AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ 3ನೇ ಹಂತದ ಯೋಜನೆ: 3,627 ಮರಗಳ ಹನನಕ್ಕೆ BMRCLನಿಂದ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರಿನ ನಮ್ಮ ಮೆಟ್ರೋ 3ನೇ ಹಂತದ ಯೋಜನೆ ಕಾಮಗಾರಿಗಾಗಿ ಜಿಬಿಎ (GBA) ಅರಣ್ಯ ವಿಭಾಗಕ್ಕೆ ಬಿಎಂಆರ್‌ಸಿಎಲ್ ಪ್ರಸ್ತಾವನೆ ಸಲ್ಲಿಸಿದ್ದು, ನಗರದ ವಿವಿಧೆಡೆ ಬರೋಬ್ಬರಿ 3,627 ಮರಗಳನ್ನು ಕಡಿಯಲು ಸಿದ್ಧತೆ ನಡೆದಿದೆ. ಜೆಪಿ ನಗರ 4ನೇ ಹಂತದಿಂದ ಕೆಂಪಾಪುರವರೆಗೆ ಹೊರವರ್ತುಲ ರಸ್ತೆಯ (ORR) ಮೂಲಕ 32.15 ಕಿ.ಮೀ ಮತ್ತು ಹೊಸಹಳ್ಳಿಯಿಂದ ಕಡಬಗೆರೆವರೆಗೆ ಮಾಗಡಿ ರಸ್ತೆಯ ಮೂಲಕ 12.50 ಕಿ.ಮೀ ಸೇರಿ ಒಟ್ಟು 44.65 ಕಿ.ಮೀ ಮೆಟ್ರೋ ಮಾರ್ಗವನ್ನು ಈ ಯೋಜನೆ ಒಳಗೊಂಡಿದೆ.

ನಮ್ಮ ಮೆಟ್ರೋ 3ನೇ ಹಂತದ ಯೋಜನೆ: 3,627 ಮರಗಳ ಹನನಕ್ಕೆ BMRCLನಿಂದ ಪ್ರಸ್ತಾವನೆ ಸಲ್ಲಿಕೆ
ಸಾಂದರ್ಭಿಕ ಚಿತ್ರImage Credit source: PTI and Getty Images
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on: Jun 19, 2026 | 3:39 PM

Share

ಬೆಂಗಳೂರು, ಜೂನ್​​ 19: ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಗಾಗಿ ಮರಗಳ ಹನನಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಬೆಂಗಳೂರಿನಲ್ಲಿ (Bengaluru) ಬರೋಬ್ಬರಿ 3,627 ಮರಗಳ ಮಾರಣಹೋಮಕ್ಕೆ ಸಿದ್ಧತೆ ನಡೆದಿದೆ. ಈ ಸಂಬಂಧ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅರಣ್ಯ ವಿಭಾಗಕ್ಕೆ BMRCL ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದು, ಆ ಬೆನ್ನಲ್ಲೇ ಮರಗಳನ್ನು ಕಡಿಯುವ ಸಂಬಂಧ  ಸಾರ್ವಜನಿಕ ಪ್ರಕಟಣೆ ಕೂಡ ಹೊರಡಿಸಿ ಆಕ್ಷೇಪಣೆ ಸಲ್ಲಿಕೆಗೆ ಜಿಬಿಎ ಅವಕಾಶ ನೀಡಿದೆ.

ಮುಖ್ಯಾಂಶಗಳು

  • ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಮರಗಳ ಮಾರಣಹೋಮ
  • 3,627 ಮರಗಳ ಹನನಕ್ಕೆ GBA ಅರಣ್ಯ ವಿಭಾಗಕ್ಕೆ BMRCLನಿಂದ ಪ್ರಸ್ತಾಪ
  • ಈ ಸಂಬಂಧ ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಕೆಗೂ ಅವಕಾಶ

ಮೆಟ್ರೋ ನಿಲ್ದಾಣ, ಮೆಟ್ರೋ ವಯಾಡಕ್ಟ್ ಜೊತೆಗೆ ಡಬಲ್ ಡೆಕ್ಕರ್ ಫ್ಲೈ ಓವರ್ ನಿರ್ಮಾಣಕ್ಕೆ ಯೋಜನೆ ನಡೆದಿದ್ದು, 2,426 ವಿವಿಧ ಜಾತಿಯ ಮರಗಳು ಹಾಗೂ 1,201 ಅಡಕೆ ಮರಗಳಿಗೆ ಈಗ ಕಂಟಕ ಎದುರಾಗಿದೆ. ಸಾರ್ವಜನಿಕರ ಆಕ್ಷೇಪಣೆ ಗಮನಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಬಿಎ ಅರಣ್ಯ ವಿಭಾಗ ಮಾಹಿತಿ ನೀಡಿದೆ. ಹೊಸಹಳ್ಳಿ, ಕೆಹೆಚ್​​ಬಿ ಕಾಲೋನಿ, ಕಾಮಾಕ್ಷಿಪಾಳ್ಯ, ಸುಮನಹಳ್ಳಿ ಕ್ರಾಸ್, ಸುಂಕದಕಟ್ಟೆ, ಹೇರೋಹಳ್ಳಿ, ಬ್ಯಾಡರಹಳ್ಳಿ, ಕಾಮತ್ ಲೇಔಟ್ ಕಡಬಗೆರೆ ಪ್ರದೇಶಗಳು ಯೋಜನೆಯಿಂದ ಭಾದಿತವಾಗಲಿವೆ.

ಇದನ್ನೂ ಓದಿ: ನಮ್ಮ ಮೆಟ್ರೋ ರೆಡ್ ಲೈನ್ ವೆಚ್ಚ ಕಡಿತಕ್ಕೆ ಒಂದು ಸ್ಟೇಷನನ್ನೇ ಕೈಬಿಡಲು ನಿರ್ಧರಿಸಿದ ಬಿಎಂಆರ್​ಸಿಎಲ್!

ಜೆಪಿ ನಗರ 4ನೇ ಹಂತದಿಂದ ಕೆಂಪಾಪುರವರೆಗೆ ಹೊರವರ್ತುಲ ರಸ್ತೆಯ (ORR) ಮೂಲಕ 32.15 ಕಿ.ಮೀ ಮತ್ತು ಹೊಸಹಳ್ಳಿಯಿಂದ ಕಡಬಗೆರೆವರೆಗೆ ಮಾಗಡಿ ರಸ್ತೆಯ ಮೂಲಕ 12.50 ಕಿ.ಮೀ ಸೇರಿ ಒಟ್ಟು 44.65 ಕಿ.ಮೀ ಮೆಟ್ರೋ ಮಾರ್ಗವನ್ನು ಈ ಯೋಜನೆ ಒಳಗೊಂಡಿದೆ. ಡಬಲ್ ಡೆಕ್ಕರ್‌ ಯೋಜನೆ ಸೇರ್ಪಡೆಯಿಂದ ಅನುಮೋದನೆಗಾಗಿ ಬಾಕಿ ಉಳಿದಿದ್ದ ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಸರ್ಕಾರದ ಅನುಮೋದನೆ ಶೀಘ್ರವೇ ದೊರೆಯುವ ಸಾಧ್ಯತೆ ಇದೆ ಎಂಬ ಬಗ್ಗೆ ಇತ್ತೀಚೆಗಷ್ಟೇ ವರದಿಯಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ