AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವು ಆರ್ಡರ್​​ ಮಾಡಿದ್ದು ಮೈಸೂರು ಜಿಲ್ಲಾಧಿಕಾರಿ; ತಹಶೀಲ್ದಾರ್ ಅಲ್ಲ!

ಈ ಹಿಂದೆ ದೇಗುಲ ಬೀಳಿಸುವುದಕ್ಕೆ ಆರ್ಡರ್​​ ಮಾಡಿದ್ದು ನಂಜನಗೂಡು ತಹಶೀಲ್ದಾರ್ ಮೋಹನ್ ಕುಮಾರಿ ಎಂದು ಭಾವಿಸಿ, ಸರ್ಕಾರ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿರುವುದು ಸೋಜಿಗವಾಗಿದೆ. ಅಷ್ಟೇ ಅಲ್ಲ; ದೇವಸ್ಥಾನ ಬೀಳಿಸುವುದು ಬೇಡವೆಂದು, ಅದನ್ನು ಉಳಿಸಿಕೊಳ್ಳಲು ತಮ್ಮ ಮೇಲಾಧಿಕಾರಿಯಾದ ಮೈಸೂರು ಡಿಸಿಗೆ, ತಹಶೀಲ್ದಾರ್ ಪಾಸಿಟಿವ್ ರಿಪೋರ್ಟ್ ಸಹ ಕೊಟ್ಟಿದ್ದರು.

ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವು ಆರ್ಡರ್​​ ಮಾಡಿದ್ದು ಮೈಸೂರು ಜಿಲ್ಲಾಧಿಕಾರಿ; ತಹಶೀಲ್ದಾರ್ ಅಲ್ಲ!
ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವು ಆರ್ಡರ್​​ ಮಾಡಿದ್ದು ಮೈಸೂರು ಜಿಲ್ಲಾಧಿಕಾರಿ, ತಹಶೀಲ್ದಾರ್ ಅಲ್ಲ! (ಒಳ ಚಿತ್ರ: ತಹಶೀಲ್ದಾರ್ ಮೋಹನ್ ಕುಮಾರಿ )
TV9 Web
| Edited By: ಸಾಧು ಶ್ರೀನಾಥ್​|

Updated on:Sep 29, 2021 | 9:53 AM

Share

ಮೈಸೂರು: ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವು ವಿವಾದ ಹುತ್ತದೊಳಗಿನ ಹಾವಿನಂತೆ ಭುಸುಗುಡುತ್ತಲೇ ಇದೆ. ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ ದೇವಾಲಯ ಬೀಳಿಸುವ ಸರಕಾರೀ ಕಾರ್ಯಚರಣೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ನಂಜನಗೂಡು ಶಾಸಕ ಕೊಟ್ಟಿದ್ದಾರೆ. ಹುಚ್ಚಗಣಿ ದೇವಾಲಯ ತೆರವು ಮಾಡಲು ಡಿಸಿಯಿಂದಲೇ ಆರ್ಡರ್ ಆಗಿತ್ತು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಅಲ್ಲಿಗೆ ಈ ಹಿಂದೆ ದೇಗುಲ ಬೀಳಿಸುವುದಕ್ಕೆ ಆರ್ಡರ್​​ ಮಾಡಿದ್ದು ನಂಜನಗೂಡು ತಹಶೀಲ್ದಾರ್ ಮೋಹನ್ ಕುಮಾರಿ ಎಂದು ಭಾವಿಸಿ, ಸರ್ಕಾರ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿರುವುದು ಸೋಜಿಗವಾಗಿದೆ. ಅಷ್ಟೇ ಅಲ್ಲ; ದೇವಸ್ಥಾನ ಬೀಳಿಸುವುದು ಬೇಡವೆಂದು, ಅದನ್ನು ಉಳಿಸಿಕೊಳ್ಳಲು ತಮ್ಮ ಮೇಲಾಧಿಕಾರಿಯಾದ ಮೈಸೂರು ಡಿಸಿಗೆ, ತಹಶೀಲ್ದಾರ್ ಪಾಸಿಟಿವ್ ರಿಪೋರ್ಟ್ ಸಹ ಕೊಟ್ಟಿದ್ದರು.

ಅಷ್ಟೇ ಅಲ್ಲ; ತಹಶೀಲ್ದಾರ್ ಮೋಹನ್ ಕುಮಾರಿ ಅವರು ನೀಡಿದ್ದ ಪಾಸಿಟಿವ್ ರಿಪೋರ್ಟ್ ಕಂಡು ನೆಗೆಟೀವ್​ ಆದ ಜಿಲ್ಲಾಧಿಕಾರಿ ಯಾವ ಆಧಾರದ ಮೇಲೆ ದೇವಸ್ಥಾನ ಉಳಿಸುತ್ತಿರಾ? ಎಂದು ಪ್ರಶ್ನಿಸಿದ್ದರಂತೆ. ಈ ವಿಚಾರವನ್ನು ಸ್ಥಳೀಯ ಶಾಸಕ ಹರ್ಷವರ್ಧನ್ ಬಹಿರಂಗಪಡಿಸಿದ್ದಾರೆ.

ಆಗ ಜಿಲ್ಲಾಧಿಕಾರಿಯ ಈ ದಿಢೀರ್ ಪ್ರಶ್ನೆ ಕೇಳಿ ತಬ್ಬಿಬ್ಬಾದ ತಹಶೀಲ್ದಾರ್ ಬಳಿ ಉತ್ತರ ಇರಲಿಲ್ಲ! ಎಲ್ಲಾ ಕಡೆ ದೇವಸ್ಥಾನ ತೆರವು ಮಾಡಿದ್ದೀವಿ. ಮಹದೇವಮ್ಮ ದೇವಸ್ಥಾನಕ್ಕೂ ಸಂಬಂಧಿಸಿದ ಯಾವುದೇ ದಾಖಲಾತಿ ಇಲ್ಲ. ಆದ್ದರಿಂದ ದೇವಸ್ಥಾನ ತೆರವು ಮಾಡಬೇಕು ಎಂದು ಡಿಸಿ ಆರ್ಡರ್ ಮಾಡಿದ್ದಾರೆ!

ಪ್ರಕರಣದ ಬಗ್ಗೆ ಟಿವಿ9 ಜೊತೆ ಮಾತನಾಡಿದ ಶಾಸಕ ಹರ್ಷವರ್ಧನ್, ಠಾಣಾ ಹಾಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 13 ದೇವಸ್ಥಾನಗಳನ್ನು ಉಳಿಸಲಾಯಿತು. ಮಹದೇವಮ್ಮ ದೇವಸ್ಥಾನವನ್ನು ಉಳಿಸುವಂತೆ ತಹಶೀಲ್ದಾರ್ ಗೆ ರಿಪೋಟ್೯ ಕಳುಹಿಸಿದ್ದೆ. ಅದರಂತೆ ತಹಶೀಲ್ದಾರ್ ಅವರು ಡಿಸಿಗೆ ಪಾಸಿಟಿವ್ ರಿಪೋರ್ಟ್ ಕೊಟ್ಟಿದ್ದಾರೆ. ಆದರೆ, ಯಾವುದೇ ದಾಖಲಾತಿ ಇಲ್ಲದೇ ದೇವಸ್ಥಾನ ಹೇಗೆ ಉಳಿಸುತ್ತೀರಾ? ಎಂದು ಪ್ರಶ್ನಿಸಿ ದೇವಾಲಯ ತೆರವಿಗೆ ಡಿಸಿ ಆರ್ಡರ್ ಕೊಟ್ಟಿದ್ದಾರೆ. ತಹಶೀಲ್ದಾರ್ ಮೋಹನ್ ಕುಮಾರಿ ವರ್ಗಾವಣೆ ಮಾಡಿರುವುದಕ್ಕೆ ನನಗೂ ಬೇಸರವಿದೆ. ಈ ಸಂಬಂಧ ಸಿಎಂ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

(Nanjangud huchangi mahadevamma temple demolition order passed by mysore deputy commissioner)

Published On - 9:28 am, Wed, 29 September 21

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು