AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ ಟಿಕೆಟ್ ದರ ಹೆಚ್ಚಳ ಬೆನ್ನಲ್ಲೇ ಜನರಿಗೆ ತಟ್ಟಲಿದೆ ಮತ್ತೆ ನಾಲ್ಕು ಬೆಲೆ ಏರಿಕೆ ಬಿಸಿ..!

ಹೊಸ ವರ್ಷದ ಆರಂಭದಲ್ಲೇ ಜನರಿಗೆ ಸಾಲು ಸಾಲು ದರ ಏರಿಕೆ ಬಿಸಿ ತಟ್ಟುತ್ತಿದೆ. ಕೆಎಸ್​ಆರ್​ಟಿಸಿ, ಬಿಎಂಟಿಸಿ ಟಿಕೆಟ್​ ದರ ಹೆಚ್ಚಳ ಬೆನ್ನಲ್ಲೇ ಇದೀಗ ಮೆಟ್ರೋ, ನಂದಿನಿ ಹಾಲು, ವಿದ್ಯುತ್​ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಇದರ ನಡುವೆ ಇದೀಗ ಸಿಲಿಕಾನ್ ಸಿಟಿ ಮಂದಿಗೆ ನೀರಿನ ದರ ಏರಿಕೆಯ ಬರೆ ಎಳೆಯೋಕೆ ಜಲಮಂಡಳಿ ಸಜ್ಜಾಗಿನಿಂತಿದೆ. ನೀರಿನ ದರ ಪರಿಷ್ಕರಿಣೆಯ ಬಗ್ಗೆ ಮೊದಲಿಂದಲೂ ಕೇಳಿಬರ್ತಿದ್ದ ಕೂಗಿಗೆ ಇದೀಗ ಗ್ರೀನ್ ಸಿಗ್ನಲ್ ಸಿಗೋ ಸಾಧ್ಯತೆ ಹೆಚ್ಚಾಗಿದೆ. ಈಗ ಬಸ್​ ಟಿಕೆಟ್​ ದರ ಹೆಚ್ಚಳ ಬೆನ್ನಲ್ಲೇ ಯಾವೆಲ್ಲಾ ಬೆಲೆ ಏರಿಕೆಯಾಗಲಿದೆ ಎನ್ನುವ ವಿವರ ಇಲ್ಲಿದೆ.

ಬಸ್​ ಟಿಕೆಟ್ ದರ ಹೆಚ್ಚಳ ಬೆನ್ನಲ್ಲೇ ಜನರಿಗೆ ತಟ್ಟಲಿದೆ ಮತ್ತೆ ನಾಲ್ಕು ಬೆಲೆ ಏರಿಕೆ ಬಿಸಿ..!
ಬೆಲೆ ಏರಿಕೆ
ರಮೇಶ್ ಬಿ. ಜವಳಗೇರಾ
|

Updated on: Jan 03, 2025 | 11:12 PM

Share

ಬೆಂಗಳೂರು, (ಜನವರಿ 03): ಕರ್ನಾಟಕದಲ್ಲಿ ಬಸ್ ಪ್ರಯಾಣ ದರ ಏರಿಕೆಯ ಬಿಸಿ ಕಾವೇರುತ್ತಿರುವ ಹೊತ್ತಲ್ಲೇ, ಇತ್ತ ರಾಜಧಾನಿಯ ಜನರಿಗೆ ಜಲಮಂಡಳಿ ಶಾಕ್ ಕೊಡೋಕೆ ಸಜ್ಜಾಗಿನಿಂತಿದೆ. 2014 ರ ಬಳಿಕ ನೀರಿನ ದರ ಪರಿಷ್ಕರಿಣೆಯಾಗಿಲ್ಲ ಎಂದು ಕಾರಣ ಹೇಳುತ್ತಿರುವ ಜಲಮಂಡಳಿ, ಇದೀಗ ಸರ್ಕಾರದ ಮಧ್ಯಸ್ಥಿಕೆಯಲ್ಲೇ ನೀರಿನ ದರ ಪರಿಷ್ಕರಣೆ ಮಾಡೋ ಮೂಲಕ ಸಿಟಿಮಂದಿಗೆ ದರಯೇರಿಕೆಯ ಬರೆ ಎಳೆಯೋಕೆ ತಯಾರಿ ನಡೆಸಿದೆ. ಸದ್ಯ ಜನವರಿ 2ನೇ ವಾರದಲ್ಲಿ ಶಾಸಕರ ಜೊತೆ ಸಭೆ ನಡೆಸಲಿರೋ ಡಿಸಿಎಂ ಡಿ.ಕೆ.ಶಿವಕುಮಾರ್, ನೀರಿನ ದರ ಏರಿಕೆಯ ಪ್ರಸ್ತಾವನೆಗೆ ಗ್ರೀನ್ ಸಿಗ್ನಲ್ ಕೊಡುವ ಸಾಧ್ಯತೆ ದಟ್ಟವಾಗಿದ್ದು, ಇತ್ತ ಜಲಮಂಡಳಿ ಕೂಡ ದರಯೇರಿಕೆ ಸುಳಿವು ಕೊಟ್ಟಿದೆ.

ಸದ್ಯ ನೀರಿನ ದರ ಏರಿಕೆಯ ಬಗ್ಗೆ ಇತ್ತೀಚೆಗಷ್ಟೇ ಬೆಂಗಳೂರಿನ 27 ಶಾಸಕರಿಗೆ ಪತ್ರ ಬರೆದಿದ್ದ ಜಲಮಂಡಳಿ, ಡಿಸಿಎಂ ಸಭೆಯಲ್ಲಿ ದರಯೇರಿಕೆಗೆ ಬೆಂಬಲ ಕೊಡಿ ಎಂದು ಮನವಿ ಮಾಡಿತ್ತು, ಇತ್ತ ಜಲಮಂಡಳಿಯ ಮನವಿಗೆ ಶಾಸಕರು ಕೂಡ ಎಸ್ ಅಂದಿದ್ರು, ಇದರಿಂದ ಈ ತಿಂಗಳಲ್ಲೇ ನಡೆಯೋ ಸಭೆಯಲ್ಲಿ ನೀರಿನ ದರ ಪರಿಷ್ಕರಣೆಯಾಗೋದು ಪಕ್ಕ ಎನ್ನಲಾಗುತ್ತಿದೆ. ಸದ್ಯ ಸಾಲು ಸಾಲು ಬೆಲೆಯೇರಿಕೆಯ ಬಿಸಿಯಿಂದ ತತ್ತರಿಸಿರೋ ಸಿಟಿಮಂದಿಗೆ, ಇದೀಗ ನೀರಿನ ದರ ಏರಿಕೆಯ ಹೊರೆ ಹೊರುವ ಸ್ಥಿತಿ ಕೂಡ ಎದುರಾಗೋಕೆ ಕೌಂಟ್ ಡೌನ್ ಶುರುವಾಗಿದೆ.

ಇದನ್ನೂ ಓದಿ: ಜ.5ರಿಂದಲೇ KSRTC, BMTC ಟಿಕೆಟ್ ದರ ಹೆಚ್ಚಳ ಜಾರಿ: ನಿಮ್ಮ ಊರಿಗೆ ಎಷ್ಟು ರೇಟ್ ?

ಇನ್ನು ನೀರಿನ ಪೂರೈಕೆಗೆ ಬಳಸ್ತಿರೋ ವಿದ್ಯುತ್ ಶಕ್ತಿಯ ದರವನ್ನ ಭರಿಸೋಕೆ ಆಗುತ್ತಿಲ್ಲ. ನೀರಿನ ಪೂರೈಕೆಯಲ್ಲಿ ವಿದ್ಯುತ್ ದರ ಹೊರೆಯಾಗ್ತಿರೋದರಿಂದ ನೀರಿನ ದರ ಏರಿಕೆ ಅನಿವಾರ್ಯ ಎಂದು ಜಲಮಂಡಳಿ ಹೇಳುತ್ತಿದ್ದರೆ, ಇತ್ತ ಈಗಾಗಲೇ ದುಬಾರಿ ದುನಿಯಾದಿಂದ ಕಂಗೆಟ್ಟಿದ್ದ ಸಿಟಿಮಂದಿ, ಇದೀಗ ನೀರಿನ ದರ ಏರಿಕೆಯ ಬರೆ ಕೂಡ ಬೀಳುತ್ತೆ ಅನ್ನೋ ವಿಚಾರ ಕೇಳಿ ಕಂಗಾಲಾಗಿಬಿಟ್ಟಿದ್ದಾರೆ. ಬರುವ ಸಂಬಳದಲ್ಲಿ ಎಲ್ಲವನ್ನ ನಿರ್ವಹಣೆ ಮಾಡಿಕೊಂಡು ಹೋಗ್ತಿರೋ ಜನರಿಗೆ ನೀರಿನ ದರ ಹೆಚ್ಚಾದ್ರೆ ಸಮಸ್ಯೆ ತಟ್ಟುತ್ತೆ ಎಂದು ಕಿಡಿಕಾರುತ್ತಿದ್ದಾರೆ.

ಮೆಟ್ರೋ ಟಿಕೆಟ್ ದರ ಹೆಚ್ಚಳ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಮೆಟ್ರೋ ಜಾಲ ವಿಸ್ತರಣೆ ಆಗುತ್ತಲೇ ಇದೆ. ಪ್ರತಿದಿನ ಮೆಟ್ರೋದಲ್ಲಿ ಸಂಚಾರ ಮಾಡುವ ಪ್ರಯಾಣಿಕರ ಸಂಖ್ಯೆ ಒಂಭತ್ತು ಲಕ್ಷ ದಾಟಿದೆ. ಆದರೆ ನಿರ್ವಹಣಾ ವೆಚ್ಚ ಹೆಚ್ಚಾಗಿದ್ಯಂತೆ, ಹಾಗಾಗಿ ಟಿಕೆಟ್ ದರ ಹೆಚ್ಚಳ ಮಾಡಲು ಬಿಎಂಆರ್​ಸಿಎಲ್ ಮುಂದಾಗಿದ್ದು, ಜನವರಿ ಎರಡನೇ ವಾರದಲ್ಲಿ ನಡೆಯುವ ಬೋರ್ಡ್ ಮೀಟಿಂಗ್ ನಲ್ಲಿ ಹೊಸ ದರ ಜಾರಿಯಾಗುವ ಎಲ್ಲಾ ಸಾಧ್ಯತೆಗಳಿದ್ಯಂತೆ.

ಕಳೆದ ಏಳು ವರ್ಷಗಳಿಂದ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿರಲಿಲ್ಲ, ಹಾಗಾಗಿ ಟಿಕೆಟ್ ದರ ಹೆಚ್ಚಳ ಮಾಡಲು ನಮ್ಮ ಮೆಟ್ರೋ ಕಮಿಟಿ ರಚನೆ ಮಾಡಿತ್ತು, ಅಕ್ಟೋಬರ್ 3 ರಿಂದ 28ರ ವರೆಗೆ ಪ್ರಯಾಣಿಕರ ಅಭಿಪ್ರಾಯ ತಿಳಿಸಲು ಅವಕಾಶ ನೀಡಲಾಗಿತ್ತು. ಪ್ರಯಾಣಿಕರ ಅಭಿಪ್ರಾಯವನ್ನು ಸಂಗ್ರಹಿಸಿರುವ ಕಮಿಟಿ, ಆ ವರದಿಯನ್ನು ಡಿಸೆಂಬರ್ ಕೊನೆ ವಾರದಲ್ಲಿ ಬಿಎಂಆರ್ಸಿಎಲ್ ಗೆ ಸಲ್ಲಿಸಲಿದ್ದು, ಜನವರಿ ಎರಡನೇ ವಾರದಲ್ಲಿ ಕಮಿಟಿ ನೀಡಿದ ವರದಿಯನ್ನು ಬಿಎಂಆರ್ಸಿಎಲ್ ಬೋರ್ಡ್ ಮೀಟಿಂಗ್ ನಲ್ಲಿಟ್ಟು.15% ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ನಮ್ಮ ಮೆಟ್ರೋ ಪ್ಲಾನ್ ಮಾಡಿಕೊಂಡಿದೆ. ಬೋರ್ಡ್ ಮೀಟಿಂಗ್ ನಲ್ಲಿ ಗ್ರೀನ್ ಸಿಗ್ನಲ್ ನೀಡಿದ್ದೆ ಜನವರಿ ಎರಡನೇ ವಾರದಿಂದ ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ.

ಇನ್ನೂ ನಮ್ಮ ಮೆಟ್ರೋದಲ್ಲಿ ಕನಿಷ್ಠ ದರ10 ರೂ ಗರಿಷ್ಠ60 ರೂ ಪ್ರಯಾಣ ದರ ನಿಗದಿ ಮಾಡಲಾಗಿದೆ. ಕಾರ್ಯಾಚರಣೆ ವೆಚ್ಚ ಅಧಿಕವಾದ ಕಾರಣದಿಂದ ಪ್ರಯಾಣ ದರ ಹೆಚ್ಚಳಕ್ಕೆ ಪ್ರಸ್ತಾಪ ಮಾಡಲಾಗಿದೆ. ಅಕ್ಟೋಬರ್-3 ರಿಂದ ಅ 28 ರವರೆಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಮಾಡಿರುವ ನಮ್ಮ ಮೆಟ್ರೋ. ಸಾರ್ವಜನಿಕ ಅಭಿಪ್ರಾಯ ಅವಧಿಯಲ್ಲಿ ಬಹುತೇಕರು ದರ ಹೆಚ್ಚಳಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಿದ್ದಾರಂತೆ,ಜನರ ಆಕ್ಷೇಪ ನಡುವೆ ದರ ಹೆಚ್ಚಳಕ್ಕೆ ಅಸ್ತು ಎಂದಿರುವ ದರ ನಿಗದಿ ಸಮಿತಿ. ಹೀಗಾಗಿ ಶೇ 15% ರಷ್ಟು ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಸಾಧ್ಯತೆ ಇದೆ. ಕನಿಷ್ಠ ದರ 15 ಗರಿಷ್ಠ ದರ 75 ರೂ ಪರಿಷ್ಕರಣೆ ಸಾಧ್ಯತೆ.

ಹಾಲಿನ ದರದಲ್ಲೂ ಏರಿಕೆ

ಬೆಂಗಳೂರು: ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು (ಕೆಎಂಎಫ್‌) ಮತ್ತೆ ನಂದಿನಿ ಹಾಲಿನ ದರ ಪರಿಷ್ಕರಣೆಗೆ ಮುಂದಾಗಿದೆ. ಪ್ರತಿ ಲೀಟರ್‌ ಹಾಲಿನ ದರದಲ್ಲಿ5 ರೂ. ಏರಿಕೆ ಮಾಡುವಂತೆ ರಾಜ್ಯ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ. ಕೆಎಂಎಫ್‌, ಆರು ತಿಂಗಳ ಹಿಂದೆಯಷ್ಟೇ ರಾಜ್ಯದಲ್ಲಿನಂದಿನಿ ಹಾಲಿನ ದರ ಪರಿಷ್ಕರಣೆಯೊಂದಿಗೆ ಗ್ರಾಹಕರಿಗೆ ಹೆಚ್ಚುವರಿ ಹಾಲು ವಿತರಿಸಲು ಆರಂಭಿಸಿತ್ತು. ಈಗ ರೈತರ ಹಿತದೃಷ್ಟಿಯಿಂದ ಹಾಲಿನ ದರ ಪರಿಷ್ಕರಿಸಲು ಮುಂದಾಗಿದೆ. ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 5 ರೂ. ಹೆಚ್ಚಳವಾಗುವ ಬಗ್ಗೆ ಕೆಎಂಎಫ್‌ ಅಧ್ಯಕ್ಷ ಎಲ್‌.ಭೀಮಾ ನಾಯ್ಕ್ ಮುನ್ಸೂಚನೆ ನೀಡಿದ್ದಾರೆ.

ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ(ಬೆಸ್ಕಾಂ) ಸೇರಿ ಕರ್ನಾಟಕದ ಎಲ್ಲ ಎಸ್ಕಾಂಗಳು ವಿದ್ಯುತ್ ದರ ಏರಿಕೆಗೆ ಪ್ಲ್ಯಾನ್​ ಮಾಡಿವೆ. ಮುಂದಿನ ಮೂರು ವರ್ಷಗಳಿಗೆ ಅನುಗುಣವಾಗುವಂತೆ ಪ್ರತಿ ಯುನಿಟ್​ ದರ ಏರಿಕೆಗೆ ಮುಂದಾಗಿವೆ. 2025-26 ರಲ್ಲಿ ಪ್ರತಿ ಯೂನಿಟ್ ಗೆ 67 ಪೈಸೆ, 2026-27 ರಲ್ಲಿ ಪ್ರತಿ ಯೂನಿಟ್​ಗೆ 75 ಪೈಸೆ ಹಾಗೂ 2027-28 ರಲ್ಲಿ 91 ಪೈಸೆ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿವೆ. ದರ ಏರಿಕೆ ಪ್ರಸ್ತಾವನೆ ಸಲ್ಲಿಸಲು ನ.30 ಕೊನೆಯ ದಿನವಾಗಿತ್ತು. ಆ ಗಡುವಿನೊಳಗೆ ಎಲ್ಲಾ ಎಸ್ಕಾಂಗಳು ಕೂಡ ದರ ಏರಿಕೆಗೆ ಪ್ರಸ್ತಾವನೆ ಕೊಟ್ಟಿವೆ. ದರ ಏರಿಕೆ ಒಟ್ಟೊಟ್ಟಿಗೆ ಬಹುತೇಕ ಏಕ ಮಾದರಿಯಲ್ಲಿಯೇ ಆಗಲಿದೆ ಎಂದು ಕೆಇಆರ್‌ಸಿ ಮೂಲಗಳು ತಿಳಿಸಿವೆ.

ಮುಂದಿನ ಮೂರು ವರ್ಷಗಳ ಕಾಲ ಕ್ರಮವಾಗಿ ಪ್ರತಿ ಯುನಿಟ್‌ಗೆ 67 ಪೈಸೆ, 75 ಪೈಸೆ ಹಾಗೂ 91 ಪೈಸೆಯಂತೆ ದರ ಹೆಚ್ಚಳ ಮಾಡಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಬೆಸ್ಕಾಂ ಮನವಿ ಸಲ್ಲಿಸಿದೆ. ತನ್ನ ದರ ಪರಿಷ್ಕರಣೆಯ ಮನವಿ ಪ್ರಸ್ತಾವನೆಯಲ್ಲಿ ಮುಂದಿನ ವರ್ಷದಲ್ಲಿ (2025-26) ಬೆಸ್ಕಾಂಗೆ 2,572.69 ಕೋಟಿ ರು.ಗಳಷ್ಟು ಆದಾಯ ಕೊರತೆ ಉಂಟಾಗಲಿದೆ. ಇದನ್ನು ನೀಗಿಸಲು 2025ರ ಏ.1ರಿಂದ ಅನ್ವಯವಾಗುವಂತೆ 2025-26ರ ಸಾಲಿಗೆ ಪ್ರತಿ ಯುನಿಟ್‌ಗೆ 67 ಪೈಸೆಯಂತೆ ದರ ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದೆ.

ಇದೇ ಜನವರಿ 5ರಿಂದ ಬಸ್ ಟಿಕೆಟ್ ದರ ಹೆಚ್ಚಳ ಜಾರಿಗೆ ಬೆನ್ನಲ್ಲೇ ಉಳಿದ ನಮ್ಮ ಮೆಟ್ರೋ, ನೀರಿನ ದರ, ವಿದ್ಯುತ್ ದರ, ಹಾಲಿನ ದರವೂ ಸಹ ಮುಂದಿನ ದಿನಗಳಲ್ಲಿ ಹೆಚ್ಚಳವಾಗಲಿದೆ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವಣೆಗಳು ಹೋಗಿದ್ದು, ಈ ತಿಂಗಳಲ್ಲಿ ಅಧಿಕೃತವಾಗಿ ದರ ಏರಿಕೆಯಾಗುವುದು ಖಚಿತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು