AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರುಕಟ್ಟೆಗೆ ಬರಲಿದೆ ನಂದಿನಿ ಚಾಕೊಲೇಟ್; ವಂದೇ ಭಾರತ್​ ರೈಲಿನಲ್ಲಿಯೂ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ

ನಂದಿನಿ ಉತ್ಪನ್ನಗಳಾದ ಲಸ್ಸಿ, ಸುವಾಸನೆಯ ಹಾಲು, ಸಿಹಿತಿಂಡಿಗಳು ಮತ್ತು ಮೊಸರನ್ನು ವಂದೇ ಭಾರತ್ ರೈಲುಗಳಲ್ಲಿ ಮಾರಾಟ ಮಾಡಲು ಕೆಎಂಎಫ್ ಚಿಂತನೆ ನಡೆಸಿರುವುದಾಗಿ ವರದಿಯಾಗಿದೆ.

ಮಾರುಕಟ್ಟೆಗೆ ಬರಲಿದೆ ನಂದಿನಿ ಚಾಕೊಲೇಟ್; ವಂದೇ ಭಾರತ್​ ರೈಲಿನಲ್ಲಿಯೂ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ
ಕೆಎಂಎಪ್ ಉತ್ಪನ್ನಗಳುImage Credit source: KMF
TV9 Web
| Edited By: |

Updated on: Aug 02, 2023 | 6:06 PM

Share

ಬೆಂಗಳೂರು: ನಂದಿನಿ ಬ್ರಾಂಡ್‌ನಲ್ಲಿ (Nandini Brand) ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಕರ್ನಾಟಕ ಹಾಲು ಒಕ್ಕೂಟ (KMF) ಶೀಘ್ರದಲ್ಲೇ ಚಾಕೊಲೇಟ್ (Chocolate) ಮಾರಾಟವನ್ನು ಪ್ರಾರಂಭಿಸಲಿದೆ ಎಂದು ವರದಿಗಳು ತಿಳಿಸಿವೆ. ನಂದಿನಿ ಬ್ರಾಂಡ್ ಈಗಾಗಲೇ ಕರ್ನಾಟಕ ಮತ್ತು ದೇಶದ ಹಲವು ಭಾಗಗಳಲ್ಲಿ ಪ್ರಸಿದ್ಧವಾಗಿದ್ದು, ನಂದಿನಿ ಬ್ರಾಂಡ್‌ನಡಿಯಲ್ಲಿ ಹಾಲಿನಿಂದ ತಯಾರಿಸಿ ಅನೇಕ ಸಿಹಿತಿಂಡಿಗಳನ್ನು ದೇಶಾದ್ಯಂತ ಮಾರಾಟ ಮಾಡಲಾಗುತ್ತಿದೆ. ಕೆಎಂಎಫ್ ನಂದಿನಿ ಬ್ರಾಂಡ್ ಹೆಸರಿನಲ್ಲಿ ಬಾದಾಮ್ ಬರ್ಫಿ, ಗೋಡಂಬಿ ಬರ್ಫಿ, ಚಾಕೊಲೇಟ್ ಬರ್ಫಿ, ಮೈಸೂರು ಪಾಕ್, ಬೇಸನ್ ಲಾಡು, ಡ್ರೈ ಫ್ರೂಟ್ ಬರ್ಫಿ, ಧಾರವಾಡ ಪೇಡಾ, ಮಿಲ್ಕ್ ಪೇಡಾ, ಜಾಮೂನ್, ರಸಗೊಲ್ಲ ಸೇರಿದಂತೆ ಹಲವು ಸಿಹಿತಿಂಡಿಗಳನ್ನು ಮಾರಾಟ ಮಾಡಲಾಗುತ್ತಿದೆ.

ಚಾಕೊಲೇಟ್‌ಗಳ ಜೊತೆಗೆ ಮಕ್ಕಳಿಗೆ ಪೌಷ್ಟಿಕ ಆಹಾರವನ್ನೂ ಮಾರಾಟ ಮಾಡಲು ಕೆಎಂಎಫ್ ಮುಂದಾಗಿದೆ ಎಂದು ವರದಿಗಳು ತಿಳಿಸಿವೆ. ಪನೀರ್ ನಿಪ್ಪಟ್ಟು, ಕಡಲೆಕಾಯಿ ಚಿಕ್ಕಿ, ಕಡಲೆಕಾಯಿ ಸಿಹಿತಿಂಡಿಗಳು, ವಿಶೇಷ ಮಿಲ್ಕ್ ಬರ್ಫಿ ಮತ್ತು ಮೂರರಿಂದ ನಾಲ್ಕು ವಿಧದ ಚಾಕೊಲೇಟ್‌ಗಳನ್ನು ಮಾರಾಟ ಮಾಡಲು ಕೆಎಂಎಫ್ ಚಿಂತನೆ ನಡೆಸಿದೆ.

ವಂದೇ ಭಾರತ್ ರೈಲುಗಳಲ್ಲಿಯೂ ಸಿಗಲಿವೆ ಕೆಎಂಎಫ್ ಉತ್ಪನ್ನಗಳು

ನಂದಿನಿ ಉತ್ಪನ್ನಗಳಾದ ಲಸ್ಸಿ, ಸುವಾಸನೆಯ ಹಾಲು, ಸಿಹಿತಿಂಡಿಗಳು ಮತ್ತು ಮೊಸರನ್ನು ವಂದೇ ಭಾರತ್ ರೈಲುಗಳಲ್ಲಿ ಮಾರಾಟ ಮಾಡಲು ಕೆಎಂಎಫ್ ಚಿಂತನೆ ನಡೆಸಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: Vande Bharat Express; ಬೆಂಗಳೂರು ಹೈದರಾಬಾದ್ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಶೀಘ್ರ ಚಾಲನೆ

ಕೆಎಂಎಫ್ ಕರ್ನಾಟಕದಲ್ಲಿ ದಿನಕ್ಕೆ ಸುಮಾರು 75 ರಿಂದ 85 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸುತ್ತದೆ. ವಿವಿಧ ಡೈರಿ ಉತ್ಪನ್ನಗಳನ್ನು ತಯಾರಿಸಲು ಸುಮಾರು 9 ಲಕ್ಷ ಲೀಟರ್ ಹಾಲನ್ನು ಬಳಸಲಾಗುತ್ತದೆ. ಉತ್ಪನ್ನಗಳ ಪೂರೈಕೆಯನ್ನು ಹೆಚ್ಚಿಸುವುದಕ್ಕಾಗಿ ಡೈರಿ ಉತ್ಪನ್ನಗಳನ್ನು ತಯಾರಿಸಲು ದಿನಕ್ಕೆ 12 ಲಕ್ಷ ಲೀಟರ್ ಹಾಲನ್ನು ಬಳಸಲು ಕೆಎಂಎಫ್ ಮುಂದಾಗಿದೆ ಎಂದು ವರದಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ