AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರುಕಟ್ಟೆಗೆ ಬರಲಿದೆ ನಂದಿನಿ ಚಾಕೊಲೇಟ್; ವಂದೇ ಭಾರತ್​ ರೈಲಿನಲ್ಲಿಯೂ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ

ನಂದಿನಿ ಉತ್ಪನ್ನಗಳಾದ ಲಸ್ಸಿ, ಸುವಾಸನೆಯ ಹಾಲು, ಸಿಹಿತಿಂಡಿಗಳು ಮತ್ತು ಮೊಸರನ್ನು ವಂದೇ ಭಾರತ್ ರೈಲುಗಳಲ್ಲಿ ಮಾರಾಟ ಮಾಡಲು ಕೆಎಂಎಫ್ ಚಿಂತನೆ ನಡೆಸಿರುವುದಾಗಿ ವರದಿಯಾಗಿದೆ.

ಮಾರುಕಟ್ಟೆಗೆ ಬರಲಿದೆ ನಂದಿನಿ ಚಾಕೊಲೇಟ್; ವಂದೇ ಭಾರತ್​ ರೈಲಿನಲ್ಲಿಯೂ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ
ಕೆಎಂಎಪ್ ಉತ್ಪನ್ನಗಳುImage Credit source: KMF
TV9 Web
| Updated By: Ganapathi Sharma|

Updated on: Aug 02, 2023 | 6:06 PM

Share

ಬೆಂಗಳೂರು: ನಂದಿನಿ ಬ್ರಾಂಡ್‌ನಲ್ಲಿ (Nandini Brand) ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಕರ್ನಾಟಕ ಹಾಲು ಒಕ್ಕೂಟ (KMF) ಶೀಘ್ರದಲ್ಲೇ ಚಾಕೊಲೇಟ್ (Chocolate) ಮಾರಾಟವನ್ನು ಪ್ರಾರಂಭಿಸಲಿದೆ ಎಂದು ವರದಿಗಳು ತಿಳಿಸಿವೆ. ನಂದಿನಿ ಬ್ರಾಂಡ್ ಈಗಾಗಲೇ ಕರ್ನಾಟಕ ಮತ್ತು ದೇಶದ ಹಲವು ಭಾಗಗಳಲ್ಲಿ ಪ್ರಸಿದ್ಧವಾಗಿದ್ದು, ನಂದಿನಿ ಬ್ರಾಂಡ್‌ನಡಿಯಲ್ಲಿ ಹಾಲಿನಿಂದ ತಯಾರಿಸಿ ಅನೇಕ ಸಿಹಿತಿಂಡಿಗಳನ್ನು ದೇಶಾದ್ಯಂತ ಮಾರಾಟ ಮಾಡಲಾಗುತ್ತಿದೆ. ಕೆಎಂಎಫ್ ನಂದಿನಿ ಬ್ರಾಂಡ್ ಹೆಸರಿನಲ್ಲಿ ಬಾದಾಮ್ ಬರ್ಫಿ, ಗೋಡಂಬಿ ಬರ್ಫಿ, ಚಾಕೊಲೇಟ್ ಬರ್ಫಿ, ಮೈಸೂರು ಪಾಕ್, ಬೇಸನ್ ಲಾಡು, ಡ್ರೈ ಫ್ರೂಟ್ ಬರ್ಫಿ, ಧಾರವಾಡ ಪೇಡಾ, ಮಿಲ್ಕ್ ಪೇಡಾ, ಜಾಮೂನ್, ರಸಗೊಲ್ಲ ಸೇರಿದಂತೆ ಹಲವು ಸಿಹಿತಿಂಡಿಗಳನ್ನು ಮಾರಾಟ ಮಾಡಲಾಗುತ್ತಿದೆ.

ಚಾಕೊಲೇಟ್‌ಗಳ ಜೊತೆಗೆ ಮಕ್ಕಳಿಗೆ ಪೌಷ್ಟಿಕ ಆಹಾರವನ್ನೂ ಮಾರಾಟ ಮಾಡಲು ಕೆಎಂಎಫ್ ಮುಂದಾಗಿದೆ ಎಂದು ವರದಿಗಳು ತಿಳಿಸಿವೆ. ಪನೀರ್ ನಿಪ್ಪಟ್ಟು, ಕಡಲೆಕಾಯಿ ಚಿಕ್ಕಿ, ಕಡಲೆಕಾಯಿ ಸಿಹಿತಿಂಡಿಗಳು, ವಿಶೇಷ ಮಿಲ್ಕ್ ಬರ್ಫಿ ಮತ್ತು ಮೂರರಿಂದ ನಾಲ್ಕು ವಿಧದ ಚಾಕೊಲೇಟ್‌ಗಳನ್ನು ಮಾರಾಟ ಮಾಡಲು ಕೆಎಂಎಫ್ ಚಿಂತನೆ ನಡೆಸಿದೆ.

ವಂದೇ ಭಾರತ್ ರೈಲುಗಳಲ್ಲಿಯೂ ಸಿಗಲಿವೆ ಕೆಎಂಎಫ್ ಉತ್ಪನ್ನಗಳು

ನಂದಿನಿ ಉತ್ಪನ್ನಗಳಾದ ಲಸ್ಸಿ, ಸುವಾಸನೆಯ ಹಾಲು, ಸಿಹಿತಿಂಡಿಗಳು ಮತ್ತು ಮೊಸರನ್ನು ವಂದೇ ಭಾರತ್ ರೈಲುಗಳಲ್ಲಿ ಮಾರಾಟ ಮಾಡಲು ಕೆಎಂಎಫ್ ಚಿಂತನೆ ನಡೆಸಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: Vande Bharat Express; ಬೆಂಗಳೂರು ಹೈದರಾಬಾದ್ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಶೀಘ್ರ ಚಾಲನೆ

ಕೆಎಂಎಫ್ ಕರ್ನಾಟಕದಲ್ಲಿ ದಿನಕ್ಕೆ ಸುಮಾರು 75 ರಿಂದ 85 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸುತ್ತದೆ. ವಿವಿಧ ಡೈರಿ ಉತ್ಪನ್ನಗಳನ್ನು ತಯಾರಿಸಲು ಸುಮಾರು 9 ಲಕ್ಷ ಲೀಟರ್ ಹಾಲನ್ನು ಬಳಸಲಾಗುತ್ತದೆ. ಉತ್ಪನ್ನಗಳ ಪೂರೈಕೆಯನ್ನು ಹೆಚ್ಚಿಸುವುದಕ್ಕಾಗಿ ಡೈರಿ ಉತ್ಪನ್ನಗಳನ್ನು ತಯಾರಿಸಲು ದಿನಕ್ಕೆ 12 ಲಕ್ಷ ಲೀಟರ್ ಹಾಲನ್ನು ಬಳಸಲು ಕೆಎಂಎಫ್ ಮುಂದಾಗಿದೆ ಎಂದು ವರದಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು