AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಅನುಕೂಲಕ್ಕೆ ಮೆಟ್ರೋ ಸಂಚಾರದಲ್ಲಿ ಸಮಯ ಬದಲಾವಣೆ

ಯಾಣಿಕರ ಅನುಕೂಲಕ್ಕೆ ಮೆಟ್ರೋ ಸಂಚಾರದಲ್ಲಿ ಸಮಯ ಬದಲಾವಣೆ ಮಾಡಲಾಗಿದ್ದು, ಇನ್ಮುಂದೆ ಪ್ರತಿದಿನ ಮುಂಜಾನೆ ಹಾಗೂ ರಾತ್ರಿ 15 ನಿಮಿಷಕ್ಕೊಮ್ಮೆ ಮೆಟ್ರೊ ಸಂಚಾರ ಮಾಡಲಿದೆ

ಪ್ರಯಾಣಿಕರ ಅನುಕೂಲಕ್ಕೆ ಮೆಟ್ರೋ ಸಂಚಾರದಲ್ಲಿ ಸಮಯ ಬದಲಾವಣೆ
ಬೆಂಗಳೂರು ಮೆಟ್ರೋ ರೈಲು
TV9 Web
| Edited By: |

Updated on:Aug 06, 2022 | 9:13 PM

Share

ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕೆ ಮೆಟ್ರೋ ಸಂಚಾರದಲ್ಲಿ ಸಮಯ ಬದಲಾವಣೆ ಮಾಡಲಾಗಿದ್ದು, ಇನ್ಮುಂದೆ ಪ್ರತಿದಿನ ಮುಂಜಾನೆ ಹಾಗೂ ರಾತ್ರಿ 15 ನಿಮಿಷಕ್ಕೊಮ್ಮೆ ಮೆಟ್ರೊ ಸಂಚಾರ ಮಾಡಲಿದೆ ಎಂದು ಬಿಎಮ್​ಆರ್​ಸಿಎಲ್ (BMRCL) ಮಾಧ್ಯಮ ಪ್ರಕಟಣೆ ಹೊರಡಿಸಿದೆ.  ಬೆಳಿಗ್ಗೆ 5 ಗಂಟೆಯಿಂದ 6 ರವರೆಗೆ ಹಾಗೂ ರಾತ್ರಿ‌ 10 ರಿಂದ 11 ಗಂಟೆವರೆಗೆ 15 ನಿಮಿಷಕ್ಕೊಮ್ಮೆ ಮೆಟ್ರೊ ಸಂಚರಿಸಲಿದೆ.

ಇದುವರೆಗೂ ಪ್ರತಿ 20 ನಿಮಿಷಕ್ಕೊಂದು ಮೆಟ್ರೋ ಸಂಚರಿಸುತ್ತಿತ್ತು. ಇದರಿಂದ ಬೆಳಿಗ್ಗೆ, ರಾತ್ರಿ ಓಡಾಡೋ ಪ್ರಯಾಣಿಕರಿಕರಿಗೆ ತೊಂದರೆಯಾಗಿತ್ತು. ಹೀಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ 15 ನಿಮಿಷಗಳ ಮಧ್ಯಂತರದಲ್ಲಿ ಮೆಟ್ರೋ ರೈಲು ಸಂಚಾರ ಮಾಡಲಿದೆ ಎಂದು ಬಿಎಮ್​ಆರ್​ಸಿಎಲ್ ತಿಳಿಸಿದೆ.

 ಬೆಂಗಳೂರು ಟ್ರಾಫಿಕ್ ಜಂಜಾಟಕ್ಕೆ ಬೀಳಲಿದೆ ಬ್ರೇಕ್

ಬೆಂಗಳೂರು: ನಗರದಲ್ಲಿ ವಾಹನ ಸಂಚಾರಗಳ ಓಡಾಡ ಹೆಚ್ಚಾಗತ್ತಿದ್ದು, ದಿನನಿತ್ಯ ಜನರು ಟ್ರಾಫಿಕ್ ಕಿರಿಕಿರಿಯನ್ನು ಅನುಭವಿಸುತ್ತಿದ್ದಾರೆ. ಈ ಟ್ರಾಫಿಕ್ ಜಂಜಾಟವನ್ನು ನಿಯಂತ್ರಿಸಲು ಬೆಂಗಳೂರು ನಗರ ಪೊಲೀಸ್ ಇಲಾಖೆ ಗೂಗಲ್ ಮೊರೆಹೋಗಿದ್ದು, ಇಲ್ಲಿ ನಡೆಸಿದ ಅಧ್ಯಯನವನ್ನು ಪ್ರಯೋಗಿಸಲು ಮುಂದಾಗಿದೆ. ಈಗಾಗಲೇ ಗೂಗಲ್ ಅಧ್ಯಯನದಂತೆ ಟ್ರಾಫಿಕ್ ಸಿಗ್ನಲ್ ಟೈಮಿಂಗ್ ಅನ್ನು ಕತ್ತರಿಗುಪ್ಪೆ ಸಿಗ್ನಲ್ ಬಳಿ ಪ್ರಾಯೋಗಿಕವಾಗಿ ಅಳವಡಿಸಿತು. ಈ ಪ್ರಯೋಗದಲ್ಲಿ ಯಶಸ್ವಿ ಕಂಡ ಹಿನ್ನೆಲೆ ಇತರೆ ಕಡೆಗಳಲ್ಲೂ ಟೈಮಿಂಗ್ ಸೆಟ್ ಮಾಡಲು ಪೊಲೀಸ್ ಇಲಾಖೆ ಮುಂದಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ಜಾಮ್ ಆಗುತ್ತಿರುವ ಹಿನ್ನೆಲೆ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಪರಿಹಾರ ಕಂಡುಕೊಳ್ಳಲು ನಿರ್ಧರಿಸಿದ ನಗರ ಟ್ರಾಫಿಕ್ ಪೊಲೀಸರು, ಗೂಗಲ್ ಅಧ್ಯಯ ನಡೆಸಿದ್ದಾರೆ. ಈ ಅಧ್ಯಯನದ ಮೂಲಕ ಕಂಡುಕೊಂಡ ಟ್ರಾಫಿಕ್ ಸಿಗ್ನಲ್ ಟೈಮಿಂಗ್ ಅನ್ನು ಮೊದಲ ಬಾರಿಗೆ ಕತ್ತರಿಗುಪ್ಪೆಯಲ್ಲಿ ಪ್ರಯೋಗಿಸಲಾಗಿದೆ.

ಕತ್ರಿಗುಪ್ಪೆಯ ಜಂಕ್ಷನ್ ಸಂಪರ್ಕಿಸುವ ನಾಲ್ಕು ರಸ್ತೆಗಳ ಸಿಗ್ನಲ್ ಬಗ್ಗೆ ಉಪಗ್ರಹದ ನೆರವಿನಿಂದ ವೈಜ್ಞಾನಿಕವಾಗಿ ಗೂಗಲ್​ ಅಧ್ಯಯನ ನಡೆಸಿದೆ. ನಾಲ್ಕು ರಸ್ತೆಯಲ್ಲಿ ಯಾವ ಸಮಯದಲ್ಲಿ ಎಷ್ಟು ವಾಹನ ದಟ್ಟಣೆ ಇರುತ್ತದೆ, ಯಾವ ರಸ್ತೆಯಲ್ಲಿ ವಾಹನ ದಟ್ಟಣೆ ಕಡಿಮೆ ಇರುತ್ತದೆ, ಬೆಳಗಿನ ಅವದಿಯಲ್ಲಿ ಎಷ್ಟು, ಮಧ್ಯಾಹ್ನ ಎಷ್ಟು, ಸಂಜೆ ಎಷ್ಟು ಹಾಗೂ ರಾತ್ರಿ ವೇಳೆ ಎಷ್ಟು ದಟ್ಟಣೆ ಇರುತ್ತದೆ, ಯಾವ ರಸ್ತೆಗೆ ಯಾವ ಸಮಯದಲ್ಲಿ ಎಷ್ಟು ಸೆಕೆಂಡ್ ಕಾಲಾವಧಿ ನೀಡಬೇಕು ಎಂಬಿತ್ಯಾದಿಗಳ ಬಗ್ಗೆ ವಿವರವಾಗಿ ಅಧ್ಯಯನ ನಡೆಸಲಾಗಿದೆ.

ಈ ಅಧ್ಯಯನದ ಮೂಲಕ ಕತ್ತರಿಗುಪ್ಪೆ ಸಿಗ್ನಲ್​ನಲ್ಲಿ ಟೈಮರ್ ಸೆಕೆಂಡ್ ಅನ್ನು ಪ್ರಾಯೋಗಿಕವಾಗಿ ಅಳವಡಿಸಲಾಗಿದೆ. ಟ್ರಾಫಿಕ್ ಪೊಲೀಸರ ಪ್ರಾಯೋಗಿಕ ಯೋಜನೆಯು ಯಶಸ್ವಿಯಾಗಿದ್ದು, ಸಮಸ್ಯೆಗೆ ಪರಿಹಾರ ಕಂಡುಕೊಂಡ ಟ್ರಾಫಿಕ್ ಪೊಲೀಸರ ಮುಖದಲ್ಲಿ ಮಂದಹಾಸ ಮೂಡಿದೆ.

ಕತ್ತರಿಗುಪ್ಪೆ ಸಿಗ್ನಲ್​ಗೆ ಅಳವಡಿಸಿದ ಹೊಸ ಟೈಮಿಂಗ್​ನಿಂದಾಗಿ ಸಿಗ್ನಲ್​ನಲ್ಲಿ ವಾಹನ ದಟ್ಟಣೆ ಇಳಿಕೆಯಾಗಿದೆ. ಯಶಸ್ವಿ ಪ್ರಯೋಗದ ನಂತರ ನಗರದ ಇತರೆ ಕಡೆಗಳಲ್ಲಿ ವ್ಯವಸ್ಥೆಯನ್ನು ಜಾರಿಗೊಳಿಸಲು ಪೊಲೀಸರು ಒಲವು ತೋರಿಸುತ್ತಿದ್ದಾರೆ. ಈ ಬಗ್ಗೆ ಇನ್ನಷ್ಟು ಅಧ್ಯಯನ ನಡೆಸಿ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:12 pm, Sat, 6 August 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ