AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಮಂಗಲ ಗಲಭೆ ಕೇಸ್​: ಬಂಧನ ಭೀತಿಯಲ್ಲಿ ಗ್ರಾಮ ತೊರೆದಿದ್ದ ಯುವಕ ಸಾವು

ಗಣೇಶನ ಮೂರ್ತಿ ವಿಸರ್ಜನೆ ವೇಳೆ ಗಲಭೆ ನಡೆದು ನಾಗಮಂಗಲ ಹೊತ್ತಿ ಉರಿದಿತ್ತು. ಇದೀಗ ನಾಗಮಂಗಲ ಸಹಜಸ್ಥಿತಿಯತ್ತ ಬಂದಿದೆ. ಬಂಧನದ ಭೀತಿಯಲ್ಲಿ ಗ್ರಾಮವನ್ನ ತೊರೆದಿದ್ದ ಹಲವು ಯುವಕರು ಇಂದಿಗೂ ಗ್ರಾಮಕ್ಕೆ ವಾಪಾಸ್ ಆಗಿಲ್ಲ. ಈ ಮಧ್ಯೆ ಬಂಧನ ಭೀತಿಯಲ್ಲಿ ಗ್ರಾಮವನ್ನ ತೊರೆದಿದ್ದ ಬದ್ರಿಕೊಪ್ಪಲು ಗ್ರಾಮದ ಯುವಕನೋರ್ವ ಸಾವನ್ನಪ್ಪಿದ್ದಾನೆ.

ನಾಗಮಂಗಲ ಗಲಭೆ ಕೇಸ್​: ಬಂಧನ ಭೀತಿಯಲ್ಲಿ ಗ್ರಾಮ ತೊರೆದಿದ್ದ ಯುವಕ ಸಾವು
ನಾಗಮಂಗಲ ಗಲಭೆ ಕೇಸ್​: ಬಂಧನ ಭೀತಿಯಲ್ಲಿ ಗ್ರಾಮ ತೊರೆದಿದ್ದ ಯುವಕ ಸಾವು
Follow us
ಪ್ರಶಾಂತ್​ ಬಿ.
| Updated By: ಗಂಗಾಧರ​ ಬ. ಸಾಬೋಜಿ

Updated on:Sep 21, 2024 | 4:22 PM

ಮಂಡ್ಯ, ಸೆಪ್ಟೆಂಬರ್​ 21: ಜಿಲ್ಲೆಯ ನಾಗಮಂಗಲದಲ್ಲಿ ಗಲಭೆ ಪ್ರಕರಣಕ್ಕೆ (Nagamangala Riot Case) ಸಂಬಂಧಿಸಿದಂತೆ ಸದ್ಯ 52 ಆರೋಪಿಗಳ ಬಂಧನವಾಗಿದೆ. ಬಂಧನದ ಭೀತಿಯಿಂದ ಕೆಲ ಯುವಕರು ಊರು ತೊರೆದಿದ್ದು, ಮನೆ ಮಂದಿ ಕಣ್ಣೀರು ಹಾಕುತ್ತಿದ್ದಾರೆ. ಗಲಭೆಗೆ ಕಾರಣವಾದ ಬದ್ರಿಕೊಪ್ಪಲು ಗ್ರಾಮದ 13 ಮಂದಿ ಅರೆಸ್ಟ್ ಆಗಿದ್ದಾರೆ. ಇದೀಗ ಬಂಧನ ಭೀತಿಯಲ್ಲಿ ಗ್ರಾಮ ತೊರೆದಿದ್ದ ಯುವಕನೋರ್ವ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬ್ರೈನ್ ಸ್ಟ್ರೋಕ್​ನಿಂದ ಕಿರಣ್(23) ಮೃತಪಟ್ಟಿದ್ದಾರೆ.

ಹೌದು. ಜಿಲ್ಲೆಯ ನಾಗಮಂಗಲ ತಾಲೂಕಿನ ಬದ್ರಿಕೊಪ್ಪಲು ಗ್ರಾಮದ ನಿವಾಸಿ ಕಿರಣ್​ ಸೆಪ್ಟೆಂಬರ್ 11ರ ರಾತ್ರಿ ಗಲಭೆ ನಂತರ ಗ್ರಾಮ ತೊರೆದಿದ್ದ. ಆದರೆ ನಿನ್ನೆ ಕಿರಣ್​ಗೆ ಬ್ರೈನ್ ಸ್ಟ್ರೋಕ್ ಆಗಿ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಮಂಡ್ಯ ನಾಗಮಂಗಲ ಗಲಭೆ ಪ್ರಕರಣ: ಮತ್ತೊಬ್ಬ ಅಧಿಕಾರಿಯ ತಲೆದಂಡ

ಕಿರಣ್ ತಂದೆ ಕುಮಾರ್​ರನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ನಾಗಮಂಗಲ ಗಲಭೆ ಕೇಸ್​ನಲ್ಲಿ ಕುಮಾರ್ 17ನೇ ಆರೋಪಿಯಾಗಿದ್ದಾರೆ. ಸದ್ಯ ಮಂಡ್ಯ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಶವ ಸ್ಥಳಾಂತರ ಮಾಡಲಾಗಿದ್ದು, ಇದೀಗ ಕಿರಣ್ ಮೃತದೇಹ ಗ್ರಾಮಕ್ಕೆ ಆಗಮಿಸಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಅಂದಹಾಗೆ ಪ್ರಕರಣ ಸಂಬಂಧ ಬದ್ರಿಕೊಪ್ಪಲು ಗ್ರಾಮದ ಹಲವರ ಬಂಧನವಾಗಿದ್ದರೆ, ಮತ್ತೊಂದು ಕಡೆ 25 ಕ್ಕೂ ಹೆಚ್ಚು ಯುವಕರು ಗ್ರಾಮ ತೊರೆದಿದ್ದಾರೆ. ಹೀಗಾಗಿ ಯುವಕರ ಕುಟುಂಬಸ್ಥರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ ಕದಬಹಳ್ಳಿ ಗ್ರಾಮದ ರೈತರು ಗ್ರಾಮಕ್ಕೆ ಭೇಟಿ ನೀಡಿ 20ಕ್ಕೂ ಹೆಚ್ಚು ಕುಟುಂಬಗಳಿಗೆ ತಮ್ಮ ಕೈಲಾದ ಮಟ್ಟಿಗೆ ಆರ್ಥಿಕ ಸಹಾಯ ಮಾಡಿದ್ದಾರೆ. ಕುಟುಂಬಗಳಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ನಾಗಮಂಗಲ ಗಲಭೆ ಪ್ರಕರಣ: ಬಂಧಿತ ಆರೋಪಿಗಳ ಕುಟುಂಬಕ್ಕೆ ಹೆಚ್​ಡಿಕೆ ಆರ್ಥಿಕ ಸಹಾಯ

ಬಂಧನಕ್ಕೆ ಒಳಗಾಗಿ ಮಂಡ್ಯ ಜಿಲ್ಲಾ ಕಾರಗೃಹದಲ್ಲಿರುವ ಹಿಂದೂಗಳನ್ನ ಭೇಟಿ ಮಾಡಲು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮುಂದಾಗಿದ್ದರು. ಆದರೆ ಜಿಲ್ಲೆಗೆ ಬರುವ ಮೊದಲೇ ಮಂಡ್ಯ ಜಿಲ್ಲೆಗೆ ಬರದಂತೆ ಆದೇಶವನ್ನ ಹೊರಡಿಸಿ, ಮಂಡ್ಯ ಜಿಲ್ಲೆಯ ಗಡಿ, ನಿಡಗಟ್ಟ ಬಳಿಯೇ ಪೊಲೀಸರು ತಡೆದು ಆದೇಶದ ಪ್ರತಿ ತೋರಿಸಿ ಜಿಲ್ಲಾ ಪ್ರವೇಶಕ್ಕೆ ಬ್ರೇಕ್ ಹಾಕಿದ್ದರು. ಹೀಗಾಗಿ ಸರ್ಕಾರದ ವಿರುದ್ಧ ಮುತಾಲಿಕ್ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:18 pm, Sat, 21 September 24

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು