AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ನೀಡಿದ್ರು ಬಿಗ್​ ಅಪ್ಡೇಟ್

ಬಜೆಟ್ ನಂತರ ಕೆಎಂಎಫ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ ಎಂಬ ವದಂತಿಗಳಿಗೆ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸ್ಪಷ್ಟನೆ ನೀಡಿದ್ದಾರೆ. ಸರ್ಕಾರ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅವರು ಹೇಳಿದ್ದಾರೆ. ಸಂಬಂಧಿತ ಇಲಾಖೆಗಳಿಂದ ಒತ್ತಡ ಇದ್ದರೂ, ಸರ್ಕಾರದ ಅಂತಿಮ ನಿರ್ಧಾರ ಕಾಯಬೇಕಿದೆ. ರೈತರಿಗೆ ಹೆಚ್ಚುವರಿ ಹಣ ಸಿಗುವಂತೆ ದರ ಹೆಚ್ಚಳದ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಿದರು.

ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ನೀಡಿದ್ರು ಬಿಗ್​ ಅಪ್ಡೇಟ್
ನಂದಿನಿ, ಭೀಮಾನಾಯ್ಕ್​್
ವಿನಾಯಕ ಬಡಿಗೇರ್​
| Updated By: ವಿವೇಕ ಬಿರಾದಾರ|

Updated on: Feb 22, 2025 | 10:30 AM

Share

ಬಳ್ಳಾರಿ, ಫೆಬ್ರವರಿ 22: ಬಜೆಟ್​ ನಂತರ ರಾಜ್ಯ ಸರ್ಕಾರ ಕೆಎಂಎಫ್​ ನಂದಿನಿ (KMF Nandini) ಹಾಲಿನ ದರ 5 ರೂ. ಏರಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದಕ್ಕೆ ಕೆಎಂಎಫ್​ ಅಧ್ಯಕ್ಷ ಭೀಮಾನಾಯ್ಕ್ (Bheema naik) ಸ್ಪಷ್ಟನೆ ನೀಡಿದ್ದು, ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ ಎಂದು ಹೇಳಿದರು.

ಬಳ್ಳಾರಿಯಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ನಂದಿನಿ ಹಾಲಿನ ದರ ಹೆಚ್ಚಳ ಮಾಡುವಂತೆ ಒತ್ತಡ ಇದೆ. ಸಂಬಂಧಿಸಿದ ನಿಗಮಗಳ ಸಭೆ ಕರೆದು ಚರ್ಚೆ ಮಾಡಲಾಗಿದೆ. 5 ರೂ. ಹೆಚ್ಚಳ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೆಚ್ಚಳ ಮಾಡಿದ ದರವನ್ನು ರೈತರಿಗೆ ನೀಡಬೇಕೆಂದು ಚರ್ಚಿಸಲಾಗಿದೆ. ಸಭೆಯಲ್ಲಿ ಚರ್ಚಿಸಿದ ವಿಷಯವನ್ನು ಸರ್ಕಾರಕ್ಕೆ ತಿಳಿಸಿದ್ದೇವೆ. ಪಶುಸಂಗೋಪನೆ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಂದ ದರ ಹೆಚ್ಚಳದ ಬಗ್ಗೆ ಒತ್ತಡ ಇದೆ. ಆದರೆ, ಸರ್ಕಾರದಿಂದ ಯಾವುದೇ ನಿರ್ಧಾರ ಹೊರಬಂದಿಲ್ಲ. ಹಾಲಿನ ದರ ಹೆಚ್ಚಳ ಬಗ್ಗೆ ಸರ್ಕಾರ ತೀರ್ಮಾನ ಮಾಡಿಲ್ಲ ಎಂದು ತಿಳಿಸಿದರು.

ಹಾಲಿನ ದರ ಏರಿಸುವಂತೆ ಒಕ್ಕೂಟಗಳ ಒತ್ತಡ

ಹಾಲಿನ ದರ ಏರಿಕೆಗಾಗಿ ರಾಜ್ಯ ಸರ್ಕಾರದ ಮೇಲೆ ಹಾಲು ಒಕ್ಕೂಟಗಳು ಒತ್ತಡ ಹೇರುತ್ತಿದ್ದು, ಲೀಟರ್​​ಗೆ 5 ರೂಪಾಯಿ ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿವೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿತ್ತು. ಕಳೆದ ತಿಂಗಳು ಪಶು ಸಂಗೋಪನಾ ಸಚಿವರು ಕೆಎಂಎಫ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಸಭೆಯಲ್ಲಿ ಹಾಲಿನ ದರ ಏರಿಕೆ ಮಾಡಬೇಕಾದ ಅನಿವಾರ್ಯತೆ ಕುರಿತು ಚರ್ಚೆಯಾಗಿತ್ತು. ಈ ವೇಳೆ ಹಾಲಿನ ದರ ಲೀಟರಿಗೆ 5 ರೂಪಾಯಿ ಏರಿಸಬೇಕು ಎಂದು ಒಕ್ಕೂಟಗಳು ಪ್ರಸ್ತಾವನೆ ಸಲ್ಲಿಸಿದ್ದವು. ಸಂಗೋಪನೆಯ ಖರ್ಚು ವೆಚ್ಚಗಳ ಹೆಚ್ಚಳದಿಂದ ಬೆಲೆ ಏರಿಸಲೇ ಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಹೇಳಿದ್ದವು.

ಇದನ್ನೂ ಓದಿ: ಇಂದಿನಿಂದ ದೆಹಲಿಯಲ್ಲೂ ನಂದಿನಿ ಉತ್ಪನ್ನಗಳ ಮಾರಾಟ, ಸಿಎಂ ಸಿದ್ದರಾಮಯ್ಯ ಚಾಲನೆ

ಹಾಲಿನ ದರ ಏರಿಸುವಂತೆ ರೈತರಿಂದ ಮನವಿ

ಕಳೆದ ವರ್ಷ ಡಿಸೆಂಬರ್​ನಲ್ಲಿ ರೈತರು ಹಾಗೂ ಹಾಲು‌ ಒಕ್ಕೂಟಗಳು ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆ ಮಾಡುವಂತೆ ಕೆಎಂಎಫ್​ಗೆ ಮನವಿ ಮಾಡಿದ್ದವು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!