Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜನಗೂಡು ಕಾಡಂಚಿನ ಗ್ರಾಮಗಳಲ್ಲಿ ಹುಲಿ ಹಾವಳಿ, ಸ್ಥಳಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ ಶಾಸಕ ದರ್ಶನ್ ಧ್ರುವನಾರಾಯಣ

ನಂಜನಗೂಡು ಕಾಡಂಚಿನ ಗ್ರಾಮಗಳಲ್ಲಿ ಹುಲಿ ಹಾವಳಿ, ಸ್ಥಳಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ ಶಾಸಕ ದರ್ಶನ್ ಧ್ರುವನಾರಾಯಣ

ಅರುಣ್​ ಕುಮಾರ್​ ಬೆಳ್ಳಿ
|

Updated on:Nov 08, 2023 | 11:11 AM

ಬೇರೆ ಬೇರೆ ಗ್ರಾಮಗಳ ಜನರ ಜೊತೆ ಶಾಸಕ ಮಾತಾಡಿದರು ಮತ್ತು ಹುಲಿದಾಳಿಯಲ್ಲಿ ಪ್ರಾಣಿಗಳನ್ನು ಕಳೆದುಕೊಂಡ ಗ್ರಾಮಸ್ಥರಿಗೆ ಪರಿಹಾರ ಒದಗಿಸುವ ಭರವಸೆ ನೀಡಿದರು. ಬಳಿಕ ಅವರು ಸಂಬಂಧಪಟ್ಟ ಅರಣ್ಯಾಧಿಕಾರಿಗಳೊಂದಿಗೆ ಮಾತಾಡಿ ದೊಡ್ಡ ಅನಾಹುತಗಳು ಸಂಭವಿಸುವ ಮೊದಲು ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಾಕೀತು ಮಾಡಿದರು.

ಮೈಸೂರು: ಮೊದಲಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿರುವ ನಂಜನಗೂಡು ಕಾಂಗ್ರೆಸ್ ಶಾಸಕ ದರ್ಶನ್ ಧ್ರುವನಾರಾಯಣ (Darshan Dhruvanarayana) ತಮ್ಮ ಜವಾಬ್ದಾರಿಗಳನ್ನು ಚೆನ್ನಾಗಿ ಅರಿತುಕೊಂಡಂತಿದೆ. ನಂಜನಗೂಡು ತಾಲ್ಲೂಕಿನ (Nanjangud taluk) ಕಾಡಿನ ಅಂಚುಗಳಲ್ಲಿರುವ ಗ್ರಾಮಗಳಲ್ಲಿ ಇತ್ತೀಚಿಗೆ ಹುಲಿಗಳ ಹಾವಳಿ (tiger attacks) ಜಾಸ್ತಿಯಾಗಿದೆ. ಗ್ರಾಮಸ್ಥರು ತಮ್ಮ ಹಸು, ದನ ಮತ್ತು ಕುರಿಗಳನ್ನು ಮೇಯಿಸಲು ಹೊರವಲಯಕ್ಕೆ ಹೋದಾಗ ಹುಲಿಗಳು ಸಾಕು ಪ್ರಾಣಿಗಳ ಮೇಲೆ ಆಕ್ರಮಣ ನಡೆಸಿ ಕೊಂದು ತಿನ್ನುತ್ತಿವೆ. ಈ ಗ್ರಾಮಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿದ ದರ್ಶನ್ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. ಗ್ರಾಮಸ್ಥರೊಬ್ಬರು ಹೇಳಿದ ಹಾಗೆ ಕಾಡು ಕೇವಲ 10 ಕಿಮೀಗಳಷ್ಟು ಮಾತ್ರ ಇರೋದ್ರಿಂದ ಅತ್ತ ಕಡೆ ದನಕರುಗಳನ್ನು ಒಯ್ಯದಂತೆ ದರ್ಶನ್ ಜನರಿಗೆ ತಿಳಿಹೇಳಿದರು. ಬೇರೆ ಬೇರೆ ಗ್ರಾಮಗಳ ಜನರ ಜೊತೆ ಶಾಸಕ ಮಾತಾಡಿದರು ಮತ್ತು ಹುಲಿದಾಳಿಯಲ್ಲಿ ಪ್ರಾಣಿಗಳನ್ನು ಕಳೆದುಕೊಂಡ ಗ್ರಾಮಸ್ಥರಿಗೆ ಪರಿಹಾರ ಒದಗಿಸುವ ಭರವಸೆ ನೀಡಿದರು. ಬಳಿಕ ಅವರು ಸಂಬಂಧಪಟ್ಟ ಅರಣ್ಯಾಧಿಕಾರಿಗಳೊಂದಿಗೆ ಮಾತಾಡಿ ದೊಡ್ಡ ಅನಾಹುತಗಳು ಸಂಭವಿಸುವ ಮೊದಲು ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಾಕೀತು ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 08, 2023 11:10 AM