AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕ್ಷೀರ ಭಾಗ್ಯ’ ಯೋಜನೆಗೂ ದರ ಏರಿಕೆಯ ಬಿಸಿ!, ಹೆಚ್ಚುವರಿ 50 ಕೋಟಿ ರೂ. ಹೊರೆ?

ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಏರಿಕೆ ಬಿಸಿ ಶಾಲಾ ಮಕ್ಕಳಿಗೆ ನೀಡುವ ಹಾಲಿನ ಪುಡಿ ಕ್ಷೀರ ಭಾಗ್ಯ ಯೋಜನೆಗೂ ತಟ್ಟಿದೆ.

‘ಕ್ಷೀರ ಭಾಗ್ಯ' ಯೋಜನೆಗೂ ದರ ಏರಿಕೆಯ ಬಿಸಿ!, ಹೆಚ್ಚುವರಿ 50 ಕೋಟಿ ರೂ. ಹೊರೆ?
ಕ್ಷೀರ ಭಾಗ್ಯ
TV9 Web
| Edited By: |

Updated on: Aug 04, 2023 | 3:31 PM

Share

ಬೆಂಗಳೂರು, (ಆಗಸ್ಟ್ 04): ರಾಜ್ಯದಲ್ಲಿ ಒಂದು ಲೀಟರ್ ಹಾಲಿನ ಮೇಲೆ ಮೂರು ರುಪಾಯಿ ಅರ್ಧ ಲೀಟರ್ ಮೇಲೆ ಎರಡು ರುಪಾಯಿ ದರ ಏರಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಇದರಿಂದ ಕ್ಷೀರ ಭಾಗ್ಯ ಯೋಜನೆಗೂ ದರ ಏರಿಕೆಯ ಬಿಸಿ ತಟ್ಟಲಿದೆ. ಸದ್ಯ ಕೆಎಂಎಫ್ ಕ್ಷೀರ ಭಾಗ್ಯ ಯೋಜನೆಯ ಅಡಿಯಲ್ಲಿ ಸ್ಕೂಲ್ ಮಕ್ಕಳಿಗೆ ನೀಡುತ್ತಿರುವ ಒಂದು ಕೆಜಿ ಹಾಲಿನ ಪೌಡರ್ ಗೆ 300 ರುಪಾಯಿ ಇದ್ದು ಸದ್ಯ ಕೆಎಂಎಫ್ 74 ರುಪಾಯಿ ದರ ಹೆಚ್ಚಿಗೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಕ್ಷೀರಭಾಗ್ಯಕ್ಕೆ ಹೆಚ್ಚುವರಿ 50 ಕೋಟಿ ರೂ. ಹೊರೆ?

ಕ್ಷೀರ ಭಾಗ್ಯ ಯೋಜನೆಗೆ ಅಂದಾಜು ಹೆಚ್ಚುವರಿಯಾಗಿ 50 ಕೋಟಿ ರೂ. ಬೇಕಾಗಬಹುದು ‌ಎಂದು ಅಂದಾಜಿಸಲಾಗಿದೆ. ಈ ವರ್ಷದ ಮಾರ್ಚ್ ನಲ್ಲಿ ಕೆಎಂಎಫ್ ನಿಂದ ಹಾಲಿನ ಪುಡಿಯ ದರಕ್ಕೆ ಐವತ್ತು ರುಪಾಯಿ ದರ ಏರಿಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು ಆದರೆ ಅಂದಿನ ‌ಸರ್ಕಾರ 25 ರುಪಾಯಿ ‌ದರ ಏರಿಕೆ ಮಾಡಿತ್ತು ಈಗ ಮತ್ತೊಮ್ಮೆ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಲಾಗಿದ್ಯಂತೆ..

ಹಾಲಿನ ಪುಡಿಯ ದರವೂ ಹೆಚ್ಚಳ?

ಮಾರ್ಚ್ ನಲ್ಲಿ ಐವತ್ತು ರುಪಾಯಿ ದರ ಏರಿಕೆ ಪ್ರಸ್ತಾವನೆಯನ್ನ ತಿರಸ್ಕರಿಸಿದ್ದ ಸರ್ಕಾರ, ಈಗ ಮತ್ತೊಮ್ಮೆ ಕೆಎಂಎಫ್ 74 ರೂ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದೆ. 2023ರ ಮಾರ್ಚ್‌ನಲ್ಲಿ 25ರೂ. ಹೆಚ್ಚಳ ಮಾಡಿದ್ದ ಕೆಎಂಎಫ್ ಇದೀಗ ಮತ್ತೆ ಹೆಚ್ಚಳ ಮಾಡಿದರೆ, ಐದು ತಿಂಗಳ ಅವಧಿಯಲ್ಲಿ ಎರಡು ಬಾರಿ ಹೆಚ್ಚಿಸಿದಂತಾಗುತ್ತದೆ. 25 ರೂಪಾಯಿ ಹಾಲಿನ ಪುಡಿದರ ಹೆಚ್ಚಳ ಮಾಡಿದಾಗ 700 ಕೋಟಿ ರೂಪಾಯಿಗೆ ಬಜೆಟ್ ಹೆಚ್ಚಳವಾಗಿತ್ತು. ಆದರೆ ಮತ್ತೊಮ್ಮೆ ಮಕ್ಕಳಿಗೆ ನೀಡುತ್ತಿರುವ ಹಾಲಿನ ಪುಡಿ ದರ ವನ್ನು ಹೆಚ್ವಳ ಮಾಡಿದ್ರೆ, ಮಕ್ಕಳಿಗೆ ನೀಡುವ ಹಾಲಿನ ಪ್ರಮಾಣ ಕಡಿಮೆ ಆಗಬಹುದು ಅಂತಿದ್ದಾರೆ ಪೋಷಕರು.

Follow Us
Web contact
Web contact

TV9 Kannada

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?