ಹೆತ್ತವರ ಬದುಕಿಗೆ ಕೊಳ್ಳಿ ಇಟ್ಟ ಮಗಳ ಲವ್: ಅಪ್ಪ, ಅಮ್ಮ,ತಂಗಿ ಸತ್ತರೂ ಮುಖ ನೋಡಲು ಬಾರದ ಕಟುಕಿ

ಪ್ರೀತಿಸಿದ ಹುಡುಗನ ಜತೆ ಓಡಿ ಹೋಗಿದ್ದರಿಂದ ಯುವತಿ ಕುಟುಂಬವೇ ದುರಂತ ಅಂತ್ಯ ಕಂಡಿದೆ. ಅವರಿಗೆ ಪ್ರಾಣಕ್ಕಿಂತ ಮರ್ಯಾದೆಯೇ ಹೆಚ್ಚಾಗಿತ್ತು. ಹೀಗಾಗಿ ಮನೆ ಮಗಳು ಮನೆ ಬಿಟ್ಟು ಹೋಗಿದ್ದು ಸಹಿಸಿಕೊಳ್ಳಲು ಆಗಿರಲಿಲ್ಲ. ನೋವಿನ ಬೇಗೆಯಲ್ಲಿ ಮನೆ ಬಿಟ್ಟು ಹೋದವರು ಕೆರೆಯಲ್ಲಿ ಹೆಣವಾಗಿ ಸಿಕ್ಕಿದ್ದಾರೆ. ತನ್ನ ಅಪ್ಪ, ಅಮ್ಮ, ತಂಗಿ ಸಾವನ್ನಪ್ಪಿದ್ದರೂ ಸಹ ಕೊನೆ ಕ್ಷಣದ ಅವರ ಮುಖ ನೋಡಲು ಸಹ ಅವಳು ಬರದೇ ಕ್ರೂರಿ ಎನಿಸಿಕೊಂಡಿದ್ದಾಳೆ. ಇನ್ನು ಇವರ ಡೆತ್​ ನೋಟ್ ಓದಿದರೆ ಕರುಳು ಕಿತ್ತುಬರುತ್ತೆ.

ಹೆತ್ತವರ ಬದುಕಿಗೆ ಕೊಳ್ಳಿ ಇಟ್ಟ ಮಗಳ ಲವ್: ಅಪ್ಪ, ಅಮ್ಮ,ತಂಗಿ ಸತ್ತರೂ ಮುಖ ನೋಡಲು ಬಾರದ ಕಟುಕಿ
ಮೃತ ದುರ್ದೈವಿಗಳು
Edited By:

Updated on: May 25, 2025 | 6:41 PM

ಮೈಸೂರು, (ಮೇ 25): ಮಗಳು ಮನೆ ಬಿಟ್ಟು ಓಡಿ ಹೋಗಿದ್ದಕ್ಕೆ ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಮೈಸೂರಿನ (Mysuru) ಹೆಚ್​.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಹದೇವಸ್ವಾಮಿ, ಪತ್ನಿ ಮಂಜುಳಾ, ಮಗಳು ಹರ್ಷಿತಾ ಮೃತ ದುರ್ದೈವಿಗಳು. ಇವರ ಸಾವಿಗೆ ಕಾರಣ ದೊಡ್ಡ ಮಗಳು ಕಾರಣ ಎಂದು ತಿಳಿದುಬಂದಿದೆ, ಮಹದೇವ ಸ್ವಾಮಿ ಅವರ ದೊಡ್ಡ ಮಗಳು ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು, ಆತನನ್ನು ಮದುವೆಯಾಗುವುದಾಗಿ ಆಕೆ ಪಟ್ಟು ಹಿಡಿದಿದ್ದಾಳಂತೆ. ಆದ್ರೆ ಮನೆಯವರಿಗೆ ಈ ಮದುವೆ ಇಷ್ಟವಿರಲಿಲ್ಲವಂತೆ. ಹೀಗಾಗಿ ಅವಳು ಮನೆಬಿಟ್ಟು ಪ್ರೀತಿಸಿದ ಹುಡುಗನ ಜೊತೆ ಓಡಿಹೋಗಿದ್ದಾಳೆ. ಇದರಿಂದ ಮನನೊಂದು ಮೂವರು ಹಗ್ಗಕಟ್ಟಿಕೊಂಡು ಬೂದನೂರು ಕೆರೆಗೆ ಹಾರಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.  ಈ ಘಟನೆಗೆ ಇಡೀ ಗ್ರಾಮವೇ ಮಮ್ಮಲ ಮರುಗಿದೆ. ಆದ್ರೆ, ಓಡಿ ಹೋದವಳು ಮಾತ್ರ ತನ್ನ ಅಪ್ಪ, ಅಮ್ಮ, ತಂಗಿಯ ಮಾರಿ ನೋಡಲು ಸಹ ಬಂದಿಲ್ಲ.

 ಮುಖ ನೋಡಲು ಬರಲೇ ಇಲ್ಲ

ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತಾ ಯುವನಕೊಂದಿಗೆ ಪ್ರೀತಿಯಲ್ಲಿ ಬಿದ್ದು ಮನೆಬಿಟ್ಟು ಹೋಗಿದ್ದಳು. ಹೀಗಾಗಿ ಮಾನಕ್ಕೆ ಅಂಜಿ ಮೂವರು ಜೀವ ಕಳೆದುಕೊಂಡಿದ್ದಾರೆ. ಹೆಚ್​.ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ಮಳೆಯ ನಡುವೆಯೇ ಮೂವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಮೃತರನ್ನು ನೆನೆದು ಇಡೀ ಗ್ರಾಮಸ್ಥರು ಕಣ್ಣೀರಿಡುತ್ತಿದ್ದಾರೆ. ಅತ್ತ, ಮನೆ ಬಿಟ್ಟು ಹೋಗಿದ್ದ ಮಗಳು ಅಂತ್ಯಕ್ರಿಯೆಗೂ ಬಂದಿಲ್ಲ ಹೀಗಾಗಿ ಗ್ರಾಮಸ್ಥರು ಹಿಡಿಶಾಪ ಹಾಕಿದ್ದಾರೆ.

ಇದನ್ನೂ ಓದಿ: ಮೈಸೂರು: ಪ್ರಿಯಕರನ ಜೊತೆ ಓಡಿ ಹೋದ ಮಗಳು, ಮನನೊಂದು ಆತ್ಮಹತ್ಯೆಗೆ ಶರಣಾದ ಕುಟುಂಬಸ್ಥರು

ಡೆತ್ ನೋಟ್ ನಲ್ಲೇನಿದೆ?

ಮಹದೇವಸ್ವಾಮಿ ಕುಟುಂಬ ಆತ್ಮಹತ್ಯೆಗೂ ಮುನ್ನ ನಾಲ್ಕು ಪುಟಗಳ ಡೆತ್​ ನೋಟ್ ಬರೆದಿಟ್ಟಿದ್ದು, ಆಸ್ತಿ, ಹಣ ಅವಳಿಗೆ(ಹಿರಿಯ ಮಗಳು) ಸಿಗಬಾರದು ಅಂತೆಲ್ಲಾ ಕುರುಳು ಕಿತ್ತುಬರುವಂತೆ ಬರೆದಿದ್ದಾರೆ. ನಮ್ಮನ್ನ ಹುಳಬೇಡಿ, ಅಗ್ನಿ ಸ್ಪರ್ಶ ಮಾಡಿ. ನಮ್ಮ ಸಾವಿಗೆ ನಾವೇ ಕಾರಣ. ಬೆಳಗಿನ ಜಾವ 4 ಗಂಟೆಗೆ ನಿದ್ದೆ ಬರಲಾರದೆ ಒದ್ದಾಡಿ ಬರೆದಿದ್ದೇವೆ. ಮಾನಕ್ಕೆ ಅಂಜಿ ಹೀಗೆ ಮಾಡಿಕೊಳ್ಳುತ್ತಿದ್ದೇವೆ. ನನ್ನ ಮಗಳು ನಮಗೆಲ್ಲ ಮೋಸ ಮಾಡಿದಳು. ನಮ್ಮ ಪರಿಸ್ಥಿತಿ ಜಗತ್ತಿನಲ್ಲಿ ಯಾರಿಗೂ ಬರಬಾರದು. ನಮ್ಮ ಆಸ್ತಿ ಒಂದು ರೂಪಾಯಿಯೂ ಅವಳಿಗೆ ಸಿಗಬಾರದು. ಎಲ್ಲಾ ಆಸ್ತಿಯನ್ನ ಚಿಕ್ಕಪ್ಪನಿಗೆ ನೀಡಿ. ಮನೆ, ಸೈಟ್, ಮನೆಯಲ್ಲಿರುವ ಎರಡುವರೆ ಲಕ್ಷ ಹಣ ಯಾವುದು ಅವಳಿಗೆ ಸಿಗಬಾರದು. ಚಿಕ್ಕಪ್ಪನ ಹೆಂಡತಿ ಸೌಮ್ಯಗೂ ಸಿಗಬಾರದು ಎಂದು ಆತ್ಮಹತ್ಯೆಗೂ ಮುನ್ನ ನಾಲ್ಕು ಪುಟಗಳ ಡೆತ್ ನೋಟ್ ಬರೆದಿಟ್ಟಿರುವುದು ಪತ್ತೆಯಾಗಿದೆ.

ಇದನ್ನೂ ಓದಿ
ಪಂಜಾಬ್​ನಲ್ಲಿ ಧರ್ಮಸ್ಥಳದ ಯುವತಿ ಸಾವಿನ ಕಾರಣ ಕೊನೆಗೂ ಬಹಿರಂಗ
ಪ್ರೀತಿ ದೈಹಿಕ ಸಂಪರ್ಕಕ್ಕೆ ತಿರುಗಿ ಮಗು ಜನನ: ಕಸದ ಬುಟ್ಟಿಗೆ ಶಿಶು!
ಎಂಜಾಯ್ ಮಾಡಲು ನೀರಿಗೆ ಹಾರಿ ಪ್ರಾಣ ಬಿಟ್ಟ ಗೆಳೆಯರು;
ಕಪ್ಪಗಿದ್ದೀಯಾ ಅಂತ ಅತ್ತೆ, ಭಾವನಿಂದ ಸೂಸೆಗೆ ಕಿರುಕುಳ: ಮನನೊಂದು ಆತ್ಮಹತ್ಯೆ

ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿದ್ದರು

ಮನೆಯ ದೊಡ್ಡ ಮಗಳು ಮನೆ ಬಿಟ್ಟು ಹೋಗಿದ್ದು ಮನೆಯವರಿಗೆ ಆಘಾತವನ್ನುಂಟು ಮಾಡಿದೆ. ಮಗಳ ಹೋದ ದಿನದಿಂದ ಮಂಕಾಗಿದ್ದರುರ. ಯಾರು ಮಾತನಾಡಿಸಿದರು ಮಾತನಾಡದೇ ಮೌನಕ್ಕೆ ಜಾರಿದ್ದರು. ಹೀಗಿರುವಾಗ ದಿಢೀರ್ ಕಾಣೆಯಾಗಿದ್ದಾರೆ‌. ಸಂಬಂಧಿಕರು ಹುಡುಕಾಟ ನಡೆಸಿದಾಗ ಮೂವರ ಚಪ್ಪಲಿ ಕೆರೆ ದಡದಲ್ಲಿ ಪತ್ತೆಯಾಗಿದ್ದವು. ಅಷ್ಟೇ ಅಲ್ಲ ಅವರ ದ್ವಿಚಕ್ರ ವಾಹನ ಸಹಾ ಪತ್ತೆಯಾಗಿತ್ತು‌. ಕೂಡಲೇ ಗ್ರಾಮಸ್ಥರು ಹೆಚ್ ಡಿ ಕೋಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಅಲರ್ಟ್ ಆದ ಪೊಲೀಸರು ಅಗ್ನಿಶಾಮಕ ದಳದ ಸಿಬ್ಬಂದಿ ಜೊತೆ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಮೂವರ ಶವ ಪತ್ತೆಯಾಗಿದೆ.

ಕೆರೆಯಲ್ಲಿ ಮೂವರ ಶವ ಒಂದೇ ಕಡೆ ಪತ್ತೆಯಾಗಿದೆ. ಮೂವರು ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿದ್ದಾರೆ. ಈ ಹಿನ್ನೆಲೆ ಮೂವರ ಶವ ಒಟ್ಟಿಗೆ ಸಿಕ್ಕಿದೆ. ಈ ಸಂಬಂಧ ಹೆಚ್ ಡಿ ಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇದೆಲ್ಲಾ ಏನೇ ಇರಲಿ ಮಗಳು ಮನೆ ಬಿಟ್ಟು ಹೋದ ಕಾರಣಕ್ಕೆ ಮನೆ ಮಂದಿಯೆಲ್ಲಾ ಆತ್ಮಹತ್ಯೆ ಮಾಡಿಕೊಂಡಿದ್ದು ಮಾತ್ರ ದುರಂತವೇ ಸರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:38 pm, Sun, 25 May 25

ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us