AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತರ ಜೊತೆ ಪಾರ್ಟಿಗೆ ಹೋದ ಯುವಕ ಅನುಮಾನಾಸ್ಪದವಾಗಿ ಸಾವು, ಹಲ್ಲೆ ಮಾಡಿ ಹತ್ಯೆ ಆರೋಪ

ಹೆಚ್ ಡಿ ಕೋಟೆಯಲ್ಲಿ ಸಾಗರ್ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡಿ ನಂತರ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಸಾಗರ್ ಸಹೋದರಿಯರು ಆರೋಪ ಮಾಡಿದ್ದಾರೆ. ಈ ಸಂಬಂಧ ಹೆಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಸ್ನೇಹಿತರ ಜೊತೆ ಪಾರ್ಟಿಗೆ ಹೋದ ಯುವಕ ಅನುಮಾನಾಸ್ಪದವಾಗಿ ಸಾವು, ಹಲ್ಲೆ ಮಾಡಿ ಹತ್ಯೆ ಆರೋಪ
ಸ್ನೇಹಿತರ ಜೊತೆ ಪಾರ್ಟಿಗೆ ಹೋದ ಯುವಕ ಅನುಮಾನಾಸ್ಪದವಾಗಿ ಸಾವು, ಹಲ್ಲೆ ಮಾಡಿ ಹತ್ಯೆ ಆರೋಪ
TV9 Web
| Edited By: ಸಾಧು ಶ್ರೀನಾಥ್​|

Updated on:Dec 22, 2021 | 9:52 AM

Share

ಮೈಸೂರು: ಸ್ನೇಹಿತರ ಜೊತೆ ಪಾರ್ಟಿಗೆ ಹೋದ ಯುವಕ ಅನುಮಾನಸ್ಪದವಾಗಿ ಮೃತಪಟ್ಟಿದ್ದಾನೆ. ಮೈಸೂರಿನ ವಿಜನಯನಗರದ ನಿವಾಸಿ 22 ವರ್ಷದ ಸಾಗರ್ ನೇಪು ಸಾವನ್ನಪ್ಪಿದ ಯುವಕ. ಸಾಗರ್, ಡಿಸೆಂಬರ್ 19ರಂದು ಇಬ್ಬರು ಸ್ನೇಹಿತರಾದ ಶಿವು ಹಾಗೂ ಕೌಶಿಕ್ ಜೊತೆ ಹೋಗಿದ್ದ. ಮರು ದಿನ ಸಾಗರ್ ಆಸ್ಪತ್ರೆಯಲ್ಲಿರುವುದಾಗಿ ಕರೆ ಬಂದಿದೆ. ಸಾಗರ್‌ ಮೊಬೈಲ್‌ನಿಂದಲೇ ಮನೆಯವರಿಗೆ ಕರೆ ಮಾಡಲಾಗಿದೆ. ಅಪಘಾತವಾಗಿದೆ ಅಂತಾ ಯುವತಿಯಿಂದ ಮನೆಯವರಿಗೆ ಕರೆ ಮಾಡಲಾಗಿದ್ದು, ಸಾಗರ್ ಕೆ ಆರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ ಎಂದು ತಿಳಿಸಲಾಗಿದೆ. ಮನೆಯವರು ಹೋಗುವಷ್ಟರಲ್ಲಿ ಸಾಗರ್ ಮೃತಪಟ್ಟಿದ್ದಾನೆ.

ಹೆಚ್ ಡಿ ಕೋಟೆಯಲ್ಲಿ ಸಾಗರ್ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡಿ ನಂತರ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಸಾಗರ್ ಸಹೋದರಿಯರು ಆರೋಪ ಮಾಡಿದ್ದಾರೆ. ಈ ಸಂಬಂಧ ಹೆಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನದಲ್ಲಿ ಮದುವೆಯಾದ ಮೂರನೇ ವಾರಕ್ಕೆ ಮದುಮಗಳ ಸಾವು

ಹಾಸನ: ಮದುವೆಯಾದ ಮೂರನೇ ವಾರಕ್ಕೆ ಮದುಮಗಳು ಸಾವಿಗೀಡಾಗಿದ್ದಾಳೆ. ವರದಕ್ಷಿಣೆಗಾಗಿ ಮಗಳನ್ನು ಕೊಲೆ ಮಾಡಿರುವುದಾಗಿ ಆ ಮದುಮಗಳ ಪೋಷಕರು ಆರೋಪ ಮಾಡಿದ್ದಾರೆ. ಹಾಸನದ ಸಲೀಂ ನಗರದಲ್ಲಿ ಈ ದುರ್ಘಟನೆ ನಡೆದಿದೆ. ಫಿಜಾ ಖಾನಂ (22) ಮೃತ ಮಹಿಳೆ. ಡಿಸೆಂಬರ್ 2 ರಂದು ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಹೊಳಲಗೋಡು ಗ್ರಾಮದ ಯುವತಿ ಫಿಜಾ ಖಾನಂ ಹಾಗೂ ಹಾಸನದ ಶಾಗಿಲ್ ಅಹಮದ್ ಅವಿರಿಬ್ಬರಿಗೂ ಮದುವೆಯಾಗಿತ್ತು. ಮದುವೆಯಾಗಿ 19ನೇ ದಿನವೇ ನವ ವಿವಾಹಿತೆ ಫಿಜಾ ಖಾನಂ ಅನುಮಾನಾಸ್ಪದ ಸಾವು ಕಂಡಿದ್ದಾಳೆ.

ಮಗಳು ಸ್ನಾನಕ್ಕೆ ಹೋದಾಗ ಗ್ಯಾಸ್ ಗೀಸರ್ ಆನ್ ಮಾಡಿ, ಬಾಗಿಲು ಮುಚ್ಚಿ ಕೊಲೆ ಮಾಡಲಾಗಿದೆ ಎಂದು ಫಿಜಾ ಖಾನಂ ಪೋಷಕರು ಆರೋಪಿಸಿದ್ದಾರೆ. ಹಾಸನದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವರದಕ್ಷಿಣೆ ಕಿರುಕುಳ, ವರದಕ್ಷಿಣೆ ಸಾವು ಆರೋಪದಲ್ಲಿ ಕೇಸ್ ದಾಖಲಾಗಿದೆ. ಅಳಿಯ ಶಾಗಿಲ್ ಅಹಮದ್ ಸೇರಿದಂತೆ ಆತನ ಸಹೋದರರು ಮತ್ತು ಶಾಗಿಲ್ ತಾಯಿಯ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿರುವ ಪೆನ್ಷನ್ ಮೊಹಲ್ಲಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ವಿಧಾನಸಭೆಯಲ್ಲಿ ಇಂದು ಮತಾಂತರ ನಿಷೇಧ ವಿಧೇಯಕ ಮಂಡನೆ-ಚರ್ಚೆ; ಸದನದಲ್ಲಿ ಕದನ ಕುತೂಹಲ

Published On - 9:50 am, Wed, 22 December 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ