AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾಲ್ವರು ಆಪ್ತರನ್ನು ಕಳೆದುಕೊಂಡೆ..ನನ್ನ ಹಳ್ಳಿಯಲ್ಲಿ ಸಾಲುಸಾಲು ಹೆಣಗಳು ಬೀಳುತ್ತಿವೆ’-ಕೊರೊನಾ ಭೀಕರತೆ ಬಿಚ್ಚಿಟ್ಟ ನಾಗತಿಹಳ್ಳಿ ಚಂದ್ರಶೇಖರ್​

ನಮ್ಮ ತಲೆಮಾರು ಇಂಥ ಕರಾಳದಿನಗಳಿಗೆ ಸಾಕ್ಷಿಯಾಗುತ್ತದೆ ಎಂದು ಎಣಿಸಿರಲಿಲ್ಲ. ಶತಾಯಗತಾಯ ಹೋರಾಟ ಮಾಡಿ ಆಸ್ಪತ್ರೆಯಲ್ಲಿ ಹಾಸಿಗೆ ಪಡೆದುಕೊಂಡಾಯಿತು. ಆದರೆ ಮಾರ್ಗದಲ್ಲೇ ಜೀವಹೋಯಿತು ಎಂದು ನಾಗತಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

‘ನಾಲ್ವರು ಆಪ್ತರನ್ನು ಕಳೆದುಕೊಂಡೆ..ನನ್ನ ಹಳ್ಳಿಯಲ್ಲಿ ಸಾಲುಸಾಲು ಹೆಣಗಳು ಬೀಳುತ್ತಿವೆ’-ಕೊರೊನಾ ಭೀಕರತೆ ಬಿಚ್ಚಿಟ್ಟ ನಾಗತಿಹಳ್ಳಿ ಚಂದ್ರಶೇಖರ್​
ನಾಗತಿಹಳ್ಳಿ ಚಂದ್ರಶೇಖರ್​
Lakshmi Hegde
|

Updated on: May 11, 2021 | 11:35 PM

Share

ಕೊರೊನಾದಿಂದ ಆಗುತ್ತಿರುವ ಅನಾಹುತಗಳು ಒಂದೆರಡಲ್ಲ. ಅದರಲ್ಲೂ ಈಗಿದ್ದ ಜೀವವನ್ನು ಇನ್ನೊಂದು ಕ್ಷಣದಲ್ಲಿ ಈ ಸೋಂಕು ಬಲಿಪಡಿಯುತ್ತಿದೆ. ಜನಜೀವನವನ್ನೇ ಅಸ್ವಸ್ಥಗೊಳಿಸಿದೆ. ಇದೀಗ ಖ್ಯಾತ ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರ ನಾಲ್ವರು ಆಪ್ತರು ಕೊರೊನಾದಿಂದ ಮೃತಪಟ್ಟಿದ್ದಾರೆ. ಈ ಬಗ್ಗೆ ನಾಗತಿಹಳ್ಳಿ ಚಂದ್ರಶೇಖರ್ ಅವರೇ ಟ್ವಿಟರ್​​ನಲ್ಲಿ ಹೇಳಿಕೊಂಡಿದ್ದಾರೆ.

ನಮ್ಮ ತಲೆಮಾರು ಇಂಥ ಕರಾಳದಿನಗಳಿಗೆ ಸಾಕ್ಷಿಯಾಗುತ್ತದೆ ಎಂದು ಎಣಿಸಿರಲಿಲ್ಲ. ಶತಾಯಗತಾಯ ಹೋರಾಟ ಮಾಡಿ ಆಸ್ಪತ್ರೆಯಲ್ಲಿ ಹಾಸಿಗೆ ಪಡೆದುಕೊಂಡಾಯಿತು. ಆದರೆ ಅಲ್ಲಿಗೆ ಹೋಗಿ ದಾಖಲಾಗುವ ಮೊದಲೇ ನಾಲ್ವರು ಪ್ರಾಣ ಕಳೆದುಕೊಂಡರು. ಇನ್ನು ಕ್ಷೇಮವೆಂದು ನಂಬಿದ್ದ ನನ್ನ ಹಳ್ಳಿಯಲ್ಲೂ ಸಾಲುಸಾಲಾಗಿ ಹೆಣಗಳು ಬೀಳುತ್ತಿವೆ. ಎಲ್ಲರೂ ಅಸಹಾಯಕರಂತೆ ಕಾಣುತ್ತಿದ್ದೇವೆ ಎಂದು ನೋವಿನ ನುಡಿಗಳನ್ನು ಟ್ವೀಟ್​ ಮಾಡಿದ್ದಾರೆ.

ಕೊರೊನಾ ಎರಡನೇ ಅಲೆ ತುಂಬ ಮಾರಣಾಂತಿಕವಾಗಿ ಪರಿಣಮಿಸಿದೆ. ಸೋಂಕು ಹರಡುವ ಪ್ರಮಾಣ, ಈ ವೈರಸ್​ನಿಂದ ಸಾಯುವವರ ಸಂಖ್ಯೆ ಹೆಚ್ಚುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಸಹ ಈ ಬಾರಿ ಹಲವರು ಕೊರೊನಾದಿಂದ ಪ್ರಾಣಕಳೆದುಕೊಂಡಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ಆಸ್ಪತ್ರೆಗಳಲ್ಲಿ ಬೆಡ್​ಗಳ ಕೊರತೆ ಎದುರಾಗಿದೆ. ಅದೆಷ್ಟೋ ಜನ ಹೋಂ ಐಸೋಲೇಶನ್​​ನಲ್ಲೇ ಇದ್ದು ಗುಣಮುಖರಾಗುತ್ತಿದ್ದಾರೆ. ಇನ್ನೊಂದಷ್ಟು ಮಂದಿ ಕೊನೇ ಕ್ಷಣದಲ್ಲಿ ಆಸ್ಪತ್ರೆ ಸೇರಲು ಹೋಗಿ ಬೆಡ್​ ಸಿಗದೆ ಉಸಿರು ಚೆಲ್ಲುತ್ತಿದ್ದಾರೆ. ಒಟ್ಟಿನಲ್ಲಿ ಈ ಸೋಂಕಿನ ಎದುರು ಮನುಷ್ಯ ಅಸಹಾಯಕನಾಗಿದ್ದಾನೆ.

ಇದನ್ನೂ ಓದಿ: ‘ಮಾತುಕತೆಗೆ ನಾವು ಬರೋದಿಲ್ಲ..’-ಮತ್ತೆ ಜಮ್ಮುಕಾಶ್ಮೀರದ ಬಗ್ಗೆ ಅಲವತ್ತುಕೊಂಡ ಪಾಕಿಸ್ತಾನ ಪ್ರಧಾನಿ

(Nagathihalli Chandrashekhar Unleashing the horror of the corona virus)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್