AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಅ.18ರಿಂದ 21ರ ವರೆಗೆ ಯುವ ದಸರಾ: 4 ದಿನ ಜನರಿಗೆ ಸಂಗೀತದ ರಸದೌತಣ

ಯುವ ದಸರಾ ಉದ್ಘಾಟನೆಯಲ್ಲಿ ನಟ ಶಿವರಾಜ್​ ಕುಮಾರ್​ ಭಾಗವಹಿಸಲಿದ್ದಾರೆ. ಜೊತೆಗೆ ಕನ್ನಡ ಹಿನ್ನೆಲೆ ಗಾಯಕ ಸಂಜೀತ್​​ ಹೆಗ್ಡೆ ಮತ್ತು ತಂಡದಿಂದ ಕಾರ್ಯಕ್ರಮ ಕೂಡ ನಡೆಯಲಿದ್ದು, ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಅಷ್ಟೇ ಅಲ್ಲ, ಮೊದಲ ದಿನವೇ ಸಾಧು ಕೋಕಿಲ ಹಾಗೂ ತಂಡದಿಂದ ಸಂಗೀತ ರಸದೌತಣ ಹಮ್ಮಿಕೊಳ್ಳಲಾಗಿದೆ.

ಮೈಸೂರಿನಲ್ಲಿ ಅ.18ರಿಂದ 21ರ ವರೆಗೆ ಯುವ ದಸರಾ: 4 ದಿನ ಜನರಿಗೆ ಸಂಗೀತದ ರಸದೌತಣ
ಎಸ್​ಪಿ ಸೀಮಾ ಲಾಟ್ಕರ್
ದಿಲೀಪ್​, ಚೌಡಹಳ್ಳಿ
| Edited By: |

Updated on:Oct 10, 2023 | 4:43 PM

Share

ಮೈಸೂರು, ಅ.10: ಅಕ್ಟೋಬರ್​ 18ರಿಂದ 21ರ ವರೆಗೆ ಯುವ ದಸರಾ(Yuva Dasara)ಆಯೋಜನೆ ಮಾಡಲಾಗಿದ್ದು, ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಯುವ ದಸರಾ ಸಂಭ್ರಮ ಮನೆಮಾಡಲಿದೆ ಎಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ಮೂಲಕ ಎಸ್​ಪಿ ಸೀಮಾ ಲಾಟ್ಕರ್(Seema Latkar)ಮಾಹಿತಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು ‘ಒಟ್ಟು ನಾಲ್ಕುದಿನ ನಡೆಯಲಿರುವ ಕಾರ್ಯಕ್ರಮಕ್ಕೆ ಈಗಾಗಲೇ ಸಕಲ ಸಿದ್ಧತೆ ಆಗಿದೆ. ಸಂಜೆ 6.30 ರಿಂದ ರಾತ್ರಿ10.30ರವರಿಗೆ ನಡೆಯಲಿರುವ ಯುವ ದಸರಾವನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಅವರು ಉದ್ಘಾಟಿಸಲಿದ್ದಾರೆ ಎಂದರು.

ಮೊದಲ ದಿನ ಸಾಧು ಕೋಕಿಲ ಮತ್ತು ತಂಡದಿಂದ ಸಂಗೀತದ ರಸದೌತಣ

ಇನ್ನು ಯುವ ದಸರಾ ಉದ್ಘಾಟನೆಯಲ್ಲಿ ನಟ ಶಿವರಾಜ್​ ಕುಮಾರ್​ ಭಾಗವಹಿಸಲಿದ್ದಾರೆ. ಜೊತೆಗೆ ಕನ್ನಡ ಹಿನ್ನೆಲೆ ಗಾಯಕ ಸಂಜೀತ್​​ ಹೆಗ್ಡೆ ಮತ್ತು ತಂಡದಿಂದ ಕಾರ್ಯಕ್ರಮ ಕೂಡ ನಡೆಯಲಿದ್ದು, ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಅಷ್ಟೇ ಅಲ್ಲ, ಮೊದಲ ದಿನವೇ ಸಾಧು ಕೋಕಿಲ ಹಾಗೂ ತಂಡದಿಂದ ಸಂಗೀತ ರಸದೌತಣ ಹಮ್ಮಿಕೊಳ್ಳಲಾಗಿದೆ. ಜೊತೆಗೆ ಕನ್ನಡ ರ್ಯಾಪರ್​ ಆಲ್​ ಓಕೆ ತಂಡದಿಂದ ಕೂಡ ಸಂಗೀತ ಕಾರ್ಯಕ್ರಮ ಇದ್ದು, ಇದರ ಜೊತೆ ಬೆನ್ನಿ ದಯಾಳ್ ಸೇರಿ ಬಾಲಿವುಡ್ ಹಾಡುಗಾರರಿಂದ ಸಂಗೀತ ರಸದೌತಣ ನಡೆಯಲಿದೆ. ಇನ್ನು ಸ್ಥಳೀಯ ಪ್ರತಿಭೆಗಳಿಗೂ ಈ ಬಾರಿಯ ಯುವ ದಸರಾದಲ್ಲಿ ಅವಕಾಶ ಕೊಡಲಾಗಿದೆ ಎಂದು ಮೈಸೂರು ಎಸ್​ಪಿ ಸೀಮಾ ಲಾಟ್ಕರ್ ಹೇಳಿದರು.

ಇದನ್ನೂ ಓದಿ:ಮಹಿಷ ದಸರಾ ಮುಗಿಯುವವರೆಗೆ ಸಂಸದ ಪ್ರತಾಪ್ ಸಿಂಹರನ್ನ ಬಂಧಿಸಿ: ಮಾಜಿ ಮೇಯರ್ ಪುರುಷೋತ್ತಮ

ಇನ್ನು ಮೈಸೂರು ದಸರಾದಲ್ಲಿ ಈ ಬಾರಿ ವಿಶೇಷವಾಗಿ ಏರ್​ ಶೋ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮೈಸೂರು ಜಿಲ್ಲಾಧಿಕಾರಿ ಅವರು ‘ಐದು ವರ್ಷಗಳ ಬಳಿಕ ಮೈಸೂರು ದಸರಾದಲ್ಲಿ ಏರ್​ಶೋ ನಡೆಯುತ್ತಿದ್ದು, ಅಕ್ಟೋಬರ್​ 22 ಮತ್ತು 23ರಂದು ನಡೆಯಲಿದೆ ಎಂದರು. ಇನ್ನು ಅ.22ರಂದು ಏರ್​ಶೋ ರಿಹರ್ಸಲ್  ನಡೆಯಲಿದ್ದು, 23 ರಂದು ಸಂಜೆ 4 ಗಂಟೆಗೆ 45 ನಿಮಿಷಕ್ಕೆ ಪಂಜಿನ ಕವಾಯತು ಮೈದಾನದಲ್ಲಿ ಮುಖ್ಯ ಏರ್​ಶೋ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:37 pm, Tue, 10 October 23

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್