AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕ್ಷೀರ ಭಾಗ್ಯ’ ಯೋಜನೆಗೂ ದರ ಏರಿಕೆಯ ಬಿಸಿ!, ಹೆಚ್ಚುವರಿ 50 ಕೋಟಿ ರೂ. ಹೊರೆ?

ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಏರಿಕೆ ಬಿಸಿ ಶಾಲಾ ಮಕ್ಕಳಿಗೆ ನೀಡುವ ಹಾಲಿನ ಪುಡಿ ಕ್ಷೀರ ಭಾಗ್ಯ ಯೋಜನೆಗೂ ತಟ್ಟಿದೆ.

‘ಕ್ಷೀರ ಭಾಗ್ಯ' ಯೋಜನೆಗೂ ದರ ಏರಿಕೆಯ ಬಿಸಿ!, ಹೆಚ್ಚುವರಿ 50 ಕೋಟಿ ರೂ. ಹೊರೆ?
ಕ್ಷೀರ ಭಾಗ್ಯ
TV9 Web
| Edited By: |

Updated on: Aug 04, 2023 | 3:31 PM

Share

ಬೆಂಗಳೂರು, (ಆಗಸ್ಟ್ 04): ರಾಜ್ಯದಲ್ಲಿ ಒಂದು ಲೀಟರ್ ಹಾಲಿನ ಮೇಲೆ ಮೂರು ರುಪಾಯಿ ಅರ್ಧ ಲೀಟರ್ ಮೇಲೆ ಎರಡು ರುಪಾಯಿ ದರ ಏರಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಇದರಿಂದ ಕ್ಷೀರ ಭಾಗ್ಯ ಯೋಜನೆಗೂ ದರ ಏರಿಕೆಯ ಬಿಸಿ ತಟ್ಟಲಿದೆ. ಸದ್ಯ ಕೆಎಂಎಫ್ ಕ್ಷೀರ ಭಾಗ್ಯ ಯೋಜನೆಯ ಅಡಿಯಲ್ಲಿ ಸ್ಕೂಲ್ ಮಕ್ಕಳಿಗೆ ನೀಡುತ್ತಿರುವ ಒಂದು ಕೆಜಿ ಹಾಲಿನ ಪೌಡರ್ ಗೆ 300 ರುಪಾಯಿ ಇದ್ದು ಸದ್ಯ ಕೆಎಂಎಫ್ 74 ರುಪಾಯಿ ದರ ಹೆಚ್ಚಿಗೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಕ್ಷೀರಭಾಗ್ಯಕ್ಕೆ ಹೆಚ್ಚುವರಿ 50 ಕೋಟಿ ರೂ. ಹೊರೆ?

ಕ್ಷೀರ ಭಾಗ್ಯ ಯೋಜನೆಗೆ ಅಂದಾಜು ಹೆಚ್ಚುವರಿಯಾಗಿ 50 ಕೋಟಿ ರೂ. ಬೇಕಾಗಬಹುದು ‌ಎಂದು ಅಂದಾಜಿಸಲಾಗಿದೆ. ಈ ವರ್ಷದ ಮಾರ್ಚ್ ನಲ್ಲಿ ಕೆಎಂಎಫ್ ನಿಂದ ಹಾಲಿನ ಪುಡಿಯ ದರಕ್ಕೆ ಐವತ್ತು ರುಪಾಯಿ ದರ ಏರಿಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು ಆದರೆ ಅಂದಿನ ‌ಸರ್ಕಾರ 25 ರುಪಾಯಿ ‌ದರ ಏರಿಕೆ ಮಾಡಿತ್ತು ಈಗ ಮತ್ತೊಮ್ಮೆ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಲಾಗಿದ್ಯಂತೆ..

ಹಾಲಿನ ಪುಡಿಯ ದರವೂ ಹೆಚ್ಚಳ?

ಮಾರ್ಚ್ ನಲ್ಲಿ ಐವತ್ತು ರುಪಾಯಿ ದರ ಏರಿಕೆ ಪ್ರಸ್ತಾವನೆಯನ್ನ ತಿರಸ್ಕರಿಸಿದ್ದ ಸರ್ಕಾರ, ಈಗ ಮತ್ತೊಮ್ಮೆ ಕೆಎಂಎಫ್ 74 ರೂ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದೆ. 2023ರ ಮಾರ್ಚ್‌ನಲ್ಲಿ 25ರೂ. ಹೆಚ್ಚಳ ಮಾಡಿದ್ದ ಕೆಎಂಎಫ್ ಇದೀಗ ಮತ್ತೆ ಹೆಚ್ಚಳ ಮಾಡಿದರೆ, ಐದು ತಿಂಗಳ ಅವಧಿಯಲ್ಲಿ ಎರಡು ಬಾರಿ ಹೆಚ್ಚಿಸಿದಂತಾಗುತ್ತದೆ. 25 ರೂಪಾಯಿ ಹಾಲಿನ ಪುಡಿದರ ಹೆಚ್ಚಳ ಮಾಡಿದಾಗ 700 ಕೋಟಿ ರೂಪಾಯಿಗೆ ಬಜೆಟ್ ಹೆಚ್ಚಳವಾಗಿತ್ತು. ಆದರೆ ಮತ್ತೊಮ್ಮೆ ಮಕ್ಕಳಿಗೆ ನೀಡುತ್ತಿರುವ ಹಾಲಿನ ಪುಡಿ ದರ ವನ್ನು ಹೆಚ್ವಳ ಮಾಡಿದ್ರೆ, ಮಕ್ಕಳಿಗೆ ನೀಡುವ ಹಾಲಿನ ಪ್ರಮಾಣ ಕಡಿಮೆ ಆಗಬಹುದು ಅಂತಿದ್ದಾರೆ ಪೋಷಕರು.

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ