AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕ್ಷೀರ ಭಾಗ್ಯ’ ಯೋಜನೆಗೂ ದರ ಏರಿಕೆಯ ಬಿಸಿ!, ಹೆಚ್ಚುವರಿ 50 ಕೋಟಿ ರೂ. ಹೊರೆ?

ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಏರಿಕೆ ಬಿಸಿ ಶಾಲಾ ಮಕ್ಕಳಿಗೆ ನೀಡುವ ಹಾಲಿನ ಪುಡಿ ಕ್ಷೀರ ಭಾಗ್ಯ ಯೋಜನೆಗೂ ತಟ್ಟಿದೆ.

‘ಕ್ಷೀರ ಭಾಗ್ಯ' ಯೋಜನೆಗೂ ದರ ಏರಿಕೆಯ ಬಿಸಿ!, ಹೆಚ್ಚುವರಿ 50 ಕೋಟಿ ರೂ. ಹೊರೆ?
ಕ್ಷೀರ ಭಾಗ್ಯ
TV9 Web
| Edited By: |

Updated on: Aug 04, 2023 | 3:31 PM

Share

ಬೆಂಗಳೂರು, (ಆಗಸ್ಟ್ 04): ರಾಜ್ಯದಲ್ಲಿ ಒಂದು ಲೀಟರ್ ಹಾಲಿನ ಮೇಲೆ ಮೂರು ರುಪಾಯಿ ಅರ್ಧ ಲೀಟರ್ ಮೇಲೆ ಎರಡು ರುಪಾಯಿ ದರ ಏರಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಇದರಿಂದ ಕ್ಷೀರ ಭಾಗ್ಯ ಯೋಜನೆಗೂ ದರ ಏರಿಕೆಯ ಬಿಸಿ ತಟ್ಟಲಿದೆ. ಸದ್ಯ ಕೆಎಂಎಫ್ ಕ್ಷೀರ ಭಾಗ್ಯ ಯೋಜನೆಯ ಅಡಿಯಲ್ಲಿ ಸ್ಕೂಲ್ ಮಕ್ಕಳಿಗೆ ನೀಡುತ್ತಿರುವ ಒಂದು ಕೆಜಿ ಹಾಲಿನ ಪೌಡರ್ ಗೆ 300 ರುಪಾಯಿ ಇದ್ದು ಸದ್ಯ ಕೆಎಂಎಫ್ 74 ರುಪಾಯಿ ದರ ಹೆಚ್ಚಿಗೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಕ್ಷೀರಭಾಗ್ಯಕ್ಕೆ ಹೆಚ್ಚುವರಿ 50 ಕೋಟಿ ರೂ. ಹೊರೆ?

ಕ್ಷೀರ ಭಾಗ್ಯ ಯೋಜನೆಗೆ ಅಂದಾಜು ಹೆಚ್ಚುವರಿಯಾಗಿ 50 ಕೋಟಿ ರೂ. ಬೇಕಾಗಬಹುದು ‌ಎಂದು ಅಂದಾಜಿಸಲಾಗಿದೆ. ಈ ವರ್ಷದ ಮಾರ್ಚ್ ನಲ್ಲಿ ಕೆಎಂಎಫ್ ನಿಂದ ಹಾಲಿನ ಪುಡಿಯ ದರಕ್ಕೆ ಐವತ್ತು ರುಪಾಯಿ ದರ ಏರಿಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು ಆದರೆ ಅಂದಿನ ‌ಸರ್ಕಾರ 25 ರುಪಾಯಿ ‌ದರ ಏರಿಕೆ ಮಾಡಿತ್ತು ಈಗ ಮತ್ತೊಮ್ಮೆ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಲಾಗಿದ್ಯಂತೆ..

ಹಾಲಿನ ಪುಡಿಯ ದರವೂ ಹೆಚ್ಚಳ?

ಮಾರ್ಚ್ ನಲ್ಲಿ ಐವತ್ತು ರುಪಾಯಿ ದರ ಏರಿಕೆ ಪ್ರಸ್ತಾವನೆಯನ್ನ ತಿರಸ್ಕರಿಸಿದ್ದ ಸರ್ಕಾರ, ಈಗ ಮತ್ತೊಮ್ಮೆ ಕೆಎಂಎಫ್ 74 ರೂ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದೆ. 2023ರ ಮಾರ್ಚ್‌ನಲ್ಲಿ 25ರೂ. ಹೆಚ್ಚಳ ಮಾಡಿದ್ದ ಕೆಎಂಎಫ್ ಇದೀಗ ಮತ್ತೆ ಹೆಚ್ಚಳ ಮಾಡಿದರೆ, ಐದು ತಿಂಗಳ ಅವಧಿಯಲ್ಲಿ ಎರಡು ಬಾರಿ ಹೆಚ್ಚಿಸಿದಂತಾಗುತ್ತದೆ. 25 ರೂಪಾಯಿ ಹಾಲಿನ ಪುಡಿದರ ಹೆಚ್ಚಳ ಮಾಡಿದಾಗ 700 ಕೋಟಿ ರೂಪಾಯಿಗೆ ಬಜೆಟ್ ಹೆಚ್ಚಳವಾಗಿತ್ತು. ಆದರೆ ಮತ್ತೊಮ್ಮೆ ಮಕ್ಕಳಿಗೆ ನೀಡುತ್ತಿರುವ ಹಾಲಿನ ಪುಡಿ ದರ ವನ್ನು ಹೆಚ್ವಳ ಮಾಡಿದ್ರೆ, ಮಕ್ಕಳಿಗೆ ನೀಡುವ ಹಾಲಿನ ಪ್ರಮಾಣ ಕಡಿಮೆ ಆಗಬಹುದು ಅಂತಿದ್ದಾರೆ ಪೋಷಕರು.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ