ಕೆಎಸ್​ಆರ್​ಟಿಸಿ ಬಸ್ ಚಾಲಕ ಆತ್ಮಹತ್ಯೆ ಯತ್ನಕ್ಕೂ ಮುನ್ನ ಬರೆದಿದ್ದ ಡೆತ್​ ನೋಟ್​ ಪತ್ತೆ: ಕೃಷಿ ಸಚಿವರ ಹೆಸರು ಉಲ್ಲೇಖ

ರಾಜ್ಯ ರಾಜಕೀಯದಲ್ಲಿ ನಾಗಮಂಗಲ ಡಿಪೊದ ಕೆಎಸ್​​ಆರ್​​​ಟಿಸಿ ಬಸ್​ ಚಾಲಕನ ಆತ್ಮಹತ್ಯೆಗೆ ಯತ್ನ ಸಾಕಷ್ಟು ಚರ್ಚೆಯಾಗುತ್ತಿದೆ. ಇದೀಗ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸುವ ಮುನ್ನ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಬರೆದ ಪತ್ರ ಟಿವಿ9 ಡಿಜಿಟಲ್​​ಗೆ ದೊರೆತಿದೆ.

ಕೆಎಸ್​ಆರ್​ಟಿಸಿ ಬಸ್ ಚಾಲಕ ಆತ್ಮಹತ್ಯೆ ಯತ್ನಕ್ಕೂ ಮುನ್ನ ಬರೆದಿದ್ದ ಡೆತ್​ ನೋಟ್​ ಪತ್ತೆ: ಕೃಷಿ ಸಚಿವರ ಹೆಸರು ಉಲ್ಲೇಖ
ಜಗದೀಶ್​ ಪತ್ರ (ಎಡಚಿತ್ರ) ಚಾಲಕ ಜಗದೀಶ್​ (ಬಲಚಿತ್ರ)
Follow us
| Updated By: ವಿವೇಕ ಬಿರಾದಾರ

Updated on:Jul 06, 2023 | 1:14 PM

ಮಂಡ್ಯ: ಸದ್ಯ ರಾಜ್ಯ ರಾಜಕೀಯದಲ್ಲಿ ನಾಗಮಂಗಲ (Nagamangala) ಡಿಪೊದ ಕೆಎಸ್​​ಆರ್​​​ಟಿಸಿ (KSRTC) ಬಸ್​ ಚಾಲಕನ ಆತ್ಮಹತ್ಯೆ ಯತ್ನ ಸಾಕಷ್ಟು ಚರ್ಚೆಯಾಗುತ್ತಿದೆ. ಚಾಲಕ ಜಗದೀಶ್ (Driver Jagadish) ಆತ್ಮಹತ್ಯೆಗೆ ಯತ್ನಿಸುವ ಮುನ್ನ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಬರೆದ ಪತ್ರ ಟಿವಿ9 ಡಿಜಿಟಲ್​​ಗೆ ದೊರೆತಿದೆ. ಪತ್ರದಲ್ಲಿ ತಮ್ಮ ಆತ್ಮಹತ್ಯೆಗೆ ಕಾರಣವೇನೆಂದು ಬರೆದಿದ್ದಾರೆ.

ನನ್ನ ವರ್ಗಾವಣೆಗೆ ಕಾರಣ ಏನೆಂದು ಡಿಪೋ ಮ್ಯಾನೇಜರ್​ಗೆ ಕೇಳಿದೆ. ನಿಯಂತ್ರಣಾಧಿಕಾರಿಗಳು ನಿನ್ನನ್ನು ವರ್ಗಾವಣೆ ಮಾಡಿದ್ದಾರೆ ಎಂದರು. ಅವರನ್ನು ಕೇಳಿದಾಗ ಸಚಿವರ ಆದೇಶದ ಮೇರೆಗೆ ವರ್ಗಾವಣೆ ಅಂದರು. ನನ್ನ ಮೇಲೆ ಸಚಿವರಿಗೆ ಯಾಕಿಷ್ಟು ಕೋಪ ತಿಳಿಯದೆ ನೊಂದಿದ್ದೇನೆ. ಈ ಒತ್ತಡ, ಅವಮಾನ ಸಹಿಸಲು ನನ್ನಿಂದ ಆಗುತ್ತಿಲ್ಲ. ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ಕೊಡಿ. ನನ್ನ ಆತ್ಮಹತ್ಯೆಗೆ ಶಾಸಕರೇ ಕಾರಣ” ಎಂದು ಡೆತ್ ನೋಟ್ ಬರೆದಿದ್ದಾರೆ.

ಕೆಎಸ್​ಆರ್​​ಟಿಸಿ ಚಾಲಕ ಜಗದೀಶ್​ ಪತ್ರ

“ನಾನು ಜಗದೀಶ್​ ಹೆಚ್​​.ಆರ್​ ಚಾಲಕ ಕಮ್​ ನಿರ್ವಾಹಕನಾದ ನಾನು ನಾಗಮಂಗಲ ಘಟಕ ಮಂಡ್ಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ದಿನಾಂಕ 5/07/2023 ರಂದು 83AB ಘಟಕಕ್ಕೆ ಕರ್ತವ್ಯಕ್ಕೆ ನಿಯೋಜಿಸಿದ್ದು, ಎಂದಿನಂತೆ ನಾನು ಘಟಕಕ್ಕೆ ಬಂದಿದ್ದು, 83ABಗೆ ETM ಯಂತ್ರ ಪಡೆದ ನಂತರ AWS ಮಂಜುನಾಥ್​​ ಸರ್​​​​​ರವರು ನನನ್ನು ಭೇಟಿ ಮಾಡಿ ETM ಯಂತ್ರವನ್ನು ವಾಪಸ್​​ ನೀಡುವಂತೆ ಸೂಚಿಸಿ ನಿಮಗೆ ಮದ್ದೂರು ಘಟಕಕ್ಕೆ ವರ್ಗಾವಣೆಗೊಂಡಿದೆ. ನೀವು ಮದ್ದೂರು ಘಟಕದಲ್ಲಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿರುತ್ತಾರೆ.

ಇದನ್ನೂ ಓದಿ: ಕೆಎಸ್​ಆರ್​​ಟಿಸಿ ಚಾಲಕ ಆತ್ಮಹತ್ಯೆಗೆ ಯತ್ನ ಪ್ರಕರಣ: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಗರಂ

ನಾನು AWS ಅವರನ್ನು ನನ್ನನ್ನು ಏಕಾಏಕಿ ವರ್ಗಾವಣೆ ಮಾಡಲು ಕಾರಣ ಏನು ಎಂದು ಕೇಳಿರುತ್ತೇನೆ. ಅವರು ನನಗೆ ಗೊತ್ತಿಲ್ಲ ನನಗೆ ವಿಭಾಗೀಯ ನಿಯಂತ್ರಣಾಧಿಕಾರಿಗಳ ಆದೇಶ ಎಂದು ತಿಳಿಸಿರುತ್ತಾರೆ. ನಂತರ ನಾನು ವಿಭಾಗೀಯ ನಿಯಂತ್ರಣಾಧಿಕಾರಿಗಳನ್ನು ದೂರವಾಣಿ ಮುಖಾಂತರ ಕೇಳಿದಾಗ ಅವರು ನಾಗಮಂಗಲ ತಾಲೂಕಿನ ಶಾಸಕರು ಮಾನ್ಯ ಕೃಷಿ ಸಚಿವರಾದ ಚಲುವರಾಯಸ್ವಾಮಿಯವರ ಆದೇಶದ ಮೇರೆಗೆ ನಿಮ್ಮನ್ನು ವರ್ಗಾವಣೆ ಎಂದು ತಿಳಿಸಿರುತ್ತೇವೆ.

ಆದಕಾರಣ ನನ್ನ ಮೇಲೆ ಸಚಿವರಿಗೆ ಯಾಕಿಷ್ಟು ಕೋಪ ಎಂದು ತಿಳಿಯದೆ ಮಾನಸಿಕವಾಗಿ ನೊಂದು, ಒತ್ತಡ ಮತ್ತು ಅವಮಾನ ಸಹಿಸದೆ ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ. ಇದಕ್ಕೆ ಶಾಸಕರೇ ನೇರ ಹೊಣೆ” ಎಂದು ಪತ್ರ ಬರೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:47 pm, Thu, 6 July 23

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?