Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕ ನಮ್ಮ ಕ್ಷೇತ್ರದ ಕಡೆಯೂ ಬನ್ನಿ, ಇಲ್ಲಿನ ಗಣಿಗಾರಿಕೆ ನಿಲ್ಲಿಸಿಕೊಡಿ.. ಸಂಸದೆ ಸುಮಲತಾಗೆ ನಾಗಮಂಗಲ ಶಾಸಕ ಸುರೇಶ್‌ ಗೌಡ ವ್ಯಂಗ್ಯ

ಅಕ್ಕ ದಯಮಾಡಿ ನಾಗಮಂಗಲದಲ್ಲಿ ಗಣಿಗಾರಿಕೆ ನಿಲ್ಲಿಸಿಕೊಡಿ. ಅಕ್ರಮ ಗಣಿಗಾರಿಕೆಗಳನ್ನು ತಡೆದರೆ ಸಂಸದ‌ೆ ಜತೆ ನಾನಿರುತ್ತೇನೆ. ನಾನೇ ಸ್ವತಃ ಅಕ್ರಮ ಗಣಿಗಾರಿಕೆ ಸ್ಥಳಗಳಿಗೆ ಕರೆದೊಯ್ಯುತ್ತೇನೆ. ಈ‌ ಹಿಂದೆ ನಾನು ಆ ಸ್ಥಳಕ್ಕೆ ಭೇಟಿ ನೀಡಿದ್ದೇನೆ...

ಅಕ್ಕ ನಮ್ಮ ಕ್ಷೇತ್ರದ ಕಡೆಯೂ ಬನ್ನಿ, ಇಲ್ಲಿನ ಗಣಿಗಾರಿಕೆ ನಿಲ್ಲಿಸಿಕೊಡಿ.. ಸಂಸದೆ ಸುಮಲತಾಗೆ ನಾಗಮಂಗಲ ಶಾಸಕ ಸುರೇಶ್‌ ಗೌಡ ವ್ಯಂಗ್ಯ
ಸುರೇಶ್‌ ಗೌಡ
Follow us
TV9 Web
| Updated By: ಆಯೇಷಾ ಬಾನು

Updated on: Jul 12, 2021 | 9:02 AM

ಮಂಡ್ಯ: ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಸಂಸದೆ ಸುಮಲತಾ ಸಮರ ಸಾರಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಅಕ್ಕ ನಮ್ಮ ಕ್ಷೇತ್ರದ ಕಡೆಯೂ ಬನ್ನಿ ಎಂದು ಮಂಡ್ಯ ಜಿಲ್ಲೆ ನಾಗಮಂಗಲ ಶಾಸಕ ಸುರೇಶ್‌ ಗೌಡ ವ್ಯಂಗ್ಯ ಮಾಡಿದ್ದಾರೆ. ಅಕ್ರಮ‌ ಗಣಿಗಾರಿಕೆ ತಡೆಯುವಂತೆ ಸಂಸದೆ ಸುಮಲತಾ ಅಂಬರೀಶ್‌ಗೆ ಆಹ್ವಾನ ನೀಡಿದ್ದಾರೆ.

ಅಕ್ಕ ದಯಮಾಡಿ ನಾಗಮಂಗಲದಲ್ಲಿ ಗಣಿಗಾರಿಕೆ ನಿಲ್ಲಿಸಿಕೊಡಿ. ಅಕ್ರಮ ಗಣಿಗಾರಿಕೆಗಳನ್ನು ತಡೆದರೆ ಸಂಸದ‌ೆ ಜತೆ ನಾನಿರುತ್ತೇನೆ. ನಾನೇ ಸ್ವತಃ ಅಕ್ರಮ ಗಣಿಗಾರಿಕೆ ಸ್ಥಳಗಳಿಗೆ ಕರೆದೊಯ್ಯುತ್ತೇನೆ. ಈ‌ ಹಿಂದೆ ನಾನು ಆ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ವಿಧಾನಸಭೆ, ಕೆಡಿಪಿ ಸಭೆಗಳಲ್ಲಿ ಅಕ್ರಮ ಗಣಿಗಾರಿಕೆ ಬಗ್ಗೆ ಪ್ರಸ್ತಾಪ ಮಾಡಿದ್ದೇನೆ. ಯಡಿಯೂರಪ್ಪನವರೇ ಅಕ್ರಮವನ್ನ ಸಕ್ರಮ ಮಾಡಿ ಎಂದಿದ್ದಾರೆ. ನಾನು ಹೋರಾಟ ಮಾಡಿದರೂ ಏನು ಪ್ರಯೋಜನವಾಗಿಲ್ಲ. ಬೆಳಗ್ಗೆ ನಿಲ್ಲಿಸುವುದು ರಾತ್ರಿ ವೇಳೆ ನಡೆಸುವುದು ಮಾಡುತ್ತಿದ್ದಾರೆ.

ಸಂಸದೆ ಅಕ್ಕ, ಅಕ್ರಮದ ವಿರುದ್ಧ ಹೋರಾಟಕ್ಕೆ ಧ್ವನಿಯಾಗಿದ್ದಾರೆ. ಅವರ ಹೋರಾಟಕ್ಕೆ ನಾವು ಬೆಂಬಲಕ್ಕಿದ್ದೀವಿ, ಬಂದು ನಿಲ್ಲಿಸಲಿ. ನಾಗಮಂಗಲದಲ್ಲಿ ಅಕ್ರಮ‌ ಗಣಿಗಾರಿಕೆ‌ಯನ್ನ ತಡೆದರೆ ಜನರ ಪರವಾಗಿ ಅವರಿಗೆ ಕೃತಜ್ಞತೆ ಸಲ್ಲಿಸ್ತೇನೆ ಎಂದು ಸುರೇಶ್‌ ಗೌಡ ಸುಮಲತಾರಿಗೆ ವ್ಯಂಗ್ಯ ಮಾಡಿದ್ದಾರೆ.

ಕೆಆರ್​ಎಸ್​ ಡ್ಯಾಂನಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದಕ್ಕೆ ಬೇಬಿ ಬೆಟ್ಟದಲ್ಲಿ ನಡೀತಿರೋ ಗಣಿಗಾರಿಕೆಯೇ ಕಾರಣ. ಮಂಡ್ಯ ಜಿಲ್ಲೆಯಲ್ಲಿ ಗಣಿಗಳು ಹೆಚ್ಚಿವೆ. ಜೊತೆಗೆ ಕ್ರಷರ್​ಗಳು ಸಹ ಹೆಚ್ಚಾಗಿವೆ. ಇದೇ ಕಾರಣಕ್ಕೆ ಕೆಆರ್​ಎಸ್​ ಡ್ಯಾಂ ಮೇಲೆ ಒತ್ತಡ ಹೆಚ್ಚಾಗಿ ಬಿರುಕು ಕಾಣಿಸಿಕೊಂಡಿದೆ ಅಂತಾ ಸಂಸದೆ ಸುಮಲತಾ ಆರೋಪಿಸಿದ್ರು. ಯಾವಾಗ ಸುಮಲತಾ ಹೀಗೆ ಆರೋಪಿಸಿದ್ರೋ.. ಅದಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭರ್ಜರಿ ತಿರುಗೇಟು ನೀಡಿದ್ರು. ಅಲ್ದೆ, ಸಂಸದೆಯನ್ನ ಟೀಕಿಸೋ ಭರದಲ್ಲಿ ಅವರು ನೀಡಿದ್ದ ಹೇಳಿಕೆ ರಾಜ್ಯ ರಾಜಕಾರಣದಲ್ಲಿ.. ಅದ್ರಲ್ಲೂ ಮಂಡ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದಾದ ಬಳಿಕ ಮಂಡ್ಯ ಜಿಲ್ಲೆಯಲ್ಲಿ ಗಣಿಗಾರಿಕೆ ಪ್ರದೇಶಗಳಿಗೆ ಭೇಟಿ ಕೊಡ್ತೀನಿ ಅಂತಾ ಸಂಸದೆ ಸುಮಲತಾ ಹೇಳಿದ್ರು. ಇದರಂತೆ ಮಂಡ್ಯದಲ್ಲಿ ಗಣಿಗಾರಿಕೆ ನಡೀತಿದ್ದ ಕೆಲವು ಪ್ರದೇಶಗಳಿಗೆ ಭೇಟಿ ನೀಡಿದ್ರು.

(Nagamangala MLA Suresh Gowda make fun of MP Sumalatha ambareesh in mandya)

ಇದನ್ನೂ ಓದಿ: ದೇವೇಗೌಡರೂ ಕೈಕಟ್ಟಿ ನಿಲ್ಲುತ್ತಾರೆ, ಅದು ನಮ್ಮ ಸಂಸ್ಕೃತಿ: ಫೋಟೋ ವೈರಲ್ ಮಾಡಿ ಸುಮಲತಾಗೆ ತಿರುಗೇಟು ಕೊಟ್ಟ ಹೆಚ್​ಡಿಕೆ ಅಭಿಮಾನಿಗಳು

ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ