AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರುಕಟ್ಟೆಗೆ ಬರಲಿದೆ ನಂದಿನಿ ಚಾಕೊಲೇಟ್; ವಂದೇ ಭಾರತ್​ ರೈಲಿನಲ್ಲಿಯೂ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ

ನಂದಿನಿ ಉತ್ಪನ್ನಗಳಾದ ಲಸ್ಸಿ, ಸುವಾಸನೆಯ ಹಾಲು, ಸಿಹಿತಿಂಡಿಗಳು ಮತ್ತು ಮೊಸರನ್ನು ವಂದೇ ಭಾರತ್ ರೈಲುಗಳಲ್ಲಿ ಮಾರಾಟ ಮಾಡಲು ಕೆಎಂಎಫ್ ಚಿಂತನೆ ನಡೆಸಿರುವುದಾಗಿ ವರದಿಯಾಗಿದೆ.

ಮಾರುಕಟ್ಟೆಗೆ ಬರಲಿದೆ ನಂದಿನಿ ಚಾಕೊಲೇಟ್; ವಂದೇ ಭಾರತ್​ ರೈಲಿನಲ್ಲಿಯೂ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ
ಕೆಎಂಎಪ್ ಉತ್ಪನ್ನಗಳುImage Credit source: KMF
TV9 Web
| Edited By: |

Updated on: Aug 02, 2023 | 6:06 PM

Share

ಬೆಂಗಳೂರು: ನಂದಿನಿ ಬ್ರಾಂಡ್‌ನಲ್ಲಿ (Nandini Brand) ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಕರ್ನಾಟಕ ಹಾಲು ಒಕ್ಕೂಟ (KMF) ಶೀಘ್ರದಲ್ಲೇ ಚಾಕೊಲೇಟ್ (Chocolate) ಮಾರಾಟವನ್ನು ಪ್ರಾರಂಭಿಸಲಿದೆ ಎಂದು ವರದಿಗಳು ತಿಳಿಸಿವೆ. ನಂದಿನಿ ಬ್ರಾಂಡ್ ಈಗಾಗಲೇ ಕರ್ನಾಟಕ ಮತ್ತು ದೇಶದ ಹಲವು ಭಾಗಗಳಲ್ಲಿ ಪ್ರಸಿದ್ಧವಾಗಿದ್ದು, ನಂದಿನಿ ಬ್ರಾಂಡ್‌ನಡಿಯಲ್ಲಿ ಹಾಲಿನಿಂದ ತಯಾರಿಸಿ ಅನೇಕ ಸಿಹಿತಿಂಡಿಗಳನ್ನು ದೇಶಾದ್ಯಂತ ಮಾರಾಟ ಮಾಡಲಾಗುತ್ತಿದೆ. ಕೆಎಂಎಫ್ ನಂದಿನಿ ಬ್ರಾಂಡ್ ಹೆಸರಿನಲ್ಲಿ ಬಾದಾಮ್ ಬರ್ಫಿ, ಗೋಡಂಬಿ ಬರ್ಫಿ, ಚಾಕೊಲೇಟ್ ಬರ್ಫಿ, ಮೈಸೂರು ಪಾಕ್, ಬೇಸನ್ ಲಾಡು, ಡ್ರೈ ಫ್ರೂಟ್ ಬರ್ಫಿ, ಧಾರವಾಡ ಪೇಡಾ, ಮಿಲ್ಕ್ ಪೇಡಾ, ಜಾಮೂನ್, ರಸಗೊಲ್ಲ ಸೇರಿದಂತೆ ಹಲವು ಸಿಹಿತಿಂಡಿಗಳನ್ನು ಮಾರಾಟ ಮಾಡಲಾಗುತ್ತಿದೆ.

ಚಾಕೊಲೇಟ್‌ಗಳ ಜೊತೆಗೆ ಮಕ್ಕಳಿಗೆ ಪೌಷ್ಟಿಕ ಆಹಾರವನ್ನೂ ಮಾರಾಟ ಮಾಡಲು ಕೆಎಂಎಫ್ ಮುಂದಾಗಿದೆ ಎಂದು ವರದಿಗಳು ತಿಳಿಸಿವೆ. ಪನೀರ್ ನಿಪ್ಪಟ್ಟು, ಕಡಲೆಕಾಯಿ ಚಿಕ್ಕಿ, ಕಡಲೆಕಾಯಿ ಸಿಹಿತಿಂಡಿಗಳು, ವಿಶೇಷ ಮಿಲ್ಕ್ ಬರ್ಫಿ ಮತ್ತು ಮೂರರಿಂದ ನಾಲ್ಕು ವಿಧದ ಚಾಕೊಲೇಟ್‌ಗಳನ್ನು ಮಾರಾಟ ಮಾಡಲು ಕೆಎಂಎಫ್ ಚಿಂತನೆ ನಡೆಸಿದೆ.

ವಂದೇ ಭಾರತ್ ರೈಲುಗಳಲ್ಲಿಯೂ ಸಿಗಲಿವೆ ಕೆಎಂಎಫ್ ಉತ್ಪನ್ನಗಳು

ನಂದಿನಿ ಉತ್ಪನ್ನಗಳಾದ ಲಸ್ಸಿ, ಸುವಾಸನೆಯ ಹಾಲು, ಸಿಹಿತಿಂಡಿಗಳು ಮತ್ತು ಮೊಸರನ್ನು ವಂದೇ ಭಾರತ್ ರೈಲುಗಳಲ್ಲಿ ಮಾರಾಟ ಮಾಡಲು ಕೆಎಂಎಫ್ ಚಿಂತನೆ ನಡೆಸಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: Vande Bharat Express; ಬೆಂಗಳೂರು ಹೈದರಾಬಾದ್ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಶೀಘ್ರ ಚಾಲನೆ

ಕೆಎಂಎಫ್ ಕರ್ನಾಟಕದಲ್ಲಿ ದಿನಕ್ಕೆ ಸುಮಾರು 75 ರಿಂದ 85 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸುತ್ತದೆ. ವಿವಿಧ ಡೈರಿ ಉತ್ಪನ್ನಗಳನ್ನು ತಯಾರಿಸಲು ಸುಮಾರು 9 ಲಕ್ಷ ಲೀಟರ್ ಹಾಲನ್ನು ಬಳಸಲಾಗುತ್ತದೆ. ಉತ್ಪನ್ನಗಳ ಪೂರೈಕೆಯನ್ನು ಹೆಚ್ಚಿಸುವುದಕ್ಕಾಗಿ ಡೈರಿ ಉತ್ಪನ್ನಗಳನ್ನು ತಯಾರಿಸಲು ದಿನಕ್ಕೆ 12 ಲಕ್ಷ ಲೀಟರ್ ಹಾಲನ್ನು ಬಳಸಲು ಕೆಎಂಎಫ್ ಮುಂದಾಗಿದೆ ಎಂದು ವರದಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!