AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kempegowda statue: ವಿಧಾನಸೌಧದ ಆವರಣದಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ ಸಿಎಂ ಬೊಮ್ಮಾಯಿ ಅನುಮೋದನೆ

Basavaraj Bommai: ಸಿಎಂ ಬೊಮ್ಮಾಯಿ ಕಳೆದ ಕೆಂಪೇಗೌಡ ಜಯಂತಿ ವೇಳೆ ವಿಧಾನಸೌಧ ಬಳಿ ಪ್ರತಿಮೆ ಸ್ಥಾಪನೆ ಬಗ್ಗೆ ಘೋಷಣೆ ಮಾಡಿದ್ದರು. ಸಚಿವ ಅಶ್ವಥ್ ನಾರಾಯಣ ಮತ್ತು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರುಗಳು ಕೆಂಪೇಗೌಡ ಪ್ರತಿಮೆ ಸ್ಥಾಪನೆ ಸಂಬಂಧ ಸಿಎಂ ಬೊಮ್ಮಾಯಿಗೆ ಮನವಿ ಮಾಡಿದ್ದರು.

Kempegowda statue: ವಿಧಾನಸೌಧದ ಆವರಣದಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ ಸಿಎಂ ಬೊಮ್ಮಾಯಿ ಅನುಮೋದನೆ
ವಿಧಾನಸೌಧದ ಆವರಣದಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ ಸಿಎಂ ಬೊಮ್ಮಾಯಿ ಅನುಮೋದನೆ
TV9 Web
| Edited By: ಸಾಧು ಶ್ರೀನಾಥ್​|

Updated on: Aug 20, 2022 | 10:37 PM

Share

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ (Vidhana Soudha) ಬೆಂಗಳೂರಿನ ನಾಡಪ್ರಭು ಕೆಂಪೇಗೌಡರ ಪ್ರತಿಮೆ (Nadaprabhu Kempegowda statue) ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜೊತೆಗೂಡಿ ಪ್ರತಿಮೆ ಸ್ಥಾಪನೆಗೆ ನಿರ್ದಿಷ್ಟ ಸ್ಥಳ ಗುರುತಿಸುವಂತೆ ರಾಜ್ಯ ಲೋಕೋಪಯೋಗಿ ಇಲಾಖೆಗೆ ಸಿಎಂ ಬೊಮ್ಮಾಯಿ (CM Basavaraj Bommai) ಸೂಚನೆ ನೀಡಿದ್ದಾರೆ.

ವಿಧಾನಸೌಧದ ಈಶಾನ್ಯ ಭಾಗದ ರೋಸ್ ಗಾರ್ಡನ್ ನಲ್ಲಿ ಬಸವೇಶ್ವರ ಪುತ್ಥಳಿ ಸ್ಥಾಪನೆಗೆ ರಾಜ್ಯ ಸರ್ಕಾರ ಮಂಜೂರಾತಿ ನೀಡಿದೆ. ನವೆಂಬರ್ 1 ರಂದು ಕೆಂಪೇಗೌಡ ಪ್ರತಿಮೆ ಮತ್ತು ಬಸವೇಶ್ವರ ಪುತ್ಥಳಿ‌ ಅನಾವರಣಗೊಳಿಸಲು ಕ್ರಮ ವಹಿಸುವಂತೆಯೂ ಲೋಕೋಪಯೋಗಿ ಇಲಾಖೆಗೆ ಡಿಪಿಎಆರ್ ನಿಂದ ಸೂಚನೆ ನೀಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಕಳೆದ ಕೆಂಪೇಗೌಡ ಜಯಂತಿ ವೇಳೆ ವಿಧಾನಸೌಧ ಬಳಿ ಪ್ರತಿಮೆ ಸ್ಥಾಪನೆ ಬಗ್ಗೆ ಘೋಷಣೆ ಮಾಡಿದ್ದರು. ಸಚಿವ ಡಾ. ಅಶ್ವಥ್ ನಾರಾಯಣ ಮತ್ತು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರುಗಳು ಕೆಂಪೇಗೌಡ ಪ್ರತಿಮೆ ಸ್ಥಾಪನೆ ಸಂಬಂಧ ಸಿಎಂ ಬೊಮ್ಮಾಯಿಗೆ ಮನವಿ ಮಾಡಿದ್ದರು. ಇನ್ನು ಬಿ.ಎಸ್. ಯಡಿಯೂರಪ್ಪ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಬಸವೇಶ್ವರ ಪುತ್ಥಳಿ ಸ್ಥಾಪನೆ ಬಗ್ಗೆ ಘೋಷಣೆ ಮಾಡಿದ್ದರು.

ಐವರು IAS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ:

ಐವರು IAS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದೇ ವೇಳೆ, ಮೂವರು IAS ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ.

1. ಎಸ್​ ಆರ್ ಉಮಾಶಂಕರ್ -ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ

2. ಸೆಲ್ವಕುಮಾರ್ -ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ

3. ಗಿರೀಶ್‌ ಆರ್‌ -ಕೆಐಎಡಿಬಿ ಸಿಇಒ

4. ಎಂ.ಎಸ್‌. ಅರ್ಚನಾ -ಹಾಸನ ಜಿಲ್ಲಾಧಿಕಾರಿ

5. ಡಾ. ಎನ್‌. ಶಿವಶಂಕರ್ -ಪೌರಾಡಳಿತ ಇಲಾಖೆಯ ನಿರ್ದೇಶಕ

ಇನ್ನು, ಮೂವರು IAS ಅಧಿಕಾರಿಗಳಿಗೆ ಸರ್ಕಾರ ಹೆಚ್ಚುವರಿ ಹೊಣೆ ನೀಡಿದೆ:

1. ಕಪಿಲ್ ಮೋಹನ್ -ಕಂದಾಯ ಇಲಾಖೆ ಎಸಿಎಸ್ 2. ಸೆಲ್ವಕುಮಾರ್ – ಪ್ರಧಾನ ಕಾರ್ಯದರ್ಶಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ 3. ವಿ. ಪೊನ್ನುರಾಜ್ -ಶಿಕ್ಷಣ ‌ಇಲಾಖೆ ಕಾರ್ಯದರ್ಶಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ