AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಈ ಮಾರ್ಗದಲ್ಲಿ ಪ್ರಯಾಣಿಕರಿಗಿಲ್ಲ ಮೆಟ್ರೋ ಸೇವೆ!

ಬೆಂಗಳೂರು: 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ಹಿನ್ನೆಲೆ ಇಂದು ಹಸಿರು ಮಾರ್ಗ ಮೆಟ್ರೋ ಸ್ಥಗಿತಗೊಳ್ಳಲಿದೆ. ಆರ್.ವಿ.ರಸ್ತೆ-ಯಲಚೇನಹಳ್ಳಿ ಮಾರ್ಗದಲ್ಲಿ ಸಾಗುವ ಮೆಟ್ರೋ ಇಂದು ಅಂದರೆ ಒಂದು ದಿನದ ಮಟ್ಟಿಗೆ ತನ್ನ ಸಂಚಾರವನ್ನು ನಿಲ್ಲಿಸಲಿದೆ. ರೀಚ್-4ಮಾರ್ಗಕ್ಕೆ ವಿದ್ಯುತ್ ಸ್ವೀಕರಿಸುವ ಉಪಕೇಂದ್ರದಿಂದ ಯಲಚೇನಹಳ್ಳಿ ನಿಲ್ದಾಣ ಮತ್ತು ಅದಕ್ಕಿಂತ ಮುಂದುವೆರೆದು ಅಂಜನಾಪುರದ ನಿಲ್ದಾಣದ ವರೆಗೆ 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ನಡೆಯಲಿದೆ. ಹೀಗಾಗಿ ಮೆಟ್ರೋ ಸಂಚಾರ ಇರುವುದಿಲ್ಲ. ಇನ್ನು ಇದೇ ಹಸಿರು ಮಾರ್ಗದ ಮೆಟ್ರೋ ನಾಗಸಂದ್ರ-ಆರ್.ವಿ.ರಸ್ತೆ ನಡುವೆ […]

ಇಂದು ಈ ಮಾರ್ಗದಲ್ಲಿ ಪ್ರಯಾಣಿಕರಿಗಿಲ್ಲ ಮೆಟ್ರೋ ಸೇವೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 16, 2020 | 11:25 AM

Share

ಬೆಂಗಳೂರು: 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ಹಿನ್ನೆಲೆ ಇಂದು ಹಸಿರು ಮಾರ್ಗ ಮೆಟ್ರೋ ಸ್ಥಗಿತಗೊಳ್ಳಲಿದೆ. ಆರ್.ವಿ.ರಸ್ತೆ-ಯಲಚೇನಹಳ್ಳಿ ಮಾರ್ಗದಲ್ಲಿ ಸಾಗುವ ಮೆಟ್ರೋ ಇಂದು ಅಂದರೆ ಒಂದು ದಿನದ ಮಟ್ಟಿಗೆ ತನ್ನ ಸಂಚಾರವನ್ನು ನಿಲ್ಲಿಸಲಿದೆ.

ರೀಚ್-4ಮಾರ್ಗಕ್ಕೆ ವಿದ್ಯುತ್ ಸ್ವೀಕರಿಸುವ ಉಪಕೇಂದ್ರದಿಂದ ಯಲಚೇನಹಳ್ಳಿ ನಿಲ್ದಾಣ ಮತ್ತು ಅದಕ್ಕಿಂತ ಮುಂದುವೆರೆದು ಅಂಜನಾಪುರದ ನಿಲ್ದಾಣದ ವರೆಗೆ 33 ಕೆವಿ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿ ನಡೆಯಲಿದೆ. ಹೀಗಾಗಿ ಮೆಟ್ರೋ ಸಂಚಾರ ಇರುವುದಿಲ್ಲ.

ಇನ್ನು ಇದೇ ಹಸಿರು ಮಾರ್ಗದ ಮೆಟ್ರೋ ನಾಗಸಂದ್ರ-ಆರ್.ವಿ.ರಸ್ತೆ ನಡುವೆ ಎಂದಿನಂತೆ ಮೆಟ್ರೋ ಸೇವೆ ಲಭ್ಯವಿರಲಿದೆ. ಹಾಗೂ ಬೈಯಪ್ಪನಹಳ್ಳಿ-ಮೈಸೂರುವರೆಗಿನ ನೇರಳೆ ಮಾರ್ಗದ ರೈಲು ಸಂಚಾರದಲ್ಲೂ ಬದಲಾವಣೆ ಇಲ್ಲ. ನಾಗಸಂದ್ರ ಮತ್ತು ಯಲಚೇನಹಳ್ಳಿ ನಿಲ್ದಾಣಗಳ ನಡುವೆ ಫೆಬ್ರವರಿ 17ರಂದು ಬೆಳಗ್ಗೆ 5ರಿಂದ ಎಂದಿನಂತೆ ಸೇವೆ ಪುನರಾಂಭವಾಗಲಿದೆ ಎಂದು ಬಿಎಂಆರ್​ಸಿಎಲ್ ಪ್ರಕಟಣೆ ಹೊರಡಿಸಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು