AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​ಆರ್​ಟಿಸಿ ಬಸ್ ಚಾಲಕ ಆತ್ಮಹತ್ಯೆ ಯತ್ನಕ್ಕೂ ಮುನ್ನ ಬರೆದಿದ್ದ ಡೆತ್​ ನೋಟ್​ ಪತ್ತೆ: ಕೃಷಿ ಸಚಿವರ ಹೆಸರು ಉಲ್ಲೇಖ

ರಾಜ್ಯ ರಾಜಕೀಯದಲ್ಲಿ ನಾಗಮಂಗಲ ಡಿಪೊದ ಕೆಎಸ್​​ಆರ್​​​ಟಿಸಿ ಬಸ್​ ಚಾಲಕನ ಆತ್ಮಹತ್ಯೆಗೆ ಯತ್ನ ಸಾಕಷ್ಟು ಚರ್ಚೆಯಾಗುತ್ತಿದೆ. ಇದೀಗ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸುವ ಮುನ್ನ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಬರೆದ ಪತ್ರ ಟಿವಿ9 ಡಿಜಿಟಲ್​​ಗೆ ದೊರೆತಿದೆ.

ಕೆಎಸ್​ಆರ್​ಟಿಸಿ ಬಸ್ ಚಾಲಕ ಆತ್ಮಹತ್ಯೆ ಯತ್ನಕ್ಕೂ ಮುನ್ನ ಬರೆದಿದ್ದ ಡೆತ್​ ನೋಟ್​ ಪತ್ತೆ: ಕೃಷಿ ಸಚಿವರ ಹೆಸರು ಉಲ್ಲೇಖ
ಜಗದೀಶ್​ ಪತ್ರ (ಎಡಚಿತ್ರ) ಚಾಲಕ ಜಗದೀಶ್​ (ಬಲಚಿತ್ರ)
ಸೂರಜ್ ಪ್ರಸಾದ್ ಎಸ್.ಎನ್
| Edited By: ವಿವೇಕ ಬಿರಾದಾರ|

Updated on:Jul 06, 2023 | 1:14 PM

Share

ಮಂಡ್ಯ: ಸದ್ಯ ರಾಜ್ಯ ರಾಜಕೀಯದಲ್ಲಿ ನಾಗಮಂಗಲ (Nagamangala) ಡಿಪೊದ ಕೆಎಸ್​​ಆರ್​​​ಟಿಸಿ (KSRTC) ಬಸ್​ ಚಾಲಕನ ಆತ್ಮಹತ್ಯೆ ಯತ್ನ ಸಾಕಷ್ಟು ಚರ್ಚೆಯಾಗುತ್ತಿದೆ. ಚಾಲಕ ಜಗದೀಶ್ (Driver Jagadish) ಆತ್ಮಹತ್ಯೆಗೆ ಯತ್ನಿಸುವ ಮುನ್ನ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಬರೆದ ಪತ್ರ ಟಿವಿ9 ಡಿಜಿಟಲ್​​ಗೆ ದೊರೆತಿದೆ. ಪತ್ರದಲ್ಲಿ ತಮ್ಮ ಆತ್ಮಹತ್ಯೆಗೆ ಕಾರಣವೇನೆಂದು ಬರೆದಿದ್ದಾರೆ.

ನನ್ನ ವರ್ಗಾವಣೆಗೆ ಕಾರಣ ಏನೆಂದು ಡಿಪೋ ಮ್ಯಾನೇಜರ್​ಗೆ ಕೇಳಿದೆ. ನಿಯಂತ್ರಣಾಧಿಕಾರಿಗಳು ನಿನ್ನನ್ನು ವರ್ಗಾವಣೆ ಮಾಡಿದ್ದಾರೆ ಎಂದರು. ಅವರನ್ನು ಕೇಳಿದಾಗ ಸಚಿವರ ಆದೇಶದ ಮೇರೆಗೆ ವರ್ಗಾವಣೆ ಅಂದರು. ನನ್ನ ಮೇಲೆ ಸಚಿವರಿಗೆ ಯಾಕಿಷ್ಟು ಕೋಪ ತಿಳಿಯದೆ ನೊಂದಿದ್ದೇನೆ. ಈ ಒತ್ತಡ, ಅವಮಾನ ಸಹಿಸಲು ನನ್ನಿಂದ ಆಗುತ್ತಿಲ್ಲ. ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ಕೊಡಿ. ನನ್ನ ಆತ್ಮಹತ್ಯೆಗೆ ಶಾಸಕರೇ ಕಾರಣ” ಎಂದು ಡೆತ್ ನೋಟ್ ಬರೆದಿದ್ದಾರೆ.

ಕೆಎಸ್​ಆರ್​​ಟಿಸಿ ಚಾಲಕ ಜಗದೀಶ್​ ಪತ್ರ

“ನಾನು ಜಗದೀಶ್​ ಹೆಚ್​​.ಆರ್​ ಚಾಲಕ ಕಮ್​ ನಿರ್ವಾಹಕನಾದ ನಾನು ನಾಗಮಂಗಲ ಘಟಕ ಮಂಡ್ಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ದಿನಾಂಕ 5/07/2023 ರಂದು 83AB ಘಟಕಕ್ಕೆ ಕರ್ತವ್ಯಕ್ಕೆ ನಿಯೋಜಿಸಿದ್ದು, ಎಂದಿನಂತೆ ನಾನು ಘಟಕಕ್ಕೆ ಬಂದಿದ್ದು, 83ABಗೆ ETM ಯಂತ್ರ ಪಡೆದ ನಂತರ AWS ಮಂಜುನಾಥ್​​ ಸರ್​​​​​ರವರು ನನನ್ನು ಭೇಟಿ ಮಾಡಿ ETM ಯಂತ್ರವನ್ನು ವಾಪಸ್​​ ನೀಡುವಂತೆ ಸೂಚಿಸಿ ನಿಮಗೆ ಮದ್ದೂರು ಘಟಕಕ್ಕೆ ವರ್ಗಾವಣೆಗೊಂಡಿದೆ. ನೀವು ಮದ್ದೂರು ಘಟಕದಲ್ಲಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿರುತ್ತಾರೆ.

ಇದನ್ನೂ ಓದಿ: ಕೆಎಸ್​ಆರ್​​ಟಿಸಿ ಚಾಲಕ ಆತ್ಮಹತ್ಯೆಗೆ ಯತ್ನ ಪ್ರಕರಣ: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಗರಂ

ನಾನು AWS ಅವರನ್ನು ನನ್ನನ್ನು ಏಕಾಏಕಿ ವರ್ಗಾವಣೆ ಮಾಡಲು ಕಾರಣ ಏನು ಎಂದು ಕೇಳಿರುತ್ತೇನೆ. ಅವರು ನನಗೆ ಗೊತ್ತಿಲ್ಲ ನನಗೆ ವಿಭಾಗೀಯ ನಿಯಂತ್ರಣಾಧಿಕಾರಿಗಳ ಆದೇಶ ಎಂದು ತಿಳಿಸಿರುತ್ತಾರೆ. ನಂತರ ನಾನು ವಿಭಾಗೀಯ ನಿಯಂತ್ರಣಾಧಿಕಾರಿಗಳನ್ನು ದೂರವಾಣಿ ಮುಖಾಂತರ ಕೇಳಿದಾಗ ಅವರು ನಾಗಮಂಗಲ ತಾಲೂಕಿನ ಶಾಸಕರು ಮಾನ್ಯ ಕೃಷಿ ಸಚಿವರಾದ ಚಲುವರಾಯಸ್ವಾಮಿಯವರ ಆದೇಶದ ಮೇರೆಗೆ ನಿಮ್ಮನ್ನು ವರ್ಗಾವಣೆ ಎಂದು ತಿಳಿಸಿರುತ್ತೇವೆ.

ಆದಕಾರಣ ನನ್ನ ಮೇಲೆ ಸಚಿವರಿಗೆ ಯಾಕಿಷ್ಟು ಕೋಪ ಎಂದು ತಿಳಿಯದೆ ಮಾನಸಿಕವಾಗಿ ನೊಂದು, ಒತ್ತಡ ಮತ್ತು ಅವಮಾನ ಸಹಿಸದೆ ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ. ಇದಕ್ಕೆ ಶಾಸಕರೇ ನೇರ ಹೊಣೆ” ಎಂದು ಪತ್ರ ಬರೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:47 pm, Thu, 6 July 23

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು