AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆತ್ತವರ ಬದುಕಿಗೆ ಕೊಳ್ಳಿ ಇಟ್ಟ ಮಗಳ ಲವ್: ಅಪ್ಪ, ಅಮ್ಮ,ತಂಗಿ ಸತ್ತರೂ ಮುಖ ನೋಡಲು ಬಾರದ ಕಟುಕಿ

ಪ್ರೀತಿಸಿದ ಹುಡುಗನ ಜತೆ ಓಡಿ ಹೋಗಿದ್ದರಿಂದ ಯುವತಿ ಕುಟುಂಬವೇ ದುರಂತ ಅಂತ್ಯ ಕಂಡಿದೆ. ಅವರಿಗೆ ಪ್ರಾಣಕ್ಕಿಂತ ಮರ್ಯಾದೆಯೇ ಹೆಚ್ಚಾಗಿತ್ತು. ಹೀಗಾಗಿ ಮನೆ ಮಗಳು ಮನೆ ಬಿಟ್ಟು ಹೋಗಿದ್ದು ಸಹಿಸಿಕೊಳ್ಳಲು ಆಗಿರಲಿಲ್ಲ. ನೋವಿನ ಬೇಗೆಯಲ್ಲಿ ಮನೆ ಬಿಟ್ಟು ಹೋದವರು ಕೆರೆಯಲ್ಲಿ ಹೆಣವಾಗಿ ಸಿಕ್ಕಿದ್ದಾರೆ. ತನ್ನ ಅಪ್ಪ, ಅಮ್ಮ, ತಂಗಿ ಸಾವನ್ನಪ್ಪಿದ್ದರೂ ಸಹ ಕೊನೆ ಕ್ಷಣದ ಅವರ ಮುಖ ನೋಡಲು ಸಹ ಅವಳು ಬರದೇ ಕ್ರೂರಿ ಎನಿಸಿಕೊಂಡಿದ್ದಾಳೆ. ಇನ್ನು ಇವರ ಡೆತ್​ ನೋಟ್ ಓದಿದರೆ ಕರುಳು ಕಿತ್ತುಬರುತ್ತೆ.

ಹೆತ್ತವರ ಬದುಕಿಗೆ ಕೊಳ್ಳಿ ಇಟ್ಟ ಮಗಳ ಲವ್: ಅಪ್ಪ, ಅಮ್ಮ,ತಂಗಿ ಸತ್ತರೂ ಮುಖ ನೋಡಲು ಬಾರದ ಕಟುಕಿ
ಮೃತ ದುರ್ದೈವಿಗಳು
ರಾಮ್​, ಮೈಸೂರು
| Edited By: |

Updated on:May 25, 2025 | 6:41 PM

Share

ಮೈಸೂರು, (ಮೇ 25): ಮಗಳು ಮನೆ ಬಿಟ್ಟು ಓಡಿ ಹೋಗಿದ್ದಕ್ಕೆ ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಮೈಸೂರಿನ (Mysuru) ಹೆಚ್​.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಹದೇವಸ್ವಾಮಿ, ಪತ್ನಿ ಮಂಜುಳಾ, ಮಗಳು ಹರ್ಷಿತಾ ಮೃತ ದುರ್ದೈವಿಗಳು. ಇವರ ಸಾವಿಗೆ ಕಾರಣ ದೊಡ್ಡ ಮಗಳು ಕಾರಣ ಎಂದು ತಿಳಿದುಬಂದಿದೆ, ಮಹದೇವ ಸ್ವಾಮಿ ಅವರ ದೊಡ್ಡ ಮಗಳು ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು, ಆತನನ್ನು ಮದುವೆಯಾಗುವುದಾಗಿ ಆಕೆ ಪಟ್ಟು ಹಿಡಿದಿದ್ದಾಳಂತೆ. ಆದ್ರೆ ಮನೆಯವರಿಗೆ ಈ ಮದುವೆ ಇಷ್ಟವಿರಲಿಲ್ಲವಂತೆ. ಹೀಗಾಗಿ ಅವಳು ಮನೆಬಿಟ್ಟು ಪ್ರೀತಿಸಿದ ಹುಡುಗನ ಜೊತೆ ಓಡಿಹೋಗಿದ್ದಾಳೆ. ಇದರಿಂದ ಮನನೊಂದು ಮೂವರು ಹಗ್ಗಕಟ್ಟಿಕೊಂಡು ಬೂದನೂರು ಕೆರೆಗೆ ಹಾರಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.  ಈ ಘಟನೆಗೆ ಇಡೀ ಗ್ರಾಮವೇ ಮಮ್ಮಲ ಮರುಗಿದೆ. ಆದ್ರೆ, ಓಡಿ ಹೋದವಳು ಮಾತ್ರ ತನ್ನ ಅಪ್ಪ, ಅಮ್ಮ, ತಂಗಿಯ ಮಾರಿ ನೋಡಲು ಸಹ ಬಂದಿಲ್ಲ.

 ಮುಖ ನೋಡಲು ಬರಲೇ ಇಲ್ಲ

ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತಾ ಯುವನಕೊಂದಿಗೆ ಪ್ರೀತಿಯಲ್ಲಿ ಬಿದ್ದು ಮನೆಬಿಟ್ಟು ಹೋಗಿದ್ದಳು. ಹೀಗಾಗಿ ಮಾನಕ್ಕೆ ಅಂಜಿ ಮೂವರು ಜೀವ ಕಳೆದುಕೊಂಡಿದ್ದಾರೆ. ಹೆಚ್​.ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ಮಳೆಯ ನಡುವೆಯೇ ಮೂವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಮೃತರನ್ನು ನೆನೆದು ಇಡೀ ಗ್ರಾಮಸ್ಥರು ಕಣ್ಣೀರಿಡುತ್ತಿದ್ದಾರೆ. ಅತ್ತ, ಮನೆ ಬಿಟ್ಟು ಹೋಗಿದ್ದ ಮಗಳು ಅಂತ್ಯಕ್ರಿಯೆಗೂ ಬಂದಿಲ್ಲ ಹೀಗಾಗಿ ಗ್ರಾಮಸ್ಥರು ಹಿಡಿಶಾಪ ಹಾಕಿದ್ದಾರೆ.

ಇದನ್ನೂ ಓದಿ: ಮೈಸೂರು: ಪ್ರಿಯಕರನ ಜೊತೆ ಓಡಿ ಹೋದ ಮಗಳು, ಮನನೊಂದು ಆತ್ಮಹತ್ಯೆಗೆ ಶರಣಾದ ಕುಟುಂಬಸ್ಥರು

ಡೆತ್ ನೋಟ್ ನಲ್ಲೇನಿದೆ?

ಮಹದೇವಸ್ವಾಮಿ ಕುಟುಂಬ ಆತ್ಮಹತ್ಯೆಗೂ ಮುನ್ನ ನಾಲ್ಕು ಪುಟಗಳ ಡೆತ್​ ನೋಟ್ ಬರೆದಿಟ್ಟಿದ್ದು, ಆಸ್ತಿ, ಹಣ ಅವಳಿಗೆ(ಹಿರಿಯ ಮಗಳು) ಸಿಗಬಾರದು ಅಂತೆಲ್ಲಾ ಕುರುಳು ಕಿತ್ತುಬರುವಂತೆ ಬರೆದಿದ್ದಾರೆ. ನಮ್ಮನ್ನ ಹುಳಬೇಡಿ, ಅಗ್ನಿ ಸ್ಪರ್ಶ ಮಾಡಿ. ನಮ್ಮ ಸಾವಿಗೆ ನಾವೇ ಕಾರಣ. ಬೆಳಗಿನ ಜಾವ 4 ಗಂಟೆಗೆ ನಿದ್ದೆ ಬರಲಾರದೆ ಒದ್ದಾಡಿ ಬರೆದಿದ್ದೇವೆ. ಮಾನಕ್ಕೆ ಅಂಜಿ ಹೀಗೆ ಮಾಡಿಕೊಳ್ಳುತ್ತಿದ್ದೇವೆ. ನನ್ನ ಮಗಳು ನಮಗೆಲ್ಲ ಮೋಸ ಮಾಡಿದಳು. ನಮ್ಮ ಪರಿಸ್ಥಿತಿ ಜಗತ್ತಿನಲ್ಲಿ ಯಾರಿಗೂ ಬರಬಾರದು. ನಮ್ಮ ಆಸ್ತಿ ಒಂದು ರೂಪಾಯಿಯೂ ಅವಳಿಗೆ ಸಿಗಬಾರದು. ಎಲ್ಲಾ ಆಸ್ತಿಯನ್ನ ಚಿಕ್ಕಪ್ಪನಿಗೆ ನೀಡಿ. ಮನೆ, ಸೈಟ್, ಮನೆಯಲ್ಲಿರುವ ಎರಡುವರೆ ಲಕ್ಷ ಹಣ ಯಾವುದು ಅವಳಿಗೆ ಸಿಗಬಾರದು. ಚಿಕ್ಕಪ್ಪನ ಹೆಂಡತಿ ಸೌಮ್ಯಗೂ ಸಿಗಬಾರದು ಎಂದು ಆತ್ಮಹತ್ಯೆಗೂ ಮುನ್ನ ನಾಲ್ಕು ಪುಟಗಳ ಡೆತ್ ನೋಟ್ ಬರೆದಿಟ್ಟಿರುವುದು ಪತ್ತೆಯಾಗಿದೆ.

ಇದನ್ನೂ ಓದಿ
Image
ಪಂಜಾಬ್​ನಲ್ಲಿ ಧರ್ಮಸ್ಥಳದ ಯುವತಿ ಸಾವಿನ ಕಾರಣ ಕೊನೆಗೂ ಬಹಿರಂಗ
Image
ಪ್ರೀತಿ ದೈಹಿಕ ಸಂಪರ್ಕಕ್ಕೆ ತಿರುಗಿ ಮಗು ಜನನ: ಕಸದ ಬುಟ್ಟಿಗೆ ಶಿಶು!
Image
ಎಂಜಾಯ್ ಮಾಡಲು ನೀರಿಗೆ ಹಾರಿ ಪ್ರಾಣ ಬಿಟ್ಟ ಗೆಳೆಯರು;
Image
ಕಪ್ಪಗಿದ್ದೀಯಾ ಅಂತ ಅತ್ತೆ, ಭಾವನಿಂದ ಸೂಸೆಗೆ ಕಿರುಕುಳ: ಮನನೊಂದು ಆತ್ಮಹತ್ಯೆ

ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿದ್ದರು

ಮನೆಯ ದೊಡ್ಡ ಮಗಳು ಮನೆ ಬಿಟ್ಟು ಹೋಗಿದ್ದು ಮನೆಯವರಿಗೆ ಆಘಾತವನ್ನುಂಟು ಮಾಡಿದೆ. ಮಗಳ ಹೋದ ದಿನದಿಂದ ಮಂಕಾಗಿದ್ದರುರ. ಯಾರು ಮಾತನಾಡಿಸಿದರು ಮಾತನಾಡದೇ ಮೌನಕ್ಕೆ ಜಾರಿದ್ದರು. ಹೀಗಿರುವಾಗ ದಿಢೀರ್ ಕಾಣೆಯಾಗಿದ್ದಾರೆ‌. ಸಂಬಂಧಿಕರು ಹುಡುಕಾಟ ನಡೆಸಿದಾಗ ಮೂವರ ಚಪ್ಪಲಿ ಕೆರೆ ದಡದಲ್ಲಿ ಪತ್ತೆಯಾಗಿದ್ದವು. ಅಷ್ಟೇ ಅಲ್ಲ ಅವರ ದ್ವಿಚಕ್ರ ವಾಹನ ಸಹಾ ಪತ್ತೆಯಾಗಿತ್ತು‌. ಕೂಡಲೇ ಗ್ರಾಮಸ್ಥರು ಹೆಚ್ ಡಿ ಕೋಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಅಲರ್ಟ್ ಆದ ಪೊಲೀಸರು ಅಗ್ನಿಶಾಮಕ ದಳದ ಸಿಬ್ಬಂದಿ ಜೊತೆ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಮೂವರ ಶವ ಪತ್ತೆಯಾಗಿದೆ.

ಕೆರೆಯಲ್ಲಿ ಮೂವರ ಶವ ಒಂದೇ ಕಡೆ ಪತ್ತೆಯಾಗಿದೆ. ಮೂವರು ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿದ್ದಾರೆ. ಈ ಹಿನ್ನೆಲೆ ಮೂವರ ಶವ ಒಟ್ಟಿಗೆ ಸಿಕ್ಕಿದೆ. ಈ ಸಂಬಂಧ ಹೆಚ್ ಡಿ ಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇದೆಲ್ಲಾ ಏನೇ ಇರಲಿ ಮಗಳು ಮನೆ ಬಿಟ್ಟು ಹೋದ ಕಾರಣಕ್ಕೆ ಮನೆ ಮಂದಿಯೆಲ್ಲಾ ಆತ್ಮಹತ್ಯೆ ಮಾಡಿಕೊಂಡಿದ್ದು ಮಾತ್ರ ದುರಂತವೇ ಸರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:38 pm, Sun, 25 May 25

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​