AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ. ರಾಜಕುಮಾರ್ ಪ್ರತಿಮೆ ವಿವಾದ; ಹ್ಯಾರಿಸ್ ಮನೆ ಮುಂದೆ ಅಭಿಮಾನಿಗಳ ಪ್ರತಿಭಟನೆ

ಡಾ. ರಾಜಕುಮಾರ್ ಪ್ರತಿಮೆ ವಿವಾದಕ್ಕೆ ಸಂಬಂಧಿಸಿದಂತೆ, ಹ್ಯಾರಿಸ್ ಮನೆ ಮುಂದೆ ಅಭಿಮಾನಿಗಳ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಡಾ. ರಾಜಕುಮಾರ್ ಪ್ರತಿಮೆ ವಿವಾದ; ಹ್ಯಾರಿಸ್ ಮನೆ ಮುಂದೆ ಅಭಿಮಾನಿಗಳ ಪ್ರತಿಭಟನೆ
ಕಾಂಗ್ರೆಸ್​ ಶಾಸಕ ಎನ್​.ಎ ಹ್ಯಾರಿಸ್
shruti hegde
|

Updated on: Feb 18, 2021 | 2:59 PM

Share

ಬೆಂಗಳೂರು: ವರನಟ ಡಾ. ರಾಜ​ಕುಮಾರ್​ ಪ್ರತಿಮೆ ವೀಕ್ಷಣೆ ಸಂದರ್ಭದಲ್ಲಿ ಶಾಂತಿನಗರ ಕಾಂಗ್ರೆಸ್​ ಶಾಸಕ ಎನ್​.ಎ. ಹ್ಯಾರಿಸ್​ ವಿವಾದಾತ್ಮಕವಾಗಿ ಮಾತನಾಡಿರುವ ವಿಡಿಯೋ ಈಗಾಗಲೇ ಎಲ್ಲೆಡೆ ವೈರಲ್​ ಆಗಿದೆ. ಈ ಬಗ್ಗೆ ಸ್ಪಷ್ಟೀಕರಣ ನೀಡುತ್ತಾ ‘ಯಾರೋ ವಿಡಿಯೋ ಎಡಿಟ್ ಮಾಡಿದ್ದಾರೆ. ಆದರೂ ನಾನು ಇದಕ್ಕೆ ಕ್ಷಮೆ ಯಾಚಿಸುತ್ತೇನೆ’ ಎಂದು ಹೇಳಿದ್ದರು. ಈ ಕುರಿತಂತೆ ಹ್ಯಾರಿಸ್ ಕ್ಷಮೆ ಯಾಚಿಸಲೇ ಬೇಕು ಎಂದು ಡಾ.ರಾಜಕುಮಾರ್ ಅಭಿಮಾನಿಗಳು ಪಟ್ಟು ಹಿಡಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಗರುಡಾ ಮಾಲ್ ಬಳಿ ಅಭಿಮಾನಿಗಳೆಲ್ಲ ಜಮಾಯಿಸಿದ್ದರು. ಹ್ಯಾರಿಸ್ ಮನೆ ಮುಂದೆ ಪ್ರತಿಭಟನೆ ನಡೆಸಲು ಅಭಿಮಾನಿಗಳು ಸಜ್ಜಾಗಿದ್ದರು. ಹ್ಯಾರಿಸ್ ಕ್ಷಮೆ ಕೇಳಲೇಬೇಕು, ಅಣ್ಣಾವ್ರ ಅಭಿಮಾನಿಗಳು ಎಂದೆಂದೂ ಸತ್ತಿಲ್ಲ, ಅಣ್ಣಾವ್ರ ಅಭಿಮಾನಿಗಳನ್ನ ಕೆಣಕಿದರೆ ಕ್ರಾಂತಿ – ಕ್ಷಮೆ ಕೇಳಿದರೆ ಶಾಂತಿ ಎಂದು ಘೋಷಣೆ ಕೂಗುತ್ತಾ ಅಭಿಮಾನಿಗಳೆಲ್ಲ ಆಕ್ರೋಶ ವ್ಯಕ್ತಪಡಿಸಿದರು.

ಕ್ಷಮೆಯಲ್ಲಿ ಹ್ಯಾರಿಸ್​ ಹೇಳಿದ್ದೇನು? ನನ್ನ ಮಾತನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದರೆ ಕ್ಷಮೆ ಇರಲಿ. ಅಣ್ಣಾವ್ರನ್ನ ತುಂಬಾ ಹತ್ತಿರದಿಂದ ನೋಡಿದ್ದೇನೆ. ಅಣ್ಣಾವ್ರ ಬಗ್ಗೆ ನಾನು ಮಾತಾಡಿಲ್ಲ ಎಂದು ಕಾಂಗ್ರೆಸ್​ ಶಾಸಕ ಎನ್​.ಎ. ಹ್ಯಾರಿಸ್ ಪ್ರತಿಭಟನಾ ನಿರತ ಡಾ.ರಾಜಕುಮಾರ್ ಅಭಿಮಾನಿಗಳಿಗೆ ಕ್ಷಮೆ ಯಾಚಿಸಿದ್ದರು. ನಾನು ಯಾವುದೇ ದುರುದ್ದೇಶದಿಂದ ಮಾತನಾಡಿಲ್ಲ. ನನ್ನ ಹೇಳಿಕೆ ಬಗ್ಗೆ ತಪ್ಪಾಗಿ ಅರ್ಥೈಸಿಕೊಂಡಿದ್ದರೆ ಕ್ಷಮೆ ಇರಲಿ. ಅಣ್ಣಾವ್ರನ್ನ ನಾನು ತುಂಬಾ ಹತ್ತಿರದಿಂದ ನೋಡಿದ್ದೇನೆ. ಅಣ್ಣಾವ್ರ ಪ್ರತಿಮೆ ಇಡುವ ಬಗ್ಗೆ ನನ್ನ ಬೆಂಬಲವೂ ಇದೆ. ಕನ್ನಡನಾಡಿನಲ್ಲಿ ನಾನು ಇದ್ದೇನೆ ಕನ್ನಡಕ್ಕಾಗಿ ಸದಾ ಸೇವೆ ಸಲ್ಲಿಸುತ್ತೇನೆ. ನಾನೂ ಕೂಡಾ ಅಣ್ಣಾವ್ರ ದೊಡ್ಡ ಅಭಿಮಾನಿ. ಸಂಘದಲ್ಲಿ ಅವಕಾಶ ಕೊಟ್ಟರೆ ಪದಾಧಿಕಾರಿ ಆಗ್ತೀನಿ. ಎಲ್ಲರೆದುರು ಬಹಿರಂಗವಾಗಿ ಸೋಷಿಯಲ್​ ಮೀಡಿಯಾದಲ್ಲಿ ನಾನು ಕ್ಷಮೆ ಕೇಳಿದ್ದೀನಿ. ನಿಮಗೂ ಹೇಳ್ತಿದಿನಿ ಕ್ಷಮೆ ಇರಲಿ ಎಂದು ಮನವಿ ಮಾಡಿದ್ದರು.

ಎನ್​.ಎ. ಹ್ಯಾರಿಸ್ ಹೇಳಿಕೆಗೆ ರಾಜ್ ಅಭಿಮಾನಿಗಳ ಆಕ್ರೋಶ ವ್ಯಕ್ತವಾಗಲು ಕಾರಣ? ಡಾ. ರಾಜ​​ಕುಮಾರ್​ ಪ್ರತಿಮೆ ನೋಡಲು ಹ್ಯಾರಿಸ್ ಹೋಗಿದ್ದರು. ಈ ವೇಳೆ ಮಾತನಾಡಿದ್ದ ಹ್ಯಾರಿಸ್, ಸ್ಟ್ಯಾಚ್ಯು ಇಡುವುದೇ ದೊಡ್ಡ ಕತೆ. ಅದರಲ್ಲಿ ಆಫೀಸ್ ಬೇರೆ ಮಾಡಿಕೊಡುವುದಕ್ಕೆ ಆಗುತ್ತಾ? ಈ ಪ್ರತಿಮೆಗೆ ಕವರ್​ ಏನು ಬೇಕಾಗುವುದಿಲ್ಲ. ಓಪನ್ ಆಗಿ ಇಡಿ. ಸ್ಟ್ಯಾಚ್ಯುಗೆಲ್ಲಾ ಕವರ್ ಯಾಕ್ ಬೇಕು? ಪ್ರೊಟೆಕ್ಷನ್ ಬೇಕಿದ್ದರೆ ಮನೆಯಲ್ಲೇ ಇಟ್ಟಿದ್ದರೆ ಆಗಿರುತ್ತಿತ್ತು. ರೋಡಲ್ಲಿ ಯಾಕೆ ಇಡುತ್ತಾರೆ? ಬುದ್ಧಿ ಇಲ್ಲ, ಏನ್ ಮಾಡೋದು? ಏನಾದರೂ ಹೇಳಿದರೆ ಅದನ್ನು ಬೇರೆ ರೀತಿಯಲ್ಲೇ ತೆಗೆದುಕೊಳ್ಳುತ್ತಾರೆ ಎಂದಿದ್ದರು.

ಇದನ್ನೂ ಓದಿ: ಡಾ. ರಾಜಕುಮಾರ್ ಪ್ರತಿಮೆ ವಿವಾದ: ಕ್ಷಮೆ ಕೇಳಿದ ಶಾಸಕ ಎನ್.ಎ. ಹ್ಯಾರಿಸ್

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?