AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹಿತ ಮಹಿಳೆಯೊಂದಿಗೆ ಯುವಕನ ಸಲುಗೆಯ ಫೋಟೋ ವೈರಲ್; ಇಬ್ಬರೂ ಆತ್ಮಹತ್ಯೆಗೆ ಶರಣು

ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ ಮುರಳಿ, ತಾನು ಶೃತಿ ಜೊತೆ ಇದ್ದ ಫೋಟೋವನ್ನು ಅಪ್​ಲೋಡ್ ಮಾಡಿ ​​​ಸ್ಟೇಟಸ್​ನಲ್ಲಿ ಇಟ್ಟುಕೊಂಡಿದ್ದ. ಈ ಫೋಟೋ ವೈರಲ್ ಆಗಿದೆ. ಫೋಟೋ ಕಣ್ಣಿಗೆ ಬೀಳುತ್ತಿದ್ದಂತೆ ಮನನೊಂದ ಗೃಹಿಣಿ ಶೃತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೃತಿ ಆತ್ಮಹತ್ಯೆ ಬೆನ್ನಲ್ಲೇ ಮುರಳಿ ಕೂಡ ನೇಣಿಗೆ ಶರಣಾಗಿದ್ದಾನೆ.

ವಿವಾಹಿತ ಮಹಿಳೆಯೊಂದಿಗೆ ಯುವಕನ ಸಲುಗೆಯ ಫೋಟೋ ವೈರಲ್; ಇಬ್ಬರೂ ಆತ್ಮಹತ್ಯೆಗೆ ಶರಣು
ಶೃತಿ, ಮುರಳಿ
ರಾಮ್​, ಮೈಸೂರು
| Edited By: |

Updated on: Dec 20, 2023 | 9:29 AM

Share

ಮೈಸೂರು, ಡಿ.20: ವಿವಾಹಿತ ಮಹಿಳೆಯೊಂದಿಗೆ (Married Woman) ಯುವಕ ಸಲುಗೆ ಬೆಳೆಸಿದ್ದು ಇಂದು ಅವರಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಮಹಿಳೆ ಹಾಗೂ ಯುವಕನ ಫೋಟೋ ವೈರಲ್ ಆಗಿದ್ದು ಇದರಿಂದ ಹೆದರಿ ಮಹಿಳೆ ಮತ್ತು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು (Mysuru) ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದಿದೆ. ಹುಣಸೂರು ಪಟ್ಟಣದ ಕಲ್ಕುಣಿಗೆ ನಿವಾಸಿಗಳಾದ ಶೃತಿ(28), ಮುರಳಿ(20) ಆತ್ಮಹತ್ಯೆ ಮಾಡಿಕೊಂಡವರು.

ವಿವಾಹಿತ ಮಹಿಳೆ ಜೊತೆ ಯುವಕ ಸಲುಗೆಯಿಂದ ಇದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿದೆ. ಫೋಟೋ ಕಣ್ಣಿಗೆ ಬೀಳುತ್ತಿದ್ದಂತೆ ಮನನೊಂದ ಗೃಹಿಣಿ ಶೃತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೃತಿ ಆತ್ಮಹತ್ಯೆ ಬೆನ್ನಲ್ಲೇ ಮುರಳಿ ಕೂಡ ನೇಣಿಗೆ ಶರಣಾಗಿದ್ದಾನೆ. ಮೃತರಿಬ್ಬರೂ ಹುಣಸೂರು ಪಟ್ಟಣದ ಕಲ್ಕುಣಿಗೆ ನಿವಾಸಿಗಳು ಎಂದು ತಿಳಿದುಬಂದಿದೆ.

ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ ಮುರಳಿ, ತಾನು ಶೃತಿ ಜೊತೆ ಇದ್ದ ಫೋಟೋವನ್ನು ಅಪ್​ಲೋಡ್ ಮಾಡಿ ​​​ಸ್ಟೇಟಸ್​ನಲ್ಲಿ ಇಟ್ಟುಕೊಂಡಿದ್ದ. ಈ ಫೋಟೋ ವೈರಲ್ ಆಗಿದೆ. ಬಳಿಕ ಇದು ಶೃತಿ ಹಾಗೂ ಮುರಳಿ ಮನೆಯವರಿಗೂ ಮುಟ್ಟಿದೆ. ಇದೇ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಗಲಾಟೆ ಆಗಿದೆ. ಇದರಿಂದ ಹೆದರಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಎರಡೂ ಕುಟುಂಬದವರು ಪರಸ್ಪರ ದೂರು ನೀಡಿದ್ದಾರೆ.

ಇದನ್ನೂ ಓದಿ: ಮಂಡ್ಯದ ಆಲೆಮನೆ ಮಾತ್ರವಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲೂ ಭ್ರೂಣಲಿಂಗ ಪತ್ತೆ?

ವಿದ್ಯುತ್ ಕಂಬಕ್ಕೆ ಕೇರಳ ಸಾರಿಗೆ ಬಸ್​ ಡಿಕ್ಕಿ, 6 ಜನರಿಗೆ ಗಾಯ

ಮೈಸೂರು ಜಿಲ್ಲೆ ಹುಣಸೂರಿನ ಅರಸು ಪ್ರತಿಮೆ ವೃತ್ತದ ಬಳಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕೇರಳ ಸಾರಿಗೆ ಬಸ್​ ಡಿಕ್ಕಿ ಹೊಡೆದಿದ್ದು 6 ಜನರಿಗೆ ಗಾಯಗಳಾಗಿವೆ. ಬಸ್ಸು ಗೋಣಿಕೊಪ್ಪ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಕೇರಳ ಸರ್ಕಾರಿ ಬಸ್​ನಲ್ಲಿ ಸುಮಾರು 30 ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ. ಗಾಯಾಳುಗಳಿಗೆ ಹುಣಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ