Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರುಕಟ್ಟೆಗೆ ಬರಲಿದೆ ನಂದಿನಿ ಚಾಕೊಲೇಟ್; ವಂದೇ ಭಾರತ್​ ರೈಲಿನಲ್ಲಿಯೂ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ

ನಂದಿನಿ ಉತ್ಪನ್ನಗಳಾದ ಲಸ್ಸಿ, ಸುವಾಸನೆಯ ಹಾಲು, ಸಿಹಿತಿಂಡಿಗಳು ಮತ್ತು ಮೊಸರನ್ನು ವಂದೇ ಭಾರತ್ ರೈಲುಗಳಲ್ಲಿ ಮಾರಾಟ ಮಾಡಲು ಕೆಎಂಎಫ್ ಚಿಂತನೆ ನಡೆಸಿರುವುದಾಗಿ ವರದಿಯಾಗಿದೆ.

ಮಾರುಕಟ್ಟೆಗೆ ಬರಲಿದೆ ನಂದಿನಿ ಚಾಕೊಲೇಟ್; ವಂದೇ ಭಾರತ್​ ರೈಲಿನಲ್ಲಿಯೂ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ
ಕೆಎಂಎಪ್ ಉತ್ಪನ್ನಗಳುImage Credit source: KMF
Follow us
TV9 Web
| Updated By: Ganapathi Sharma

Updated on: Aug 02, 2023 | 6:06 PM

ಬೆಂಗಳೂರು: ನಂದಿನಿ ಬ್ರಾಂಡ್‌ನಲ್ಲಿ (Nandini Brand) ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಕರ್ನಾಟಕ ಹಾಲು ಒಕ್ಕೂಟ (KMF) ಶೀಘ್ರದಲ್ಲೇ ಚಾಕೊಲೇಟ್ (Chocolate) ಮಾರಾಟವನ್ನು ಪ್ರಾರಂಭಿಸಲಿದೆ ಎಂದು ವರದಿಗಳು ತಿಳಿಸಿವೆ. ನಂದಿನಿ ಬ್ರಾಂಡ್ ಈಗಾಗಲೇ ಕರ್ನಾಟಕ ಮತ್ತು ದೇಶದ ಹಲವು ಭಾಗಗಳಲ್ಲಿ ಪ್ರಸಿದ್ಧವಾಗಿದ್ದು, ನಂದಿನಿ ಬ್ರಾಂಡ್‌ನಡಿಯಲ್ಲಿ ಹಾಲಿನಿಂದ ತಯಾರಿಸಿ ಅನೇಕ ಸಿಹಿತಿಂಡಿಗಳನ್ನು ದೇಶಾದ್ಯಂತ ಮಾರಾಟ ಮಾಡಲಾಗುತ್ತಿದೆ. ಕೆಎಂಎಫ್ ನಂದಿನಿ ಬ್ರಾಂಡ್ ಹೆಸರಿನಲ್ಲಿ ಬಾದಾಮ್ ಬರ್ಫಿ, ಗೋಡಂಬಿ ಬರ್ಫಿ, ಚಾಕೊಲೇಟ್ ಬರ್ಫಿ, ಮೈಸೂರು ಪಾಕ್, ಬೇಸನ್ ಲಾಡು, ಡ್ರೈ ಫ್ರೂಟ್ ಬರ್ಫಿ, ಧಾರವಾಡ ಪೇಡಾ, ಮಿಲ್ಕ್ ಪೇಡಾ, ಜಾಮೂನ್, ರಸಗೊಲ್ಲ ಸೇರಿದಂತೆ ಹಲವು ಸಿಹಿತಿಂಡಿಗಳನ್ನು ಮಾರಾಟ ಮಾಡಲಾಗುತ್ತಿದೆ.

ಚಾಕೊಲೇಟ್‌ಗಳ ಜೊತೆಗೆ ಮಕ್ಕಳಿಗೆ ಪೌಷ್ಟಿಕ ಆಹಾರವನ್ನೂ ಮಾರಾಟ ಮಾಡಲು ಕೆಎಂಎಫ್ ಮುಂದಾಗಿದೆ ಎಂದು ವರದಿಗಳು ತಿಳಿಸಿವೆ. ಪನೀರ್ ನಿಪ್ಪಟ್ಟು, ಕಡಲೆಕಾಯಿ ಚಿಕ್ಕಿ, ಕಡಲೆಕಾಯಿ ಸಿಹಿತಿಂಡಿಗಳು, ವಿಶೇಷ ಮಿಲ್ಕ್ ಬರ್ಫಿ ಮತ್ತು ಮೂರರಿಂದ ನಾಲ್ಕು ವಿಧದ ಚಾಕೊಲೇಟ್‌ಗಳನ್ನು ಮಾರಾಟ ಮಾಡಲು ಕೆಎಂಎಫ್ ಚಿಂತನೆ ನಡೆಸಿದೆ.

ವಂದೇ ಭಾರತ್ ರೈಲುಗಳಲ್ಲಿಯೂ ಸಿಗಲಿವೆ ಕೆಎಂಎಫ್ ಉತ್ಪನ್ನಗಳು

ನಂದಿನಿ ಉತ್ಪನ್ನಗಳಾದ ಲಸ್ಸಿ, ಸುವಾಸನೆಯ ಹಾಲು, ಸಿಹಿತಿಂಡಿಗಳು ಮತ್ತು ಮೊಸರನ್ನು ವಂದೇ ಭಾರತ್ ರೈಲುಗಳಲ್ಲಿ ಮಾರಾಟ ಮಾಡಲು ಕೆಎಂಎಫ್ ಚಿಂತನೆ ನಡೆಸಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: Vande Bharat Express; ಬೆಂಗಳೂರು ಹೈದರಾಬಾದ್ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಶೀಘ್ರ ಚಾಲನೆ

ಕೆಎಂಎಫ್ ಕರ್ನಾಟಕದಲ್ಲಿ ದಿನಕ್ಕೆ ಸುಮಾರು 75 ರಿಂದ 85 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸುತ್ತದೆ. ವಿವಿಧ ಡೈರಿ ಉತ್ಪನ್ನಗಳನ್ನು ತಯಾರಿಸಲು ಸುಮಾರು 9 ಲಕ್ಷ ಲೀಟರ್ ಹಾಲನ್ನು ಬಳಸಲಾಗುತ್ತದೆ. ಉತ್ಪನ್ನಗಳ ಪೂರೈಕೆಯನ್ನು ಹೆಚ್ಚಿಸುವುದಕ್ಕಾಗಿ ಡೈರಿ ಉತ್ಪನ್ನಗಳನ್ನು ತಯಾರಿಸಲು ದಿನಕ್ಕೆ 12 ಲಕ್ಷ ಲೀಟರ್ ಹಾಲನ್ನು ಬಳಸಲು ಕೆಎಂಎಫ್ ಮುಂದಾಗಿದೆ ಎಂದು ವರದಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್