‌ ಬೋಪಣ್ಣ, ಸಿಬ್ಬಂದಿ ರವಿಕುಮಾರ್‌, ಧರ್ಮ, ಸಿದ್ದವೀರಪ್ಪ, ಪ್ರಕಾಶ್‌, ಜಗದೀಶ್‌ ಶೆಟ್ಟಿ, ಆನಂದ್‌, ಮನೋಹರ್‌, ಅರುಣೇಶ್‌, ಮಂಜುನಾಥ್‌ ಹಾಗೂ ನಿಂಗರಾಜಗೌಡ ಇದ್ದರು. ಪೊಲೀಸರ ಈ ಕಾರ್ಯವನ್ನು ಎಸ್ಪಿ ಸೀಮಾ ಲಾಟ್ಕರ್‌ ಅಭಿನಂದಿಸಿದ್ದಾರೆ.

Follow Us
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು