AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲ್​ಬಾಗ್ ಫ್ಲವರ್ ​​ಶೋ ವೀಕ್ಷಿಸಲು ತೆರಳುವವರಿಗೆ ಗುಡ್​ನ್ಯೂಸ್ ನೀಡಿದ ನಮ್ಮ ಮೆಟ್ರೋ

ಪ್ರಯಾಣಿಕರ ಅನುಕೂಲ ದೃಷ್ಟಿಯಿಂದ ಮೆಟ್ರೋದಲ್ಲಿ ರಿಟರ್ನ್ ಜರ್ನಿ ಪೇಪರ್ ಟಿಕೆಟ್ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಪೇಪರ್ ಟಿಕೆಟ್ ಲಭ್ಯವಾಗಲಿದೆ. ಲಾಲ್​​ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ನಿಲ್ದಾಣಕ್ಕೆ 30 ರೂ. ಪೇಪರ್ ಟಿಕೆಟ್ ಪಡೆದು ಪ್ರಯಾಣಿಸಬಹುದೆ. ಎಎಫ್​ಸಿ ಗೇಟ್​ ಬಳಸಿ ಯಾವುದೇ ನಿಲ್ದಾಣಕ್ಕೆ ಪ್ರಯಾಣ ಬೆಳೆಸಬಹುದಾಗಿದೆ.

ಲಾಲ್​ಬಾಗ್ ಫ್ಲವರ್ ​​ಶೋ ವೀಕ್ಷಿಸಲು ತೆರಳುವವರಿಗೆ ಗುಡ್​ನ್ಯೂಸ್ ನೀಡಿದ ನಮ್ಮ ಮೆಟ್ರೋ
ಲಾಲ್​ಬಾಗ್ ಫ್ಲವರ್ ​​ಶೋ ವೀಕ್ಷಿಸಲು ತೆರಳುವವರಿಗೆ ಗುಡ್​ನ್ಯೂಸ್ ನೀಡಿದ ನಮ್ಮ ಮೆಟ್ರೋ
ಕಿರಣ್​ ಸೂರ್ಯ
| Edited By: |

Updated on: Aug 12, 2024 | 4:51 PM

Share

ಬೆಂಗಳೂರು, ಆಗಸ್ಟ್​ 12: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸಸ್ಯಕಾಶಿ ಲಾಲ್​ಬಾಗ್​ನಲ್ಲಿ ಈಗಾಗಲೇ ಫ್ಲವರ್​ಶೋ ನಡೆಯುತ್ತಿದೆ. ಸಂವಿಧಾನ ಶಿಲ್ಪಿ ಡಾ. ಬಿಆರ್​ ಅಂಬೇಡ್ಕರ್ ವಿಷಯಾಧಾರಿತವಾಗಿ ಫ್ಲವರ್​ ಶೋ ಪ್ರದರ್ಶನಗೊಳ್ಳುತ್ತಿದೆ. ಇದೀಗ ಫ್ಲವರ್ ​​ಶೋ ವೀಕ್ಷಿಸಲು ತೆರಳುವವರಿಗೆ ಬೆಂಗಳೂರು ಮೆಟ್ರೋ (Metro) ರೈಲು ನಿಗಮ (BMRCL) ಸಿಹಿಸುದ್ದಿ ನೀಡಿದೆ. ಆ. 15, 17 ಮತ್ತು 18ರಂದು ಮೆಟ್ರೋದಲ್ಲಿ ರಿಟರ್ನ್ ಜರ್ನಿ ಪೇಪರ್ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ.

ಪ್ರಯಾಣಿಕರ ಅನುಕೂಲ ದೃಷ್ಟಿಯಿಂದ ಮೆಟ್ರೋದಲ್ಲಿ ರಿಟರ್ನ್ ಜರ್ನಿ ಪೇಪರ್ ಟಿಕೆಟ್ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಪೇಪರ್ ಟಿಕೆಟ್ ಲಭ್ಯವಾಗಲಿದೆ. ಲಾಲ್​​ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ನಿಲ್ದಾಣಕ್ಕೆ 30 ರೂ. ಪೇಪರ್ ಟಿಕೆಟ್ ಪಡೆದು ಪ್ರಯಾಣಿಸಬಹುದೆ. ಎಎಫ್​ಸಿ ಗೇಟ್​ ಬಳಸಿ ಯಾವುದೇ ನಿಲ್ದಾಣಕ್ಕೆ ಪ್ರಯಾಣ ಬೆಳೆಸಬಹುದಾಗಿದೆ.

ಇದನ್ನೂ ಓದಿ: ವೀಕೆಂಡ್​​ನಲ್ಲಿ ಲಾಲ್​ ಬಾಗ್​ಗೆ ಲಗ್ಗೆಯಿಟ್ಟ ಸಿಲಿಕಾನ್​ ಮಂದಿ: ನಾಲ್ಕನೇ ದಿನದ ಫ್ಲವರ್ ಶೋಗೆ ಭರ್ಜರಿ ರೆಸ್ಪಾನ್ಸ್

ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳು ಖರೀದಿಸಿದ ದಿನದಂದು ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಬಹುದಾಗಿದೆ. ಸಾರ್ವಜನಿಕರು ಟೋಕನ್, ಕಾರ್ಡ್. ಕ್ಯೂಆರ್ ಟಿಕೆಟ್‌ಗಳ ಮೂಲಕ ಲಾಲ್‌ಬಾಗ್ ನಿಲ್ದಾಣಕ್ಕೆ ಪ್ರಯಾಣಿಸಬಹುದು ಹಾಗೂ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಹಿಂತಿರುಗಲು ಟೋಕನ್ ಗಳ ಬದಲಿಗೆ ಪೇಪರ್ ಟಿಕೆಟ್, ಕಾರ್ಡ್, ಮತ್ತು ಕ್ಯೂಆರ್ ಟಿಕೆಟ್ ಮೂಲಕ ಮಾತ್ರ ಪ್ರಯಾಣಿಸಬಹುದು.

ನಮ್ಮ ಮೆಟ್ರೋ ಟ್ವೀಟ್​

ಮೇಲಿನ ದಿನಾಂಕಗಳಲ್ಲಿ ಮತ್ತು ಅವಧಿಯಲ್ಲಿ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಟೋಕನ್‌ಗಳನ್ನು ನೀಡಲಾಗುವುದಿಲ್ಲ. ಟಿಕೆಟ್‌ಗಳನ್ನು ಖರೀದಿಸಲು ಕಾಯುವ ಸಮಯವನ್ನು ತಪ್ಪಿಸಲು ಪ್ರಯಾಣಿಕರು ತಮ್ಮ ಪ್ರಯಾಣಕ್ಕೆ ಮುಂಚಿತವಾಗಿ ಕ್ಯೂಆರ್ ಟಿಕೆಟ್‌ಗಳನ್ನು ಖರೀದಿಸಲು ವಿನಂತಿಸಲಾಗಿದೆ. ಸಾರ್ವಜನಿಕರ ಸುಗಮ ಪ್ರಯಾಣಕ್ಕಾಗಿ ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಕೋರಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?