AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಅನುಕೂಲಕ್ಕೆ ಮೆಟ್ರೋ ಸಂಚಾರದಲ್ಲಿ ಸಮಯ ಬದಲಾವಣೆ

ಯಾಣಿಕರ ಅನುಕೂಲಕ್ಕೆ ಮೆಟ್ರೋ ಸಂಚಾರದಲ್ಲಿ ಸಮಯ ಬದಲಾವಣೆ ಮಾಡಲಾಗಿದ್ದು, ಇನ್ಮುಂದೆ ಪ್ರತಿದಿನ ಮುಂಜಾನೆ ಹಾಗೂ ರಾತ್ರಿ 15 ನಿಮಿಷಕ್ಕೊಮ್ಮೆ ಮೆಟ್ರೊ ಸಂಚಾರ ಮಾಡಲಿದೆ

ಪ್ರಯಾಣಿಕರ ಅನುಕೂಲಕ್ಕೆ ಮೆಟ್ರೋ ಸಂಚಾರದಲ್ಲಿ ಸಮಯ ಬದಲಾವಣೆ
ಬೆಂಗಳೂರು ಮೆಟ್ರೋ ರೈಲು
TV9 Web
| Edited By: |

Updated on:Aug 06, 2022 | 9:13 PM

Share

ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕೆ ಮೆಟ್ರೋ ಸಂಚಾರದಲ್ಲಿ ಸಮಯ ಬದಲಾವಣೆ ಮಾಡಲಾಗಿದ್ದು, ಇನ್ಮುಂದೆ ಪ್ರತಿದಿನ ಮುಂಜಾನೆ ಹಾಗೂ ರಾತ್ರಿ 15 ನಿಮಿಷಕ್ಕೊಮ್ಮೆ ಮೆಟ್ರೊ ಸಂಚಾರ ಮಾಡಲಿದೆ ಎಂದು ಬಿಎಮ್​ಆರ್​ಸಿಎಲ್ (BMRCL) ಮಾಧ್ಯಮ ಪ್ರಕಟಣೆ ಹೊರಡಿಸಿದೆ.  ಬೆಳಿಗ್ಗೆ 5 ಗಂಟೆಯಿಂದ 6 ರವರೆಗೆ ಹಾಗೂ ರಾತ್ರಿ‌ 10 ರಿಂದ 11 ಗಂಟೆವರೆಗೆ 15 ನಿಮಿಷಕ್ಕೊಮ್ಮೆ ಮೆಟ್ರೊ ಸಂಚರಿಸಲಿದೆ.

ಇದುವರೆಗೂ ಪ್ರತಿ 20 ನಿಮಿಷಕ್ಕೊಂದು ಮೆಟ್ರೋ ಸಂಚರಿಸುತ್ತಿತ್ತು. ಇದರಿಂದ ಬೆಳಿಗ್ಗೆ, ರಾತ್ರಿ ಓಡಾಡೋ ಪ್ರಯಾಣಿಕರಿಕರಿಗೆ ತೊಂದರೆಯಾಗಿತ್ತು. ಹೀಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ 15 ನಿಮಿಷಗಳ ಮಧ್ಯಂತರದಲ್ಲಿ ಮೆಟ್ರೋ ರೈಲು ಸಂಚಾರ ಮಾಡಲಿದೆ ಎಂದು ಬಿಎಮ್​ಆರ್​ಸಿಎಲ್ ತಿಳಿಸಿದೆ.

 ಬೆಂಗಳೂರು ಟ್ರಾಫಿಕ್ ಜಂಜಾಟಕ್ಕೆ ಬೀಳಲಿದೆ ಬ್ರೇಕ್

ಬೆಂಗಳೂರು: ನಗರದಲ್ಲಿ ವಾಹನ ಸಂಚಾರಗಳ ಓಡಾಡ ಹೆಚ್ಚಾಗತ್ತಿದ್ದು, ದಿನನಿತ್ಯ ಜನರು ಟ್ರಾಫಿಕ್ ಕಿರಿಕಿರಿಯನ್ನು ಅನುಭವಿಸುತ್ತಿದ್ದಾರೆ. ಈ ಟ್ರಾಫಿಕ್ ಜಂಜಾಟವನ್ನು ನಿಯಂತ್ರಿಸಲು ಬೆಂಗಳೂರು ನಗರ ಪೊಲೀಸ್ ಇಲಾಖೆ ಗೂಗಲ್ ಮೊರೆಹೋಗಿದ್ದು, ಇಲ್ಲಿ ನಡೆಸಿದ ಅಧ್ಯಯನವನ್ನು ಪ್ರಯೋಗಿಸಲು ಮುಂದಾಗಿದೆ. ಈಗಾಗಲೇ ಗೂಗಲ್ ಅಧ್ಯಯನದಂತೆ ಟ್ರಾಫಿಕ್ ಸಿಗ್ನಲ್ ಟೈಮಿಂಗ್ ಅನ್ನು ಕತ್ತರಿಗುಪ್ಪೆ ಸಿಗ್ನಲ್ ಬಳಿ ಪ್ರಾಯೋಗಿಕವಾಗಿ ಅಳವಡಿಸಿತು. ಈ ಪ್ರಯೋಗದಲ್ಲಿ ಯಶಸ್ವಿ ಕಂಡ ಹಿನ್ನೆಲೆ ಇತರೆ ಕಡೆಗಳಲ್ಲೂ ಟೈಮಿಂಗ್ ಸೆಟ್ ಮಾಡಲು ಪೊಲೀಸ್ ಇಲಾಖೆ ಮುಂದಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ಜಾಮ್ ಆಗುತ್ತಿರುವ ಹಿನ್ನೆಲೆ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಪರಿಹಾರ ಕಂಡುಕೊಳ್ಳಲು ನಿರ್ಧರಿಸಿದ ನಗರ ಟ್ರಾಫಿಕ್ ಪೊಲೀಸರು, ಗೂಗಲ್ ಅಧ್ಯಯ ನಡೆಸಿದ್ದಾರೆ. ಈ ಅಧ್ಯಯನದ ಮೂಲಕ ಕಂಡುಕೊಂಡ ಟ್ರಾಫಿಕ್ ಸಿಗ್ನಲ್ ಟೈಮಿಂಗ್ ಅನ್ನು ಮೊದಲ ಬಾರಿಗೆ ಕತ್ತರಿಗುಪ್ಪೆಯಲ್ಲಿ ಪ್ರಯೋಗಿಸಲಾಗಿದೆ.

ಕತ್ರಿಗುಪ್ಪೆಯ ಜಂಕ್ಷನ್ ಸಂಪರ್ಕಿಸುವ ನಾಲ್ಕು ರಸ್ತೆಗಳ ಸಿಗ್ನಲ್ ಬಗ್ಗೆ ಉಪಗ್ರಹದ ನೆರವಿನಿಂದ ವೈಜ್ಞಾನಿಕವಾಗಿ ಗೂಗಲ್​ ಅಧ್ಯಯನ ನಡೆಸಿದೆ. ನಾಲ್ಕು ರಸ್ತೆಯಲ್ಲಿ ಯಾವ ಸಮಯದಲ್ಲಿ ಎಷ್ಟು ವಾಹನ ದಟ್ಟಣೆ ಇರುತ್ತದೆ, ಯಾವ ರಸ್ತೆಯಲ್ಲಿ ವಾಹನ ದಟ್ಟಣೆ ಕಡಿಮೆ ಇರುತ್ತದೆ, ಬೆಳಗಿನ ಅವದಿಯಲ್ಲಿ ಎಷ್ಟು, ಮಧ್ಯಾಹ್ನ ಎಷ್ಟು, ಸಂಜೆ ಎಷ್ಟು ಹಾಗೂ ರಾತ್ರಿ ವೇಳೆ ಎಷ್ಟು ದಟ್ಟಣೆ ಇರುತ್ತದೆ, ಯಾವ ರಸ್ತೆಗೆ ಯಾವ ಸಮಯದಲ್ಲಿ ಎಷ್ಟು ಸೆಕೆಂಡ್ ಕಾಲಾವಧಿ ನೀಡಬೇಕು ಎಂಬಿತ್ಯಾದಿಗಳ ಬಗ್ಗೆ ವಿವರವಾಗಿ ಅಧ್ಯಯನ ನಡೆಸಲಾಗಿದೆ.

ಈ ಅಧ್ಯಯನದ ಮೂಲಕ ಕತ್ತರಿಗುಪ್ಪೆ ಸಿಗ್ನಲ್​ನಲ್ಲಿ ಟೈಮರ್ ಸೆಕೆಂಡ್ ಅನ್ನು ಪ್ರಾಯೋಗಿಕವಾಗಿ ಅಳವಡಿಸಲಾಗಿದೆ. ಟ್ರಾಫಿಕ್ ಪೊಲೀಸರ ಪ್ರಾಯೋಗಿಕ ಯೋಜನೆಯು ಯಶಸ್ವಿಯಾಗಿದ್ದು, ಸಮಸ್ಯೆಗೆ ಪರಿಹಾರ ಕಂಡುಕೊಂಡ ಟ್ರಾಫಿಕ್ ಪೊಲೀಸರ ಮುಖದಲ್ಲಿ ಮಂದಹಾಸ ಮೂಡಿದೆ.

ಕತ್ತರಿಗುಪ್ಪೆ ಸಿಗ್ನಲ್​ಗೆ ಅಳವಡಿಸಿದ ಹೊಸ ಟೈಮಿಂಗ್​ನಿಂದಾಗಿ ಸಿಗ್ನಲ್​ನಲ್ಲಿ ವಾಹನ ದಟ್ಟಣೆ ಇಳಿಕೆಯಾಗಿದೆ. ಯಶಸ್ವಿ ಪ್ರಯೋಗದ ನಂತರ ನಗರದ ಇತರೆ ಕಡೆಗಳಲ್ಲಿ ವ್ಯವಸ್ಥೆಯನ್ನು ಜಾರಿಗೊಳಿಸಲು ಪೊಲೀಸರು ಒಲವು ತೋರಿಸುತ್ತಿದ್ದಾರೆ. ಈ ಬಗ್ಗೆ ಇನ್ನಷ್ಟು ಅಧ್ಯಯನ ನಡೆಸಿ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:12 pm, Sat, 6 August 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್