AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಇಂದಿನಿಂದ ಟೋಕನ್​ ಪಡೆದು ಮೆಟ್ರೋದಲ್ಲಿ ಪ್ರಯಾಣಿಸಲು ಅವಕಾಶ; ವಾರದ ದಿನಗಳಲ್ಲಿ ಬೆಳಗ್ಗೆ 7 ರಿಂದ ಸಂಜೆ 6ರ ತನಕ ಸಂಚಾರ

Namma Metro Timings: ಇಂದಿನಿಂದ ನಮ್ಮ ಮೆಟ್ರೋ ಪ್ರಯಾಣಿಕರು ಟೋಕನ್ ಬಳಸಿ ಪ್ರಯಾಣ ‌ಮಾಡಬಹುದು ಎನ್ನುವುದು ಗಮನಾರ್ಹ. ನಮ್ಮ ಮೆಟ್ರೋದ ಎಲ್ಲ ಸ್ಟೇಷನ್​ಗಳಲ್ಲಿ ಟೋಕನ್ ನೀಡಲಾಗುತ್ತದೆ ಎಂದು ಬಿಎಂಆರ್​ಸಿಎಲ್​ (BMRCL) ಪ್ರಕಟಣೆಯಲ್ಲಿ ತಿಳಿಸಿದೆ.

Namma Metro: ಇಂದಿನಿಂದ ಟೋಕನ್​ ಪಡೆದು ಮೆಟ್ರೋದಲ್ಲಿ ಪ್ರಯಾಣಿಸಲು ಅವಕಾಶ; ವಾರದ ದಿನಗಳಲ್ಲಿ ಬೆಳಗ್ಗೆ 7 ರಿಂದ ಸಂಜೆ 6ರ ತನಕ ಸಂಚಾರ
ಬೆಂಗಳೂರು ಮೆಟ್ರೋ (ಸಂಗ್ರಹ ಚಿತ್ರ)
Follow us
TV9 Web
| Updated By: Skanda

Updated on: Jul 01, 2021 | 8:34 AM

ಬೆಂಗಳೂರು: ಕೊರೊನಾ ಎರಡನೇ ಅಲೆ ಕಾರಣದಿಂದ ವ್ಯತ್ಯಯಗೊಂಡು ಮತ್ತೆ ನಿಗದಿತ ವೇಳೆಯಲ್ಲಿ ಆರಂಭಗೊಂಡಿದ್ದ ನಮ್ಮ ಮೆಟ್ರೋ ಸಂಚಾರದ ಅವಧಿಯನ್ನು ವಿಸ್ತರಿಸಲಾಗುತ್ತಿದೆ. ಇಂದಿನಿಂದ (ಜುಲೈ 1) ಸೋಮವಾರದಿಂದ ಶುಕ್ರವಾರದವರೆಗೆ ಮೆಟ್ರೋ ರೈಲು ಸಂಚಾರ ಮಾಡಲಿದ್ದು, ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಪ್ರಯಾಣಿಕರು ಇದರ ಅನುಕೂಲ ಪಡೆಯಬಹುದಾಗಿದೆ. ಈ ಹಿಂದೆ ಅನ್​ಲಾಕ್​ ಆಗುತ್ತಿದ್ದಂತೆ ಬೆಳಗ್ಗೆ 7 ರಿಂದ 11 ಮತ್ತು ಮಧ್ಯಾಹ್ನ 3 ರಿಂದ 6 ಗಂಟೆಯವರೆಗೆ ಮಾತ್ರ ನಮ್ಮ ಮೆಟ್ರೋ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಈ ಅವಧಿಯನ್ನು ಸೋಮವಾರದಿಂದ ಶುಕ್ರವಾರದ ತನಕ ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ವಿಸ್ತರಿಸುತ್ತಿರುವುದಾಗಿ ಬಿಎಂಆರ್​ಸಿಎಲ್​ (BMRCL) ತಿಳಿಸಿದೆ.

ಪ್ರಸ್ತುತ ವಾರಾಂತ್ಯದ ಕೊರೊನಾ ಕರ್ಫ್ಯೂ ಇನ್ನೂ ಜಾರಿಯಲ್ಲಿರುವುದರಿಂದ ಶನಿವಾರ ಮತ್ತು ಭಾನುವಾರ ನಮ್ಮ ಮೆಟ್ರೋ ಸಂಚಾರ ಇರುವುದಿಲ್ಲ. ಈ ಎರಡು ದಿನಗಳನ್ನು ಹೊರತುಪಡಿಸಿ ಮಿಕ್ಕ ದಿನಗಳಲ್ಲಿ ಮಾತ್ರ ಪ್ರಯಾಣಿಕರು ಮೆಟ್ರೋದಲ್ಲಿ ಸಂಚರಿಸಬಹುದಾಗಿದೆ. ಇದೇ ವೇಳೆ ಇಂದಿನಿಂದ ನಮ್ಮ ಮೆಟ್ರೋ ಪ್ರಯಾಣಿಕರು ಟೋಕನ್ ಬಳಸಿ ಪ್ರಯಾಣ ‌ಮಾಡಬಹುದು ಎನ್ನುವುದು ಗಮನಾರ್ಹ. ನಮ್ಮ ಮೆಟ್ರೋದ ಎಲ್ಲ ಸ್ಟೇಷನ್​ಗಳಲ್ಲಿ ಟೋಕನ್ ನೀಡಲಾಗುತ್ತದೆ ಎಂದು ಬಿಎಂಆರ್​ಸಿಎಲ್​ (BMRCL) ಪ್ರಕಟಣೆಯಲ್ಲಿ ತಿಳಿಸಿದೆ.

ಈ ಹಿಂದೆ ಸುರಕ್ಷತೆ ದೃಷ್ಟಿಯಿಂದ ಮೆಟ್ರೋ ಕಾರ್ಡ್​ ಇದ್ದವರಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ, ಕಾರ್ಡ್​ ಹೊಂದಿದವರು ಆನ್​ಲೈನ್​ ಮೂಲಕವೇ ರಿಚಾರ್ಜ್​ ಮಾಡಿಸಿಕೊಂಡು ಮೆಟ್ರೋದಲ್ಲಿ ಪಯಣಿಸಬಹುದು ಎನ್ನಲಾಗಿತ್ತು. ಟೋಕನ್​ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದ್ದ ಕಾರಣ ಕಾರ್ಡ್​ ಬಳಸದ ಅನೇಕ ಪ್ರಯಾಣಿಕರಿಗೆ ಅನಾನುಕೂಲವಾಗಿತ್ತು. ಆದರೆ, ಇದೀಗ ಟೋಕನ್​ ಖರೀದಿಸಿ ಪ್ರಯಾಣ ಮಾಡಬಹುದು ಎಂದು ಹೇಳಿರುವ ಕಾರಣ ಮೆಟ್ರೋ ರೈಲು ನಿಲ್ದಾಣದತ್ತ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದು ಕಂಡುಬಂದಿದೆ.

ಇದನ್ನೂ ಓದಿ: Namma Metro ಮೆಟ್ರೋ ಪ್ರಯಾಣಿಕರ ಗಮನಕ್ಕೆ.. ಮೆಟ್ರೋ ರೈಲಿನಲ್ಲಿ ಶೀಘ್ರವೇ ಟೋಕನ್ ವ್ಯವಸ್ಥೆ ಶುರು 

Namma Metro: ಕೋವಿಡ್​ ವೀಕೆಂಡ್‌ ಕರ್ಫ್ಯೂ; ಶುಕ್ರವಾರ ಸಂಜೆ 6 ಗಂಟೆಯಿಂದಲೇ ನಮ್ಮ ಮೆಟ್ರೋ ರೈಲು ಸ್ಥಗಿತ

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?