AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗೇಂದ್ರ ರಾಜೀನಾಮೆ: ಬಿಜೆಪಿಗೆ ಸಿಕ್ಕ ಜಯ, ಸಿಎಂ ರಾಜೀನಾಮೆಗೂ ಹೋರಾಟ ಎಂದ ರವಿ ಕುಮಾರ್

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಧಾನ‌ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್​, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿದೆ. ದಲಿತರ ಅಭಿವೃದ್ಧಿಗೆ ತೆಗೆದಿಟ್ಟ ಹಣ ಚುನಾವಣೆಗೆ ಬಳಸಿರುವುದು ಸಾಬೀತಾಗಿದೆ. ನಾಗೇಂದ್ರ ರಾಜೀನಾಮೆ ಬಿಜೆಪಿಗೆ ಸಿಕ್ಕ ಜಯ. ಒಬ್ಬ ಪ್ರಾಮಾಣಿಕ ಅಧಿಕಾರಿ ಹೋರಾಟಕ್ಕೆ ಸಂದ ಜಯ ಎಂದು ಹೇಳಿದ್ದಾರೆ.

ನಾಗೇಂದ್ರ ರಾಜೀನಾಮೆ: ಬಿಜೆಪಿಗೆ ಸಿಕ್ಕ ಜಯ, ಸಿಎಂ ರಾಜೀನಾಮೆಗೂ ಹೋರಾಟ ಎಂದ ರವಿ ಕುಮಾರ್
ನಾಗೇಂದ್ರ ರಾಜೀನಾಮೆ: ಬಿಜೆಪಿಗೆ ಸಿಕ್ಕ ಜಯ, ಸಿಎಂ ರಾಜೀನಾಮೆಗೂ ಹೋರಾಟ ಎಂದ ರವಿ ಕುಮಾರ್
ಕಿರಣ್​ ಹನಿಯಡ್ಕ
| Edited By: |

Updated on:Jun 06, 2024 | 5:12 PM

Share

ಬೆಂಗಳೂರು, ಜೂನ್​ 06: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಜನ ಸೇವೆ ಮತ್ತು ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ನಾಗೇಂದ್ರ ಹೆಸರು ಕೇಳಿಬಂದ ಹಿನ್ನಲ್ಲೆ ಇಂದು ರಾಜೀನಾಮೆ ನೀಡಿದ್ದಾರೆ. ಆದರೆ ಸಂಜೆ ಅಧಿಕೃತವಾಗಿ ಮಾಹಿತಿ ಹೊರಬಿಳ್ಳಲಿದೆ. ನಾಗೇಂದ್ರ ರಾಜೀನಾಮೆ ಬಿಜೆಪಿಗೆ ಸಿಕ್ಕ ಜಯ. ಒಬ್ಬ ಪ್ರಾಮಾಣಿಕ ಅಧಿಕಾರಿ ಹೋರಾಟಕ್ಕೆ ಸಂದ ಜಯ ಎಂದು ವಿಧಾನ‌ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿದೆ. ದಲಿತರ ಅಭಿವೃದ್ಧಿಗೆ ತೆಗೆದಿಟ್ಟ ಹಣ ಚುನಾವಣೆಗೆ ಬಳಸಿರುವುದು ಸಾಬೀತಾಗಿದೆ. ಸರ್ಕಾರ ಭ್ರಷ್ಟಾಚಾರ ಆಗಿರುದನ್ನು ಒಪ್ಪಿಕೊಂಡಿದೆ. ಇಷ್ಟು ದೊಡ್ಡ ಭ್ರಷ್ಟಾಚಾರ ಸಿಎಂ ಅನುಮತಿ ಇಲ್ಲದೇ ಕಳಿಸಲು ಸಾಧ್ಯವಿಲ್ಲ.

ಇದನ್ನೂ ಓದಿ: ಸಚಿವ ನಾಗೇಂದ್ರ ರಾಜೀನಾಮೆ: ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ

ಹಣಕಾಸು ಸಚಿವರಾಗಿರುವ ಸಿದ್ದರಾಮಯ್ಯ ಕೂಡ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಒಂದು ವೇಳೆ ರಾಜೀನಾಮೆ ಕೊಡದಿದ್ದರೆ ರಾಜ್ಯಾದ್ಯಂತ ಸಿದ್ದರಾಮಯ್ಯ ವಿರುದ್ದ ಹೋರಾಟ ಮಾಡುತ್ತೇವೆ. ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.

ಇನ್ನೂ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಟಿವಿ9ಗೆ ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ.ನಾಗೇಂದ್ರ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಂಜೆ 4.30ಕ್ಕೆ ಸುದ್ದಿಗೋಷ್ಠಿ ನಡೆಸುತ್ತೇನೆ. ಬಳಿಕ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ತೀವ್ರ ಸ್ವರೂಪ ಪಡೆದುಕೊಂಡ ವಾಲ್ಮೀಕಿ ನಿಗಮ ಹಗರಣ: ಇಡಿ ಮೊರೆ ಹೋದ ಬಿಜೆಪಿ

ನಗರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್​ ಸುದ್ದಿಗೋಷ್ಠಿ ಮಾಡಿದ್ದು, ವೇಳೆ ಸಚಿವ ನಾಗೇಂದ್ರ ಕರೆ ಮಾಡಿದ್ದು, ಇನ್ನೂ ರಾಜೀನಾಮೆ ನೀಡಿಲ್ಲ ಎಂದು ಡಿಸಿಎಂಗೆ ಸ್ಪಷ್ಟನೆ ನೀಡಿದ್ದಾರೆ. ಸಂಜೆ 4.30ಕ್ಕೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಮಾಡ್ತೇನೆ. ಬಳಿಕ ತೀರ್ಮಾನ ಮಾಡ್ತೇನೆ ಎಂದು ಡಿಕೆ ಶಿವಕುಮಾರ್​ಗೆ ನಾಗೇಂದ್ರ ಹೇಳಿದ್ದಾರೆ. ಸಂಜೆ 7.30ಕ್ಕೆ ಸಿಎಂರನ್ನು ನಾಗೇಂದ್ರ ಭೇಟಿ ಮಾಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:12 pm, Thu, 6 June 24

Follow Us
Kiran Haniyadka
Kiran Haniyadka
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ