AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kempegowda statue: ವಿಧಾನಸೌಧದ ಆವರಣದಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ ಸಿಎಂ ಬೊಮ್ಮಾಯಿ ಅನುಮೋದನೆ

Basavaraj Bommai: ಸಿಎಂ ಬೊಮ್ಮಾಯಿ ಕಳೆದ ಕೆಂಪೇಗೌಡ ಜಯಂತಿ ವೇಳೆ ವಿಧಾನಸೌಧ ಬಳಿ ಪ್ರತಿಮೆ ಸ್ಥಾಪನೆ ಬಗ್ಗೆ ಘೋಷಣೆ ಮಾಡಿದ್ದರು. ಸಚಿವ ಅಶ್ವಥ್ ನಾರಾಯಣ ಮತ್ತು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರುಗಳು ಕೆಂಪೇಗೌಡ ಪ್ರತಿಮೆ ಸ್ಥಾಪನೆ ಸಂಬಂಧ ಸಿಎಂ ಬೊಮ್ಮಾಯಿಗೆ ಮನವಿ ಮಾಡಿದ್ದರು.

Kempegowda statue: ವಿಧಾನಸೌಧದ ಆವರಣದಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ ಸಿಎಂ ಬೊಮ್ಮಾಯಿ ಅನುಮೋದನೆ
ವಿಧಾನಸೌಧದ ಆವರಣದಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ ಸಿಎಂ ಬೊಮ್ಮಾಯಿ ಅನುಮೋದನೆ
TV9 Web
| Edited By: |

Updated on: Aug 20, 2022 | 10:37 PM

Share

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ (Vidhana Soudha) ಬೆಂಗಳೂರಿನ ನಾಡಪ್ರಭು ಕೆಂಪೇಗೌಡರ ಪ್ರತಿಮೆ (Nadaprabhu Kempegowda statue) ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜೊತೆಗೂಡಿ ಪ್ರತಿಮೆ ಸ್ಥಾಪನೆಗೆ ನಿರ್ದಿಷ್ಟ ಸ್ಥಳ ಗುರುತಿಸುವಂತೆ ರಾಜ್ಯ ಲೋಕೋಪಯೋಗಿ ಇಲಾಖೆಗೆ ಸಿಎಂ ಬೊಮ್ಮಾಯಿ (CM Basavaraj Bommai) ಸೂಚನೆ ನೀಡಿದ್ದಾರೆ.

ವಿಧಾನಸೌಧದ ಈಶಾನ್ಯ ಭಾಗದ ರೋಸ್ ಗಾರ್ಡನ್ ನಲ್ಲಿ ಬಸವೇಶ್ವರ ಪುತ್ಥಳಿ ಸ್ಥಾಪನೆಗೆ ರಾಜ್ಯ ಸರ್ಕಾರ ಮಂಜೂರಾತಿ ನೀಡಿದೆ. ನವೆಂಬರ್ 1 ರಂದು ಕೆಂಪೇಗೌಡ ಪ್ರತಿಮೆ ಮತ್ತು ಬಸವೇಶ್ವರ ಪುತ್ಥಳಿ‌ ಅನಾವರಣಗೊಳಿಸಲು ಕ್ರಮ ವಹಿಸುವಂತೆಯೂ ಲೋಕೋಪಯೋಗಿ ಇಲಾಖೆಗೆ ಡಿಪಿಎಆರ್ ನಿಂದ ಸೂಚನೆ ನೀಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಕಳೆದ ಕೆಂಪೇಗೌಡ ಜಯಂತಿ ವೇಳೆ ವಿಧಾನಸೌಧ ಬಳಿ ಪ್ರತಿಮೆ ಸ್ಥಾಪನೆ ಬಗ್ಗೆ ಘೋಷಣೆ ಮಾಡಿದ್ದರು. ಸಚಿವ ಡಾ. ಅಶ್ವಥ್ ನಾರಾಯಣ ಮತ್ತು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರುಗಳು ಕೆಂಪೇಗೌಡ ಪ್ರತಿಮೆ ಸ್ಥಾಪನೆ ಸಂಬಂಧ ಸಿಎಂ ಬೊಮ್ಮಾಯಿಗೆ ಮನವಿ ಮಾಡಿದ್ದರು. ಇನ್ನು ಬಿ.ಎಸ್. ಯಡಿಯೂರಪ್ಪ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಬಸವೇಶ್ವರ ಪುತ್ಥಳಿ ಸ್ಥಾಪನೆ ಬಗ್ಗೆ ಘೋಷಣೆ ಮಾಡಿದ್ದರು.

ಐವರು IAS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ:

ಐವರು IAS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದೇ ವೇಳೆ, ಮೂವರು IAS ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ.

1. ಎಸ್​ ಆರ್ ಉಮಾಶಂಕರ್ -ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ

2. ಸೆಲ್ವಕುಮಾರ್ -ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ

3. ಗಿರೀಶ್‌ ಆರ್‌ -ಕೆಐಎಡಿಬಿ ಸಿಇಒ

4. ಎಂ.ಎಸ್‌. ಅರ್ಚನಾ -ಹಾಸನ ಜಿಲ್ಲಾಧಿಕಾರಿ

5. ಡಾ. ಎನ್‌. ಶಿವಶಂಕರ್ -ಪೌರಾಡಳಿತ ಇಲಾಖೆಯ ನಿರ್ದೇಶಕ

ಇನ್ನು, ಮೂವರು IAS ಅಧಿಕಾರಿಗಳಿಗೆ ಸರ್ಕಾರ ಹೆಚ್ಚುವರಿ ಹೊಣೆ ನೀಡಿದೆ:

1. ಕಪಿಲ್ ಮೋಹನ್ -ಕಂದಾಯ ಇಲಾಖೆ ಎಸಿಎಸ್ 2. ಸೆಲ್ವಕುಮಾರ್ – ಪ್ರಧಾನ ಕಾರ್ಯದರ್ಶಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ 3. ವಿ. ಪೊನ್ನುರಾಜ್ -ಶಿಕ್ಷಣ ‌ಇಲಾಖೆ ಕಾರ್ಯದರ್ಶಿ

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ